ವಿವಿಗಳ ಅಭಿವೃದ್ಧಿ: ಶಿಕ್ಷಣ ಮಂಡಲದ ಪ್ರಾಧಿಕಾರಿಗಳ ಜತೆ ಡಿಸಿಎಂ ಚರ್ಚೆ
ಬೆಂಗಳೂರು, ಅ. 21: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಮತ್ತಷ್ಟು ಪಾರದರ್ಶಕತೆಯನ್ನು ತರಲು ಸರ್ಕಾರ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಹೇಳಿಕೆ ಕೊಟ್ಟಿದ್ದಾರೆ. ಅದಕ್ಕಾಗಿ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿರುವ ಎಲ್ಲ ಅಂಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದಿದ್ದರೆ.
ಭಾರತೀಯ ಶಿಕ್ಷಣ ಮಂಡಲದ ಕರ್ನಾಟಕ ಉತ್ತರ ಪ್ರಾಂತ ಹಾಗೂ ಬೆಳಗಾವಿಯ ರಾಣಿ ಚನ್ನಮ್ಮ ವಿವಿ ವತಿಯಿಂದ ಬುಧವಾರ ಏರ್ಪಡಿಸಲಾಗಿದ್ದ 'ವಿಶ್ವವಿದ್ಯಾಲಯಗಳ ಏಳಿಗೆಯಲ್ಲಿ ಪ್ರಾಧಿಕಾರಿಗಳ ಪಾತ್ರ' ವಿಷಯ ಕುರಿತ ಅನ್ಲೈನ್ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದರು. ಶಿಕ್ಷಣ ವ್ಯವಸ್ಥೆಯನ್ನು ಉನ್ನತಿಯತ್ತ ಕೊಡೊಯ್ಯಬೇಕಾದರೆ ನಾನು ಎನ್ನುವುದನ್ನು ಬಿಟ್ಟು ನಾವು ಎಂಬ ವಿಶಾಲ ತತ್ತ್ವದೊಂದಿಗೆ ಸಾಗಬೇಕು. ಆಗ ಮಾತ್ರ ಉತ್ತಮ ಫಲಿತಾಂಶ ಸಾಧಿಸಲು ಸಾಧ್ಯವಾಗುತ್ತದೆ. ವಿಶಾಲ ತಳಹದಿಯ ಮೇಲೆ ಕೆಲಸ ಮಾಡುತ್ತಿರುವ ಎಲ್ಲ ವಿವಿಗಳಲ್ಲಿ ಇಂಥ ನಡವಳಿಕೆಯಿಂದ ಮಾತ್ರ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ದೊಡ್ಡ ಕಾಣಿಕೆ
ಶೈಕ್ಷಣಿಕವಾಗಿ ನಮ್ಮ ಸರಕಾರವು ಕಳೆದ ಒಂದು ವರ್ಷದಲ್ಲಿ ಅನೇಕ ದಿಟ್ಟಹೆಜ್ಜೆಗಳನ್ನು ಇಟ್ಟಿದೆ. ಆದ್ಯತೆಯ ಮೇರೆಗೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುತ್ತಿದೆ. ಎಲ್ಲ ದೃಷ್ಟಿಕೋನದಲ್ಲಿ ನೋಡಿದರೂ ಕರ್ನಾಟಕಕ್ಕೆ ಈ ನೀತಿ ದೊಡ್ಡ ಕಾಣಿಕೆ ನೀಡಲಿದೆ ಎಂದು ಡಾ. ಅಶ್ವಥ್ ನಾರಾಯಣ ಹೇಳಿದರು.

ಆಡಳಿತಾತ್ಮಕ ಬದಲಾವಣೆ
ಆ ಹಿನ್ನೆಲೆಯಲ್ಲಿ ಸರಕಾರವು ಶಿಕ್ಷಣ ನೀತಿಯನ್ನು ಅತ್ಯಂತ ಬದ್ಧತೆಯಿಂದ ಜಾರಿ ಮಾಡಲು ಮುಂದಾಗಿದೆ. ಈಗಾಗಲೇ ನೀತಿಯ ಜಾರಿಗೆ ಬೇಕಾದ ಕಾನೂನಾತ್ಮಕ-ಆಡಳಿತಾತ್ಮಕ ಬದಲಾವಣೆಗಳನ್ನು ಮಾಡಲಾಗುತ್ತಿದೆ. 2021ರ ಹೊತ್ತಿಗೆ ನೀತಿಯ ಜಾರಿ ಹಂತಹಂತವಾಗಿ ಆರಂಭವಾಗುತ್ತದೆ ಎಂದು ಅಶ್ವಥ್ ನಾರಾಯಣ ಹೇಳಿದರು.

ಪರಿಣಾಮಕಾರಿ ಕೆಲಸ
ವಿವಿಗಳ ಮಟ್ಟದಲ್ಲಿ ಪ್ರಾಧಿಕಾರಿಗಳ ಪಾತ್ರ ಬಹುಮುಖ್ಯವಾದದ್ದು. ಅದರಲ್ಲೂ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ಅತ್ಯಂತ ಜವಾಬ್ದಾರಿಯಂದ ಕೆಲಸ ಮಾಡಬೇಕಾಗುತ್ತದೆ. ಆ ನೀತಿಯ ಆಶಯಕ್ಕೆ ತಕ್ಕಂತೆ ಹೆಜ್ಜೆಗಳನ್ನು ಇಡಬೇಕಾಗುತ್ತದೆ ಎಂದು ಡಿಸಿಎಂ ಹೇಳಿದರು.
Recommended Video

ಭಾರತವನ್ನು ಬದಲಿಸುವ ಶಕ್ತಿಯಿದೆ
ಮುಂದಿನ ಕೆಲ ವರ್ಷಗಳಲ್ಲಿ ಭಾರತವನ್ನು ಎಲ್ಲ ರೀತಿಯಲ್ಲೂ ಬದಲಿಸುವ ಶಕ್ತಿ ಶಿಕ್ಷಣ ನೀತಿಗೆ ಇದೆ. ಸಾಮಾಜಿಕ, ಆರ್ಥಿಕ ಬದಲಾವಣೆಗಳಿಗೆ ಕಾರಣವಾಗಲಿದೆ. ಹೀಗಾಗಿ ನೀತಿಯ ಜಾರಿಯಲ್ಲಿ ನಾವೆಲ್ಲರೂ ಯೋಧರಂತೆ ಕೆಲಸ ಮಾಡಬೇಕು. ಮುಖ್ಯವಾಗಿ ಸಿಂಡಿಕೇಟ್ ಮತ್ತು ಅಕಾಡೆಮಿಕ್ ಕೌನ್ಸಿಲ್ಗಳು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಡಾ. ಅಶ್ವಥ್ ನಾರಾಯಣ ಅವರು ವಿವಿ ಆಡಳಿತಗಳಿಗೆ ತಾಕೀತು ಮಾಡಿದರು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications