ಕರ್ನಾಟಕ ಗ್ರಾ.ಪಂ ಚುನಾವಣಾ ಫಲಿತಾಂಶ 2020: ಡಿ.30 ರಂದು ಮತ ಎಣಿಕೆ
ಬೆಂಗಳೂರು, ಡಿಸೆಂಬರ್ 29: ಗ್ರಾಮ ಪಂಚಾಯತಿಗಳ ಚುನಾವಣೆಯ ಎರಡು ಹಂತದ ಮತದಾನ ರಾಜ್ಯದಲ್ಲಿ ಮುಕ್ತಾಯಗೊಂಡಿದ್ದು, ಮತ ಎಣಿಕೆಯು ಬುಧವಾರ (ಡಿ.30) ರಂದು ನಡೆಯಲಿದೆ. ಫಲಿತಾಂಶಗಳು ರಾಜ್ಯ ಚುನಾವಣಾ ಆಯೋಗದ ಅಧಿಕೃತ ವೆಬ್ಸೈಟ್ನಲ್ಲಿ ಲಭ್ಯವಿರುತ್ತವೆ. karsec.gov.in ಮತ್ತು ceokarnataka.kar.nic.in. ನಲ್ಲಿ ನೋಡಬಹುದು.
ಮತ ಎಣಿಕೆಯು ಬುಧವಾರ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಲಿದ್ದು, ಎಣಿಕೆ ಪ್ರಾರಂಭವಾದ ತಕ್ಷಣ ಆರಂಭಿಕ ಮುನ್ನಡೆಗಳು ಬರಲಾರಂಭಿಸುತ್ತವೆ. ಆದರೆ ಅಂತಿಮ ಫಲಿತಾಂಶ ದಿನದ ಅಂತ್ಯದ ವೇಳೆಗೆ ಸ್ಪಷ್ಟವಾಗುತ್ತವೆ ಎಂದು ಹೇಳಲಾಗಿದೆ.
ಡಿ.22 ರಂದು ಪ್ರಾರಂಭವಾದ ಮೊದಲ ಹಂತದ ಮತದಾನ, ಭಾನುವಾರ ನಡೆದ ಎರಡನೆ ಹಂತದ ಮತದಾನದೊಂದಿಗೆ ಚುನಾವಣೆ ಮುಕ್ತಾಯಗೊಂಡಿದೆ. ಮೊದಲ ಹಂತದಲ್ಲಿ ಶೇ.80 ರಷ್ಟು ಮತದಾನ ದಾಖಲಾಗಿದ್ದರೆ, ಭಾನುವಾರ ನಡೆದ ಎರಡನೇ ಹಂತದಲ್ಲಿ ಈ ಸಂಖ್ಯೆ 80.71 ಕ್ಕೆ ಏರಿದೆ.

ಮೊದಲ ಹಂತದ ಮತದಾನದಲ್ಲಿ 117 ತಾಲ್ಲೂಕುಗಳಲ್ಲಿ 3,000 ಕ್ಕೂ ಹೆಚ್ಚು ಗ್ರಾಮ ಪಂಚಾಯತಿಗಳು ಮತದಾನ ಮಾಡಿದ್ದವು. ಎರಡನೇ ಹಂತದಲ್ಲಿ 109 ತಾಲ್ಲೂಕುಗಳಲ್ಲಿ 2,709 ಪಂಚಾಯಿತಿಗಳಿಗೆ ಮತದಾನ ನಡೆದಿತ್ತು. ಎರಡೂ ಹಂತಗಳಲ್ಲಿ 72,616 ಸ್ಥಾನಗಳಿಗೆ 2,22,814 ಅಭ್ಯರ್ಥಿಗಳು ಕಣದಲ್ಲಿದ್ದರು. ಈಗಾಗಲೇ 8,074 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನ.30 ರಂದು ಗ್ರಾ.ಪಂ ಚುನಾವಣೆಯನ್ನು ಘೋಷಿಸಲಾಗಿತ್ತು. ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ ರಾಜ್ಯ ಚುನಾವಣಾ ಆಯುಕ್ತ ಬಿ.ಬಸವರಾಜು ಅವರು, ಪ್ರಸ್ತುತ ಕೊರೊನಾ ವೈರಸ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಎರಡು ಹಂತಗಳಲ್ಲಿ ಮತದಾನ ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು.
6,004 ಗ್ರಾಮ ಪಂಚಾಯಿತಿಗಳಲ್ಲಿ 5,762 ಪಂಚಾಯತಿಗಳಿಗೆ ಮಾತ್ರ ಚುನಾವಣೆ ಘೋಷಿಸಲಾಯಿತು. 242 ಪಂಚಾಯಿತಿಗಳ ಚುನಾವಣೆ ವಿವಿಧ ಕಾರಣಗಳಿಂದ ನಡೆಯಲಿಲ್ಲ. ಆಯೋಗವು ಬೀದರ್ ಜಿಲ್ಲೆಯಲ್ಲಿ ಇವಿಎಂಗಳನ್ನು ಬಳಸಿದರೆ, ಇತರ ಸ್ಥಳಗಳಲ್ಲಿ ಮತದಾನಕ್ಕಾಗಿ ಮತಪತ್ರಗಳನ್ನು ಬಳಸಲಾಯಿತು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications