Get Updates
Get notified of breaking news, exclusive insights, and must-see stories!

Winter Session: ಗ್ರಾಮ ಪಂಚಾಯಿತಿಗಳಲ್ಲಿ ಬಾಕಿ ವೇತನ ಪಾವತಿ ಬಗ್ಗೆ ಸರ್ಕಾರ ಮಾಹಿತಿ

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಬಾಕಿ ವೇತನ ಪಾವತಿ ಬಗ್ಗೆ ಮಹತ್ವದ ಚರ್ಚೆಯಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಉತ್ತರ ನೀಡುವಾಗ ಗ್ರಾಮ ಪಂಚಾಯಿತಿಗಳಲ್ಲಿ ವೇತನ ಪಾವತಿ ವಿಳಂಬಕ್ಕೆ ಕಾರಣ ಕೂಡ ತಿಳಿಸಿದ್ದಾರೆ.

ರಾಜ್ಯದ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಮೇಲ್ವಿಚಾರಕರಿಗೆ ನಿಗದಿತ ಸಮಯಕ್ಕೆ ವೇತನ ಪಾವತಿಸಲು ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕಳೆದ ನವೆಂಬರ್ ತಿಂಗಳಲ್ಲಿ ನಿರ್ದೇಶನ ನೀಡಲಾಗಿದೆ. ಅದರಂತೆ ವೇತನ ಪಾವತಿಸಲು ಕ್ರಮವಹಿಸಲಾಗುತ್ತಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

Grama Panchayat Salary Pending Update Karnataka Government Shares Details In Belagavi Session

ಕೆಲವು ಜಿಲ್ಲೆಗಳಲ್ಲಿ ಗ್ರಾಮ ಪಂಚಾಯತಿ ತೆರಿಗೆ ಬೇಡಿಕೆ ಕಡಿಮೆ ಇರುವುದರಿಂದ ಗ್ರಂಥಾಲಯ ಮೇಲ್ವಿಚಾರಕರಿಗೆ ವೇತನ ವ್ಯತ್ಯಾಸದ ಮೊತ್ತವನ್ನು ಪಾವತಿಸಲು ಕೊರತೆ ಇದೆ. ಹೀಗಾಗಿ ಅಂತಹ ಜಿಲ್ಲೆಗಳಲ್ಲಿ ಬಾಕಿ ವೇತನವನ್ನು ಪಾವತಿಸುವ ಪ್ರಸ್ತಾವನೆ ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದಿದ್ದಾರೆ.

ಗ್ರಾಮ ಪಂಚಾಯಿತಿಗಳಲ್ಲಿ ವೇತನ ಪಾವತಿಗೆ ಸಂಬಂಧಿಸಿದಂತೆ 2025-26ನೇ ಸಾಲಿನಲ್ಲಿ ಮಾರ್ಚ್ 2025ರಿಂದ ನವೆಂಬರ್ 2025ರವರೆಗೆ 3 ತ್ರೈಮಾಸಿಕ ಕಂತುಗಳಲ್ಲಿ ಒಟ್ಟು 60,49,75,549 ರೂಪಾಯಿಗಳ ಗೌರವ ಧನವನ್ನು ನೇರವಾಗಿ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗೆ ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದ್ದಾರೆ.

ರಾಜ್ಯದ ನಗರಸಭೆ, ಪುರಸಭೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಪೌರಕಾರ್ಮಿಕರಿಗೆ ಸರ್ಕಾರದಿಂದಲೇ ವೇತನ ಪಾವತಿಸುವ ಕುರಿತಂತೆ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪೌರಾಡಳಿತ ಸಚಿವ ರಹೀಂ ಖಾನ್‌ ಹೇಳಿದ್ದಾರೆ. 2022ಕ್ಕೂ ಮುನ್ನ ನಗರ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರಿಗೆ ಎಸ್‍ಎಫ್‍ಸಿ ಅನುದಾನದಡಿ ವೇತನ ಪಾವತಿಸಲಾಗುತ್ತಿತ್ತು. ಆದರೆ ಸ್ಥಳೀಯ ಸಂಸ್ಥೆಗಳು ಉತ್ತಮವಾಗಿ ತೆರಿಗೆ ಸಂಗ್ರಹಿಸಿ, ಆತ್ಮ ನಿರ್ಭರವಾಗಬೇಕು. ಆರ್ಥಿಕವಾಗಿ ಸಬಲತೆಯನ್ನು ಸಾಧಿಸಬೇಕು ಎಂಬ ಉದ್ದೇಶದಿಂದ ಸರ್ಕಾರದಿಂದ ಶೇ 40ರಷ್ಟು ಹಾಗೂ ಶೇ 60ರಷ್ಟು ನಗರ ಸ್ಥಳೀಯ ಸಂಸ್ಥೆಗಳೇ ತಮ್ಮ ಆದಾಯದ ಅನುದಾನದಿಂದ ಪಾವತಿಸುವಂತೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ 350ರಿಂದ 400 ಸ್ಥಳೀಯ ಸಂಸ್ಥೆಗಳಿದ್ದು, ಇವುಗಳಲ್ಲಿ ನಿರ್ಮಿಸಿದ ಒಳಚರಂಡಿ ವ್ಯವಸ್ಥೆಗೆ ನಿರ್ವಹಣೆ 800 ಕೋಟಿ ರೂಪಾಯಿ ಅನುದಾನ ಒದಗಿಸಬೇಕಾಗುತ್ತಿದೆ. ಇದಕ್ಕೆ ಆರ್ಥಿಕ ಇಲಾಖೆ ಒಪ್ಪುವುದಿಲ್ಲ. ಸ್ಥಳೀಯ ಸಂಸ್ಥೆಗಳು ತಮ್ಮ ಆದಾಯ ಮೂಲಗಳಿಂದಲೇ ನಿರ್ವಹಣೆ ವೆಚ್ಚ ಭರಿಸಬೇಕು. ಉಡುಪಿ ಜಿಲ್ಲೆಯ ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಕೆಲವು ಪ್ರದೇಶಗಳನ್ನು ಕೈಬಿಡುವಂತೆ ಕೋರಿ ಹಲವು ಮನವಿಗಳು ಸ್ವೀಕೃತವಾಗಿದ್ದು, ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೆಲವು ಪ್ರದೇಶಗಳನ್ನು ಪಟ್ಟಣ ಪಂಚಾಯಿತಿಯ ವ್ಯಾಪ್ತಿಯಿಂದ ಕೈಬಿಡುವ ಸಮರ್ಪಕತೆಯನ್ನು ಪರಿಶೀಲಿಸಲು ಮಾಹಿತಿ ಕೋರಲಾಗಿದೆ. ಮಾಹಿತಿ ದೊರೆತ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಹೇಳಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+