Get Updates
Get notified of breaking news, exclusive insights, and must-see stories!

ಮೈಸೂರು ದಸರಾದಲ್ಲಿ ಅದ್ಧೂರಿ ಏರ್ ಶೋ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯಾಗಿ ಸಿಎಂ ಸಿದ್ದರಾಮಯ್ಯ ಮಾಡಿದ ಮನವಿ ಏನು?

ಬೆಂಗಳೂರು, ಆಗಸ್ಟ್‌ 03: ಮುಂಬರುವ ಮೈಸೂರು ದಸರಾದಲ್ಲಿ ವೈಮಾನಿಕ ಪ್ರದರ್ಶನವನ್ನು ( ಏರ್‌ ಶೋ ) ಆಯೋಜಿಸುವಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಗುರುವಾರ ಮನವಿ ಮಾಡಿದರು.

ಸಿದ್ದರಾಮಯ್ಯ ಅವರು ರಾಜನಾಥ್‌ ಸಿಂಗ್‌ ಅವರನ್ನು ಇಂದು ದೆಹಲಿಯಲ್ಲಿ ಭೇಟಿಯಾದರು. ಈ ವರ್ಷ ಅಕ್ಟೋಬರ್ 15 ರಿಂದ 24 ರ ವರೆಗೆ ಮೈಸೂರು ದಸರಾ ನಡೆಯಲಿದೆ.

cm-siddaramaiah-to-rajnath-singh

ಮೈಸೂರಿನಲ್ಲಿ ನಡೆಯುವ ನಾಡಹಬ್ಬ ದಸರಾವನ್ನು ಅದ್ಧೂರಿಯಾಗಿ ನಡೆಸಲು ಸಿದ್ದರಾಮಯ್ಯ ಸರ್ಕಾರ ತೀರ್ಮಾನಿಸಿದೆ. ಈ ಹಿಂದಿನಂತೆ 'ಏರ್‌ಶೋ' ಆಯೋಜಿಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟವರಿಗೆ ನಿರ್ದೇಶನ ನೀಡುವಂತೆ ರಾಜನಾಥ್‌ ಸಿಂಗ್‌ ಅವರಿಗೆ ಸಿಎಂ ಮನವಿ ಮಾಡಿದ್ದಾರೆ. ಈ ಕುರಿತಾಗಿ ಸಿಂಗ್‌ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

'ನಿಮ್ಮ ( ರಾಜನಾಥ್‌ ಸಿಂಗ್‌ ) ಸಮಯೋಚಿತ ಹಸ್ತಕ್ಷೇಪವು ದಸರಾ ಹಬ್ಬಕ್ಕೆ ಇನ್ನಷ್ಟು ರಂಗು ನೀಡಲಿದೆ' ಎಂಬ ಮಾತುಗಳನ್ನು ಸಿಎಂ ಆಡಿದ್ದಾರೆ.

ಕೇಂದ್ರ ಸಚಿವರ ಜತೆಗಿನ ಭೇಟಿಯ ಸಂದರ್ಭದ ಫೋಟೊಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ.

cm-siddaramaiah-to-rajnath-singh

2023ರ ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಬೇಕೆಂಬ ಜನರ ಆಶಯವನ್ನು ರಾಜನಾಥ್‌ ಸಿಂಗ್‌ ಮುಂದೆ ಇಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

'2017 ಮತ್ತು 2019 ರಲ್ಲಿ ಮೈಸೂರಿನ ಟಾರ್ಚ್ ಲೈಟ್ ಪರೇಡ್ ಮೈದಾನದಲ್ಲಿ ಭಾರತೀಯ ವಾಯುಪಡೆಯು ವಿಶೇಷ ಏರ್‌ ಶೋ ಅನ್ನು ಪ್ರದರ್ಶನ ಮಾಡಿತು. ಇದು ಲಕ್ಷಾಂತರ ಜನರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ' ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ವರ್ಷ ಮೈಸೂರು ದಸರಾವನ್ನು ಅರ್ಥಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜಿಸಲಾಗುವುದು ಎಂದು ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ. ದಸರಾ ಸಾಂಪ್ರದಾಯಿಕ ಹಬ್ಬವಾಗಿದ್ದು, ಇದು ಜನರ ಹಬ್ಬವಾಗಬೇಕು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

cm-siddaramaiah-to-rajnath-singh

ಜಂಬೂ ಸವಾರಿ, ದೀಪದ ಅಲಂಕಾರ, ದೈಹಿಕ ಸ್ಪರ್ಧೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಮೈಸೂರು ದಸರಾದ ಕೆಲವು ಪ್ರಮುಖ ಆಕರ್ಷಣೆಗಳಾಗಿವೆ. ಇದು ಪ್ರಪಂಚದ ವಿವಿಧ ಭಾಗಗಳಿಂದ ಪ್ರವಾಸಿಗರನ್ನು ಆಕರ್ಷಿಸುತ್ತದೆ.

ಸಿದ್ದರಾಮಯ್ಯ-ಮೋದಿ ಭೇಟಿ

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಮೇ ತಿಂಗಳಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲನೇ ಬಾರಿಗೆ ಪ್ರಧಾನಿ ಮೋದಿ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡಿ ಮಾತುಕತೆ ನಡೆಸಿದರು.

ಮುಖ್ಯಮಂತ್ರಿ ಕಚೇರಿಯ ಪ್ರಕಾರ, ಸಿದ್ದರಾಮಯ್ಯ ಅವರು ಸಂಸತ್ ಭವನದಲ್ಲಿ ಮೋದಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+