ಚಾಮರಾಜನಗರದ ಹನೂರ ಅಭಿವೃದ್ಧಿಗೆ ಪ್ಯಾಕೇಜ್ ರೂಪಿಸಲಾಗುವುದು: ಬೊಮ್ಮಾಯಿ
ಹನೂರು ತಾಲ್ಲೂಕಿನ ಅಭಿವೃದ್ಧಿಗೆ ಒಂದು ವಾರದೊಳಗೆ ವಿಶೇಷ ಪ್ಯಾಕೇಜ್ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಚಾಮರಾಜನಗರ, ಮಾರ್ಚ್ 01: ಹನೂರು ತಾಲ್ಲೂಕಿನ ಅಭಿವೃದ್ಧಿಗೆ ಒಂದು ವಾರದೊಳಗೆ ವಿಶೇಷ ಪ್ಯಾಕೇಜ್ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ಬುಧವಾರ ಜಿಲ್ಲೆಯ ಹನೂರಿನಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ವಿಜಯಸಂಕಲ್ಪ ರಥಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಹನೂರಿನ ಕುಡಿಯುವ ನೀರಿನ ಯೋಜನೆ 3ನೇ ಹಂತಕ್ಕೆ ಬರುವ ದಿನಗಳಲ್ಲಿ ಅನುಮೋದನೆ ನೀಡಲಾಗುವುದು. ರಾಜ್ಯ ಹೆದ್ದಾರಿ ನರೇಂದ್ರ ಮೋದಿ ಮತ್ತು ನಮ್ಮ ಸರ್ಕಾರದ ಕಾಣಿಕೆ. ಅವರ ಕಾಲದಲ್ಲಿ 6 ಸಾವಿರ ಕಿ.ಮೀ. ಹೆದ್ದಾರಿಯಾಗಿವೆ ಹಾಗೂ ರೈಲ್ವೇ ಯೋಜನೆಗಳಾಗಿವೆ. ಅಭಿವೃದ್ಧಿಯ ಪಥದಲ್ಲಿ ದೇಶ ನಡೆಯುತ್ತಿದ್ದು, ವಿಶ್ವದಲ್ಲಿ ಭಾರತಕ್ಕೆ ದೊಡ್ಡ ಸ್ಥಾನ ದೊರೆತಿದೆ. ಯಡಿಯೂರಪ್ಪ ಅವರು ಕರ್ನಾಟಕವನ್ನು ಕಟ್ಟುವ ಕೆಲಸವನ್ನು ಮಾಡಿದ್ದಾರೆ. ನವ ಕರ್ನಾಟದಿಂದ ನವ ಭಾರತವನ್ನು ನಿರ್ಮಾಣ ಮಾಡೋಣ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾರ್ಯಕ್ರಮಗಳು ಮುಂದುವರೆಯಬೇಕಾದರೆ, ದೀನದಲಿತರು, ಬಡವರು ಉದ್ಧಾರವಾಗಬೇಕಾದರೆ ಬಿಜೆಪಿ ಅನ್ನು ಕರ್ನಾಟಕದಲ್ಲಿ ಸಂಪೂರ್ಣ ಬಹುಮತದೊಂದಿಗೆ ತಂದು ಮತ್ತೊಮ್ಮೆ ಜನಪರವಾದ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದು ಕರೆ ನೀಡಿದರು.
ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯಬೇಕು: ಸಿಎಂ
ಈ ಹನೂರು ಕ್ಷೇತ್ರ ಹಿಂದೆಯೇ ಅಭಿವೃದ್ಧಿಯಾಗಬೇಕಿತ್ತು. ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿಗೆ ಈ ಭಾಗದಿಂದ ಆಯ್ಕೆಯಾಗಿದ್ದ ಮುಖ್ಯಮಂತ್ರಿಗಳ ಕಾಣಿಕೆ ಏನು? ಎಂದು ಪ್ರಶ್ನಿಸಿದ ಅವರು ಈ ಭಾಗಕ್ಕೆ ವೈದ್ಯಕೀಯ ಕಾಲೇಜನ್ನು ಮಂಜೂರು ಮಾಡಿದ್ದು ಬಿಜೆಪಿ ಸರ್ಕಾರ. ಗಡಿಯಂಚಿನ ಜನರ ದುಸ್ಥಿತಿಯನ್ನು ನೋಡಿದಾಗ 60 ವರ್ಷ ಏನು ಆಡಳಿತ ಮಾಡಿದ್ದಾರೆ ಎಂದು ತಿಳಿಯುತ್ತದೆ. ಬಡವರನ್ನು ಬಡವರನ್ನಾಗಿ ಇಟ್ಟು ಮತ ಬ್ಯಾಂಕ್ಗಳನ್ನಾಗಿ ಮಾಡಿಕೊಂಡಿದ್ದರು. ಭ್ರಷ್ಟಾಚಾರದ ಗಂಗೋತ್ರಿ ಕಾಂಗ್ರೆಸ್. ನೀರಾವರಿ, ಹಾಸ್ಟಲ್, ಬಿಡಿಎ ನಲ್ಲಿ ಭ್ರಷ್ಟಾಚಾರ ಮಾಡಿದರು. ಚಾಮರಾಜನಗರದಲ್ಲಿ ಮಾತ್ರ ಕಾಂಗ್ರೆಸ್ ಉಳಿದುಕೊಂಡಿದ್ದು, ಇಲ್ಲಿ ಕಾಂಗ್ರೆಸ್ ಬೇರು ಸಮೇತ ಕಿತ್ತೊಗೆದು ಕಮಲವನ್ನು ಅರಳಿಸಬೇಕು ಎಂದು ತಿಳಿಸಿದರು.

ಜನಪರ ಯೋಜನೆ:ದುಡಿಮೆಗೆ ಮಹತ್ವ
ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರೈತ ವಿದ್ಯಾನಿಧಿ, ಸ್ತ್ರೀ ಸಾಮರ್ಥ್ಯ ಯೋಜನೆ, ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ, ಕೂಲಿ ಮಾಡುವ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ಒಂದು ಸಾವಿರ ಒದಗಿಸುವ ಯೋಜನೆಯನ್ನು ಈ ಬಾರಿಯ ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. ಪಿಯುಸಿ, ಪದವಿ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ. ದೀನ ದಲಿತರಿಗೆ ಮೀಸಲಾತಿಯನ್ನು ಹೆಚ್ಚಿಸಲಾಗಿದೆ. ಸಮಾಜದ ಎಲ್ಲಾ ವರ್ಗಗಳಿಗೆ ಬೆಂಬಲ ನೀಡಲಾಗಿದೆ. ದುಡಿಮೆಗೆ ಹೆಚ್ಚಿನ ಮಹತ್ವವನ್ನು ನೀಡಲಾಗಿದೆ ಎಂದು ಬೊಮ್ಮಾಯಿ ವಿವರಿಸಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications