Grama Panchayat; ಸಿಬ್ಬಂದಿ ವೇತನ, ಭತ್ಯೆ ಮಹತ್ವದ ಮಾಹಿತಿ
ಬೆಂಗಳೂರು, ಫೆಬ್ರವರಿ 19; ಕರ್ನಾಟಕ ಸರ್ಕಾರ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಸಿಹಿಸುದ್ದಿ ನೀಡಿದೆ. ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಗ್ರಂಥಾಲಯ ಮೇಲ್ವಿಚಾರಕರಿಗೆ ಮಾಸಿಕ ಕನಿಷ್ಠ ವೇತನ ಮತ್ತು ವ್ಯತ್ಯಾಸವಾಗುವ ತುಟ್ಟಿ ಭತ್ಯೆಯನ್ನು (VDA) ಪಾವತಿಸುವ ಬಗ್ಗೆ ಆದೇಶವೊಂದನ್ನು ಹೊರಡಿಸಿದೆ.
ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಉಮಾ ಮಹಾದೇವನ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ (ಪಂ.ರಾಜ್) ಗ್ರಾಮೀಣಾಭಿವೃದ್ಧಿ ಮತ್ತು ಪಂ. ರಾಜ್ ಇಲಾಖೆ ಆದೇಶವನ್ನು ಹೊರಡಿಸಿದ್ದಾರೆ.

ಸರ್ಕಾರದ ಆದೇಶದಲ್ಲಿ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರಿಗೆ ರೂ. 15,196.72 ಗಳ ಮಾಸಿಕ ಕನಿಷ್ಠ ವೇತನ ಪಾವತಿಸುವುದು, ಕನಿಷ್ಠ ವೇತನದ ಜೊತೆಗೆ ಕಾರ್ಮಿಕ ಇಲಾಖೆಯು ಕಾಲಕಾಲಕ್ಕೆ ನಿಗದಿಪಡಿಸುವ ವ್ಯತ್ಯಯವಾಗುವ ತುಟ್ಟಿ ಭತ್ಯೆಯನ್ನು (VDA) ಪಾವತಿಸುವುದು, ಗ್ರಂಥಾಲಯ ಉಪಕರವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಉಳಿಸಿಕೊಂಡು, ಗ್ರಂಥಾಲಯ ಮೇಲ್ವಿಚಾರಕರ ವೇತನ ಹೆಚ್ಚಳದಿಂದಾಗುವ ಮೊತ್ತವನ್ನು ಉಪಕರದದಲ್ಲಿ ಭರಿಸಲು ಆದೇಶಿಸಲಾಗಿದೆ.
ಆದೇಶದ ವಿವರ; ಕಾರ್ಮಿಕ ಇಲಾಖೆಯು ಸರ್ಕಾರದ ಅಧಿಸೂಚನೆ ದಿನಾಂಕ 28/07/2022ರಲ್ಲಿ ಪರಿಷ್ಕರಿಸಿ ಹೊರಡಿಸಿರುವ ಅಧಿಸೂಚನೆಯಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳನ್ನು ಸೇರ್ಪಡೆಗೊಳಿಸಿ ರೂ. 16,382.52 ಗಳ ಕನಿಷ್ಠ ವೇತನವನ್ನು ನಿಗದಿಪಡಿಸಲಾಗಿದೆ ಎಂದು ಹೇಳಿದೆ.
ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಗ್ರಂಥಾಲಯ ಮೇಲ್ವಿಚಾರಕರಿಗೆ ಮಾಸಿಕ ಕನಿಷ್ಠ ವೇತನ ರೂ. 16,382.52 ಗಳನ್ನು ಮತ್ತು ವ್ಯತ್ಯಾಸವಾಗುವ ತುಟ್ಟಿ ಭತ್ಯೆಯನ್ನು (VDA) ಪಾವತಿಸಲು ಹಾಗೂ ಗ್ರಂಥಾಲಯ ಉಪಕರವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಉಳಿಸಿಕೊಂಡು, ವ್ಯತ್ಯಾಸವಾಗುವ ಕನಿಷ, ವೇತನ ಮತ್ತು ವ್ಯತ್ಯಾಸವಾಗುವ ತುಟ್ಟಿ ಭತ್ಯೆಯನ್ನು (VDA) ವಾವತಿಸಲು ಸರ್ಕಾರವು ನಿರ್ಣಯಿಸಿದೆ.
ಅದರಂತ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಗ್ರಂಥಾಲಯ ಮೇಲ್ವಿಚಾರಕರಿಗೆ ದಿನಾಂಕ 04/09/2023ರಿಂದ ಜಾರಿಗೆ ಬರುವಂತೆ ಮಾಸಿಕ ಕನಿಷ್ಠ ವೇತನ ರೂ. 16,38252 ಗಳು ಮತ್ತು ವಾರ್ಷಿಕವಾಗಿ ವ್ಯತ್ಯಾಸವಾಗುವ ತುಟ್ಟಿ ಭತ್ಯೆಯನ್ನು (VDA) ಪಾವತಿಸಲು ಆದೇಶಿಸಿದೆ. ಗ್ರಂಥಾಲಯ ಉಪಕರವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಉಳಿಸಿಕೊಂಡು, ವ್ಯತ್ಯಾಸವಾಗುವ ಕನಿಷ್ಠ ವೇತನ ಮತ್ತು ವ್ಯತ್ಯಾಸವಾಗುವ ತುಟ್ಟಿ ಭತ್ಯೆಯನ್ನು (VDA)ಪಾವತಿಸುವುದು ಎಂದು ಹೇಳಿದೆ.
ಮುಂದುವರೆದು 2023 24ನೇ ಸಾಲಿಗೆ ಗ್ರಂಥಾಲಯ ಮೇಲ್ವಿಚಾರಕರಿಗೆ ಮಾಸಿಕ ಕನಿಷ್ಠ ವೇತನ ರೂ. 16,382.52 ಗಳು ಮತ್ತು ವ್ಯಾಸವಾಗುವ ತುಟ್ಟಿ ಭತ್ಯೆ (VDA) ರೂ. 1542 ಗಳು ಸೇರಿ ಒಟ್ಟು 17,924.52 ರೂ.ಗಳನ್ನು ಪಾವತಿಸಲು ಆದೇಶಿಸಿದೆ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications