Gruha Jyothi Scheme: ಗೃಹಜ್ಯೋತಿ ಯೋಜನೆ ಕುರಿತು ಹೊಸ ಅಪ್ಡೇಟ್ ಕೊಟ್ಟ ಕೆ ಜೆ ಜಾರ್ಜ್
ಬೆಂಗಳೂರು, ಫೆಬ್ರವರಿ 25: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಜ್ಯೋತಿಯ ಸಹಾಯಧನವನ್ನು ಎಸ್ಕಾಂಗಳಿಗೆ ಸರ್ಕಾರ ಮುಂಗಡವಾಗಿ ಪಾವತಿಸುತ್ತಿದ್ದು, ಗ್ರಾಹಕರಿಂದ ಹಣ ಪಡೆಯುವ ಯಾವುದೇ ಪ್ರಸ್ತಾಪ ಮುಂದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಬೆಳಕು ಭವನದಲ್ಲಿ ಸೋಮವಾರ ಆಯೋಜಿಸಿದ್ದ ಇಲಾಖೆಯ ಸಭೆಯ ನಂತರ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಈ ಬಗ್ಗೆ ವಿವರಣೆ ನೀಡಿದರು. ಗೃಹಜ್ಯೋತಿ ಹಣವನ್ನು ಸರ್ಕಾರ ಮುಂಗಡವಾಗಿ ಪಾವತಿಸದಿದ್ದರೆ ಜನರಿಂದ ಪಡೆಯಲು ಕರ್ನಾಟಕ ವಿದ್ಯುತ್ಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್ಸಿ)ಎಸ್ಕಾಂಗಳು ಮನವಿ ಮಾಡಿವೆ ಎಂಬ ವಿಚಾರ ತಪ್ಪು ಕಲ್ಪನೆಯಿಂದ ಸೃಷ್ಟಿಯಾಗಿದೆ. ಸರ್ಕಾರಕ್ಕೆ ಅಂತಹ ಯಾವುದೇ ಉದ್ದೇಶ ಇಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಸ್ಪಷ್ಟಪಡಿಸಿದ್ದಾರೆ.

ಗೃಹಜ್ಯೋತಿ ಯೋಜನೆ ಘೋಷಣೆ ಸಂದರ್ಭದಲ್ಲೇ, ಗೃಹ ಬಳಕೆದಾರರಿಗೆ 200 ಯೂನಿಟ್ವರೆಗೆ ಉಚಿತವಾಗಿ ವಿದ್ಯುತ್ ಪೂರೈಸುವುದಾಗಿ ಸರ್ಕಾರ ಹೇಳಿತ್ತು. ಸಬ್ಸಿಡಿ ಮೊತ್ತವನ್ನು ಸರ್ಕಾರದಿಂದಲೇ ಪಾವತಿ ಮಾಡುವುದಾಗಿಯೂ ಹೇಳಲಾಗಿತ್ತು. ಅದರಂತೆ ಬಜೆಟ್ನಲ್ಲಿ ಅನುದಾನ ಮೀಸಲಿಡಲಾಗುತ್ತಿದೆ. ಫೆಬ್ರವರಿ 2025ರವರೆಗಿನ ಗೃಹಜ್ಯೋತಿ ಯೋಜನೆ ಸಹಾಯಧನವನ್ನು ಮುಂಗಡವಾಗಿ ಎಲ್ಲಾ ಎಸ್ಕಾಂಗಳಿಗೆ ಪಾವತಿಸಲಾಗಿದೆ,"ಎಂದು ಅವರು ವಿವರ ನೀಡಿದರು.
ಕೆಇಆರ್ ಸಿ (ಸಹಾಯಧನ ಪಾವತಿ ವಿಧಾನ) ನಿಯಮ 2008ರಲ್ಲಿ ವಿದ್ಯುತ್ ಯೋಜನೆಗಳ ಸಹಾಯಧನವು ರಾಜ್ಯ ಸರ್ಕಾರದಿಂದ ಮುಂಗಡವಾಗಿ ಪಾವತಿಯಾಗದಿದ್ದರೆ ಗ್ರಾಹಕರಿಂದ ಪಡೆಯಲು ಎಸ್ಕಾಂಗಳಿಗೆ ಅವಕಾಶ ಕಲ್ಪಿಸುತ್ತದೆ. ಈ ಸಾಮಾನ್ಯ ನಿಯಮವನ್ನೇ ತಪ್ಪಾಗಿ ಗ್ರಹಿಸಲಾಗಿದೆ," ಎಂದು ಸ್ಪಷ್ಟಪಡಿಸಿದರು.
"ಗೃಹಜ್ಯೋತಿ ಯೋಜನೆ ಜಾರಿಯಾದಾಗಿನಿಂದ ಎಸ್ಕಾಂಗಳಿಗೆ ಮುಂಗಡವನ್ನು ಪಾವತಿಸಲಾಗುತ್ತಿದೆ. ಹೀಗಾಗಿ, ಗ್ರಾಹಕರಿಂದ ಯೋಜನೆ ಹಣ ಪಡೆಯುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ. ಸಬ್ಸಿಡಿ ಮೊತ್ತವನ್ನು ಗ್ರಾಹಕರಿಂದ ಪಡೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. 200 ಯೂನಿಟ್ ವರೆಗೆ ಉಚಿತವಾಗಿ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯನ್ನು ಯಾವುದೇ ಗೊಂದಲವಿಲ್ಲದೆ ಮುಂದುವರಿಸಿಕೊಂಡು ಹೋಗಲು ಇಂಧನ ಇಲಾಖೆ ಬದ್ಧವಾಗಿದೆ ಎಂದು ಸಚಿವರು ಹೇಳಿದರು.
ಹೆಚ್.ಬಿ.ಆರ್. ಲೇಔಟ್ ನ 5 ನೇ ಬ್ಲಾಕ್ನ ಕೆ.ಪಿ.ಟಿ.ಸಿ.ಎಲ್. ಸ್ಟೇಷನ್ ಪಕ್ಕದಲ್ಲಿ ಅಂದಾಜು 4.65 ಕೋಟಿ ರೂ. ವೆಚ್ಚದಲ್ಲಿ ಥೀಮ್ ಪಾರ್ಕ್ ಅಭಿವೃದ್ದಿ ಮಾಡಲಾಗುತ್ತದೆ. ಈ ಯೋಜನೆಯಲ್ಲಿ ತರಬೇತಿ ಕೇಂದ್ರ ಹಾಗೂ ಗ್ರಾಮೀಣ ಆಟಗಳನ್ನು ಪ್ರೋತ್ಸಾಹಿಸುವ ಕೇಂದ್ರ ಇರಲಿದ್ದು, ಬಯಲು ರಂಗಮಂದಿರ, ವಾಕಿಂಗ್ ಪಾಥ್ ಹಾಗೂ ಓಪನ್ ಜಿಮ್ ಮತ್ತು ಶುದ್ಧ ಕುಡಿಯುವ ನೀರಿನ ಘಟಕ, ಶೌಚಾಲಯ ವ್ಯವಸ್ಥೆ ಇರಲಿದೆ ಎಂದು ಹೇಳಿದರು. ಅಲ್ಲದೆ, ಗುಣಮಟ್ಟದ ಕಾಮಗಾರಿ ನಡೆಸುವಂತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು.
ಜೀವ ವೈವಿದ್ಯ ಉದ್ಯಾನದದಲ್ಲಿ ವಿಶೇಷ ಪ್ರಬೇಧದ ಸಸ್ಯಗಳನ್ನು ಬೆಳೆಸಿ, ವೈಜ್ಞಾನಿಕ ಹೆಸರನ್ನು ಪ್ರದರ್ಶಿಸಬೇಕು. ಉತ್ತಮ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಹಾಗೂ ವಾಯು ವಿಹಾರಿಗಳಿಗೆ ನಡಿಗೆ ಪಥ ನಿರ್ಮಿಸುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜೀವ ವೈವಿಧ್ಯ ಉದ್ಯಾನಕ್ಕೆ 2.75 ಕೋಟಿ ವೆಚ್ಚದಲ್ಲಿ ಕಾಯಕಲ್ಪ ನೀಡಲಾಗುತ್ತಿದ್ದು, ಅರಣ್ಯ ಇಲಾಖೆ 2 ಕೋಟಿ ನೀಡಲಿದೆ. ಇದೇ ವೇಳೆ ಸಚಿವ ಕೆ.ಜೆ.ಜಾರ್ಜ್ ಅವರು, ಯೋಜನೆಗೆ ಸಿಎಸ್ಆರ್ ಅನುದಾನದಡಿ 75 ಲಕ್ಷ ರೂ. ಒದಗಿಸುವುದಾಗಿ ಘೋಷಿಸಿದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications