ಹೊಸ ಉದ್ಯಮಗಳಿಗೆ ಸರ್ಕಾರ ಸೌಲಭ್ಯ ಒದಗಿಸಲಿದೆ: ಮುರುಗೇಶ ನಿರಾಣಿ
ಬೆಂಗಳೂರು, ಡಿಸೆಂಬರ್ 16: ಕರ್ನಾಟಕದಲ್ಲಿ ಉದ್ಯೋಗ ಸೃಷ್ಟಿ ಹೆಚ್ಚುತ್ತಿದ್ದು, ಹೊಸ ಉದ್ಯಮಗಳಿಗೆ ನೇರವಾಗಿ ಸರ್ಕಾರದ ಸೌಲಭ್ಯಗಳು ಸಿಗುವಂತೆ ಮಾಡಲು ಆದಷ್ಟು ಶೀಘ್ರವೇ ಅಗತ್ಯ ಯೋಜನೆ ರೂಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ ನಿರಾಣಿ ಹೇಳಿದರು.
ದೊಡ್ಡ ಸಂಸ್ಥೆಯಾದ ಫೆಡರೇಶನ್ ಆಫ್ ಇಂಡಿಯಾ (ಎಫ್ಐಐ) ದಕ್ಷಿಣ ಭಾರತದಲ್ಲಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ತನ್ನ ಕಚೇರಿ ತೆರೆದಿದೆ. ಅದನ್ನು ಶುಕ್ರವಾರ ಸಚಿವ ಮುರುಗೇಶ ನಿರಾಣಿ ಉದ್ಘಾಟಿಸಿ ಮಾತನಾಡಿದರು.
ಬೃಹತ್ ಸಂಸ್ಥೆಯಾಗಿರುವ ಫೆಡರೇಶನ್ ಆಫ್ ಇಂಡಿಯಾ (ಎಫ್ಐಐ) ದಕ್ಷಿಣ ಭಾರತದಲ್ಲೂ ತನ್ನ ಒಕ್ಕೂಟವನ್ನು ಮತ್ತಷ್ಟು ಬಲಗೊಳಿಸುತ್ತಿರುವುದು ಸಂತೋಷದ ವಿಚಾರವಾಗಿದೆ. ಇದೇ ರೀತಿ ರಾಜ್ಯದಲ್ಲಿ ನೂತನ ಉದ್ಯಮ ಹಾಗೂ ಉದ್ಯಮಿಗಳನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರ ಅಗತ್ಯ ಸಹಕಾರ ನೀಡುತ್ತಿದೆ. ಇದರಿಂದ ವೇಗವಾಗಿ ಹೊಸ ಹೊಸ ಉದ್ಯಮಗಳು ಹೆಚ್ಚಲು ನೆರವಾಗುತ್ತದೆ ಎಂದು ಅವರು ತಿಳಿಸಿದರು.

ಪ್ರವಾಸೋದ್ಯಮಕ್ಕೆ ಅನುಕೂಲ
ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶೈಲೇಂದ್ರ ಬೆಲ್ದಾಳೆ ಮಾತನಾಡಿ, ರಾಜ್ಯದಲ್ಲಿ ಹೊಸದಾಗಿ 14 ವಿಮಾನ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಜಿಲ್ಲಾ ವಿಮಾನ ನಿಲ್ದಾಣಗಳನ್ನು ಅಭಿವೃದ್ದಿ ಪಡಿಸಲಾಗುತ್ತಿದೆ. ಪ್ರವಾಸೋದ್ಯಮ ಅಭಿವೃದ್ಧಿಗೆ ಇದು ಅನುಕೂಲ ಆಗಲಿದೆ ಎಂದರು.
ಡಾ.ಶಾಲಿನಿ ನಲ್ವಾಡ್ ಅವರು 'ಎಫ್ಐಐ-ಟಿಎಂಎ' ಇದರ ಉಪಾಧ್ಯಕ್ಷರಾಗಿ ಮತ್ತು ಭಾರತದ ಪ್ರಾದೇಶಿಕ ಕಚೇರಿಗಳ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಮತ್ತು ಅವರೊಂದಿಗೆ ಪ್ರಾದೇಶಿಕ ನಿರ್ದೇಶಕರಾಗಿ ನಿರ್ಮಲಾ ಪರಬ್ ಸಹ ನೇಮಕಗೊಂಡಿದ್ದಾರೆ.
ಎಫ್ಐಐ-ಟಿಎಂಎ ಅಧ್ಯಕ್ಷ ಬಾಲಚಂದ್ರ ಸಿನ್ಹ್ ರಾವ್ ರಾಣೆ ಮತ್ತು ಐಕ್ಯಾಟ್ ಏರ್ ಆಂಬ್ಯುಲೆನ್ಸ್ ಸೇವೆಗಳ ಸಹ ಸಂಸ್ಥಾಪಕಿ, ನಿರ್ದೇಶಕಿ ಮತ್ತು ಐಕ್ಯಾಟ್ ಫೌಂಡೇಶನ್ನ ಅಧ್ಯಕ್ಷರಾದ ಡಾ.ಶಾಲಿನಿ ನಲ್ವಾಡ್, ಬ್ರಿಟಿಷ್ ಡೆಪ್ಯುಟಿ ಹೈಕಮಿಶನ್ ಉಪ ಮುಖ್ಯಸ್ಥ ಜೇಮ್ಸ್ ಗಡ್ಬರ್ ಉಪಸ್ಥಿತರಿದ್ದರು.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು












Click it and Unblock the Notifications