ಗೌರಿ ಗಣೇಶ ಹಬ್ಬ: KSRTC ಮಹತ್ವದ ಪ್ರಕಟಣೆ
ಬೆಂಗಳೂರು, ಆಗಸ್ಟ್ 28: 2019ರ ಸಾಲಿನ ಗೌರಿ ಗಣೇಶ ಹಬ್ಬ ವಾರಾಂತ್ಯದಲ್ಲಿ ಬಂದಿದ್ದು, ಇದೇ ಭಾನುವಾರ ಮತ್ತು ಸೋಮವಾರದಂದು ( ಸೆ1 ಮತ್ತು 2) ಆಚರಿಸಲಾಗುತ್ತಿದೆ.
ರಾಜಧಾನಿಯಿಂದ ಊರಿಗೆ ತೆರಳುವವರ ಪ್ರಯಾಣಿಕರ ಸಂಖ್ಯೆಯಲ್ಲಿ ವಿಪರೀತ ದಟ್ಟಣೆ ಇರುವುದರಿಂದ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಪ್ರಯಾಣಿಕರ ಅನುಕೂಲಕ್ಕಾಗಿ ಹಲವು ಹೆಚ್ಚುವರಿ ಬಸ್ ವ್ಯವಸ್ಥೆಯನ್ನು ಮಾಡಿದೆ.
ಆಗಸ್ಟ್ 30 ಮತ್ತು 31ರಂದು ಸುಮಾರು 1,800ಕ್ಕೂ ಹೆಚ್ಚು ಬಸ್ಸುಗಳು ಬೆಂಗಳೂರಿನಿಂದ ಹೊರಡಲಿದೆ. ಆಯಾಯ ಊರುಗಳಿಗೆ ಹೋಗಲು ಅನುಕೂಲವಾಗುವಂತೆ, ಮೆಜಿಸ್ಟಿಕ್ ಕೇಂದ್ರ ಬಸ್ ನಿಲ್ದಾಣ, ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣ, ಮೈಸೂರು ರಸ್ತೆಯ ಸ್ಯಾಟಿಲೈಟ್ ಮತ್ತು ಕೆ ಎಚ್ ರಸ್ತೆಯ (ಡಬಲ್ ರೋಡ್) ಶಾಂತಿ ನಗರ ಬಸ್ ನಿಲ್ದಾಣದಿಂದ ಹೆಚ್ಚುವರಿ ಬಸ್ಸುಗಳು ಹೊರಡಲಿದೆ.

ಮೆಜಿಸ್ಟಿಕ್ ಬಸ್ ನಿಲ್ದಾಣದಿಂದ - ಧರ್ಮಸ್ಥಳ, ಕುಕ್ಕೇ ಸುಬ್ರಮಣ್ಯ, ಮಂಗಳೂರು, ಉಡುಪಿ, ಕುಂದಾಪುರ, ಶಿವಮೊಗ್ಗ, ಚಿಕ್ಕಮಗಳೂರು, ಕಲಬುರಗಿ, ಬೀದರ್, ಕೊಪ್ಪಳ, ರಾಯಚೂರು, ವಿಜಯಪುರ, ಶೃಂಗೇರಿ, ಹೊರನಾಡು, ಕಾರವಾರ ಮುಂತಾದ ಕಡೆಗೆ.
ಮೈಸೂರು ರಸ್ತೆ ನಿಲ್ದಾಣದಿಂದ - ಮಡಿಕೇರಿ, ಕುಶಾಲನಗರ, ವಿರಾಜಪೇಟೆ, ಹುಣಸೂರು, ಮೈಸೂರು ಮುಂತಾದ ಕಡೆಗೆ.
ಪೀಣ್ಯ ಬಸ್ ನಿಲ್ದಾಣದಿಂದ - ದಾವಣಗೆರೆ, ಬಳ್ಳಾರಿ, ಹುಬ್ಬಳ್ಳಿ, ಧಾರವಾಡ ಸೇರಿದಂತೆ ಉತ್ತರ ಕರ್ನಾಟಕ ಭಾಗಕ್ಕೆ..
ಶಾಂತಿ ನಗರ ಬಸ್ ನಿಲ್ದಾಣದಿಂದ - ತಮಿಳುನಾಡು ಮತ್ತು ಆಂಧ್ರ ಪ್ರದೇಶದ ವಿವಿದೆಡೆ ಹೆಚ್ಚುವರಿ ಬಸ್ಸುಗಳು ಹೊರಡಲಿದೆ ಎಂದು ಕೆಎಸ್ಆರ್ಟಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಇದರ ಜೊತೆಗೆ, ಜಯನಗರ, ವಿಜಯನಗರ, ಕೆಂಗೇರಿ ಮತ್ತು ಬನಶಂಕರಿ ಟರ್ಮಿನಲ್ ಗಳಿಂದಲೂ ಹೆಚ್ಚುವರಿ ಬಸ್ಸುಗಳು ಆ ಎರಡು ದಿನಗಳಲ್ಲಿ ಹೊರಡಲಿದೆ. ಹೋಗಿ ಬರುವ ಟಿಕೆಟ್ ಅನ್ನು ಒಮ್ಮೆಲೇ ಕಾಯ್ದಿರಿಸಿದರೆ ಶೇ. 10ರಷ್ಟು ರಿಯಾಯತಿ ಸಿಗಲಿದೆ ಎಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಪ್ರಕಟಣೆಯಲ್ಲಿ ಹೇಳಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications