ದ್ರಾಕ್ಷಿ ಕೃಷಿ: ಎಸ್ಸಿ, ಎಸ್ಟಿ ಬೆಳೆಗಾರರಿಗೆ ಅತ್ಯಧಿಕ ಸಹಾಯಧನ
ನವದೆಹಲಿ, ಆಗಸ್ಟ್ 06: ವಿಪರೀತ ಮಳೆ ಇಲ್ಲವೇ ಮಳೆ ಕೊರತೆಯಂತಹ ಪ್ರಾಕೃತಿಕ ಹಾಗೂ ಇನ್ನಿತರ ಕಾರಣಗಳಿಂದ ಅಪಾರವಾಗಿ ನಷ್ಟ ಎದುರಿಸುತ್ತಿರುವ ದ್ರಾಕ್ಷಿ ಬೆಳೆಗಾರರಿಗೆ ಕೇಂದ್ರ ಸರ್ಕಾರ ಏನೆಲ್ಲ ನೆರವು ನೀಡುತ್ತದೆ, ದ್ರಾಕ್ಷಿ ಕೃಷಿಯನ್ನು ಪ್ರೋತ್ಸಾಹಿಸಲು ಕೈಗೊಂಡ ಕ್ರಮಗಳೇನು ಎಂಬುದರ ಕುರಿತು ಕರ್ನಾಟಕದ ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಅವರು ಸಂಸತ್ನಲ್ಲಿ ಮಾಹಿತಿ ಕೇಳುವ ಮೂಲಕ ಸದನದ ಗಮನ ಸೆಳೆದಿದ್ದಾರೆ.
ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಅವರು ಲೋಕಸಭೆಯಲ್ಲಿ ದ್ರಾಕ್ಷಿ ಬೆಳೆಗಾರರ ಸಮಸ್ಯೆಗಳನ್ನು ಸದನದ ಗಮನಕ್ಕೆ ತಂದರು. ಅವರು ಕೇಳಿದ ಪ್ರಶ್ನೆಗಳಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು ಲಿಖಿತವಾಗಿ ಉತ್ತರಿಸಿತು. ಅದರ ಅಂಶಗಳು ಇಲ್ಲಿವೆ.

ಎಸ್ಸಿ ಎಸ್ಟಿ ಬೆಳೆಗಾರರಿಗೆ ಅತ್ಯಧಿಕ ನೆರವು
ಸಚಿವಾಲಯವು ನೀಡಿದ ಮಾಹಿತಿ ಪ್ರಕಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ದ್ರಾಕ್ಷಿ ಕೃಷಿಯನ್ನು ಪ್ರೋತ್ಸಾಹಿಸಲು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಬೆಳೆಗಾರರಿಗೆ ಹನಿ ನೀರಾವರಿಗಾಗಿ ಸಾಮಾನ್ಯ ವರ್ಗಕ್ಕೆ ಶೇ.75 ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ವರ್ಗದ ಬೆಳೆಗಾರರಿಗೆ ಶೇ.90 ಸಹಾಯಧನ ನೀಡಲಾಗುತ್ತಿದೆ.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ, ಸಾಮಾನ್ಯ ವರ್ಗದ ಬೆಳೆಗಾರರಿಗೆ ಹೆಕ್ಟೇರ್ಗೆ ಗರಿಷ್ಠ 24,000 ರೂ. ಹಾಗೂ ಎಸ್ಸಿ/ಎಸ್ಟಿ ಗೆ ಹೆಕ್ಟೇರ್ಗೆ ಗರಿಷ್ಠ 30,000 ರೂ. ಗೊಬ್ಬರ ಸಹಾಯಧನ ನೀಡಲಾಗುತ್ತಿದೆ. ಜೊತೆಗೆ ಪೌಷ್ಠಿಕಾಂಶ ಹಾಗೂ ರೋಗ ನಿಯಂತ್ರಣಕ್ಕಾಗಿ ಹೆಕ್ಟೇರ್ಗೆ ಗರಿಷ್ಠ 2,000 ರೂ. ನೀಡಲಾಗುತ್ತಿದೆ.
ಇನ್ನೂ ಕೀಟನಾಶಕ ಮತ್ತು ಗೊಬ್ಬರ ಸಿಂಪಡಣೆಗಾಗಿ ಯಂತ್ರ ಖರೀದಿಗೆ ಸಾಮಾನ್ಯ ವರ್ಗಕ್ಕೆ ಗರಿಷ್ಠ 76,000 ರೂ. ಹಾಗೂ ಎಸ್ಸಿ/ಎಸ್ಟಿ ಗೆ ಗರಿಷ್ಠ 95,000 ರೂ. ಸಹಾಯಧನ ನೀಡಲಾಗುತ್ತಿದೆ.

2022-23 ರಲ್ಲಿ ದ್ರಾಕ್ಷಿ ಉತ್ಪಾದನೆಯಲ್ಲಿ ಇಳಿಕೆ
2021-22 ಹಾಗೂ 2022-23 ನೇ ಸಾಲಿನಲ್ಲಿ ಅತಿಯಾದ ಮಳೆ ಹಾಗೂ ರೋಗಗಳಿಂದಾಗಿ ದ್ರಾಕ್ಷಿ ಬೆಳೆ ಪ್ರದೇಶ ಹಾಗೂ ಉತ್ಪಾದನೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. 2022-23 ರಲ್ಲಿ ಚಿಕ್ಕಬಳ್ಳಾಪುರದಲ್ಲಿ 568 ಹೆಕ್ಟೇರ್ನಲ್ಲಿ ದ್ರಾಕ್ಷಿ ಬೆಳೆದಿದ್ದು, 13,113 ಟನ್ ಉತ್ಪಾದನೆಯಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿತು.
ಇದೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ 1,712 ಹೆಕ್ಟೇರ್ನಲ್ಲಿ ದ್ರಾಕ್ಷಿ ಬೆಳೆದಿದ್ದು, 43,086 ಟನ್ ದ್ರಾಕ್ಷಿ ಉತ್ಪಾದನೆಯಾಗಿದೆ.
ಬೆಳೆಗಾರರು ನಷ್ಟ ಪರಿಹಾರ ಪಡೆಯಲು, ಹವಾಮಾನ ಆಧಾರಿತ ಬೆಳೆ ಬಿಮೆ ಯೋಜನೆಗೆ (RWBCIS) ಹೆಸರು ನೋಂದಾಯಿಸಲು ಸಲಹೆ ನೀಡಲಾಗುತ್ತಿದೆ. ಈ ಯೋಜನೆಯಡಿ, ಶೇ.5 ರಷ್ಟು ಅಂದರೆ ಹೆಕ್ಟೇರ್ಗೆ 14,000 ರೂ. ವಿಮೆ ಪಾವತಿಸಬೇಕು. ನಷ್ಟವಾದಾಗ ಹೆಕ್ಟೇರ್ಗೆ 2.80 ಲಕ್ಷ ರೂ. ಪರಿಹಾರ ಸಿಗಲಿದೆ ಎಂದು ಕೇಂದ್ರ ಸಚಿವಾಲಯ ಸಂಸದರ ಪ್ರಶ್ನೆಗೆ ಉತ್ತರಿಸಿತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications