ಜೂನ್ ತಿಂಗಳ ಬಿಲ್ನಲ್ಲಿ ಜುಲೈ ತಿಂಗಳ ಶುಲ್ಕ: ಕ್ಯಾಶ್ಬ್ಯಾಕ್ ಭರವಸೆ ಕೊಟ್ಟ ಸಚಿವ ಕೆ.ಜೆ. ಜಾರ್ಜ್
ಗೃಹಜ್ಯೋತಿ ಯೋಜನೆ ಜುಲೈ 1ರಿಂದಲೇ ರಾಜ್ಯಾದ್ಯಂತ ಜಾರಿಯಾಗಿದೆ. ಜೂನ್ 25ರ ಒಳಗೆ ನೋಂದಣಿ ಮಾಡಿಕೊಂಡ ಗ್ರಾಹಕರು ಜುಲೈ 1ರಿಂದ ಉಚಿತ ವಿದ್ಯುತ್ ಪಡೆಯಲು ಅರ್ಹರಾಗಿದ್ದಾರೆ. ಆದರೆ ಜೂನ್ ತಿಂಗಳು ಬಂದ ವಿದ್ಯುತ್ ಬಿಲ್ನಲ್ಲಿ ಜುಲೈ ತಿಂಗಳ ಕೆಲವು ದಿನಗಳಿಗೆ ಶುಲ್ಕ ವಿಧಿಸಲಾಗಿದ್ದು ಜನರಲ್ಲಿ ಆಕ್ರೋಶ ಉಂಟುಮಾಡಿದೆ.
ಜೂನ್ ತಿಂಗಳ ವಿದ್ಯುತ್ ಬಿಲ್ ಗೊಂದಲದ ಬಗ್ಗೆ ಮಾತನಾಡಿರುವ ಇಂಧನ ಸಚಿವ ಕೆ.ಜೆ. ಜಾರ್ಜ್, ಯಾರ ಬಿಲ್ನಲ್ಲಿ ಜುಲೈ ತಿಂಗಳ ಶುಲ್ಕ ಸೇರಿಸಲಾಗಿದೆಯೋ ಅವರು ಈಗಾಗಲೇ ವಿದ್ಯುತ್ ಬಿಲ್ ಕಟ್ಟಿದ್ದರೆ ಹೆಚ್ಚುವರಿ ಶುಲ್ಕ ಮರುಪಾವತಿ ಮಾಡಲಾಗುವುದು ಎಂದು ಹೇಳಿದ್ದಾರೆ. ಯಾವುದೇ ಬಾಕಿ ಇರಿಸಿಕೊಳ್ಳದೆ ಸಂಪೂರ್ಣ ವಿದ್ಯುತ್ ಬಿಲ್ ಕಟ್ಟಿದ್ದರೆ ಮಾತ್ರ ಹಣ ಮರುಪಾವತಿಯಾಗಲಿದೆ ಎಂದು ಹೇಳಿರುವುದಾಗಿ ಟಿವಿ9 ವರದಿ ಮಾಡಿದೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿರುವ ಅವರು, ಜೂನ್ ತಿಂಗಳ ವಿದ್ಯುತ್ ಬಿಲ್ ಗೊಂದಲದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. "ಜೂನ್ ತಿಂಗಳ ವಿದ್ಯುತ್ ಬಿಲ್ನಲ್ಲಿ ಒಂದಷ್ಟು ಗೊಂದಲಗಳಿವೆ, ಜೂನ್ ತಿಂಗಳ ಬಿಲ್ನಲ್ಲಿ ಜುಲೈ ತಿಂಗಳ ಕೆಲವು ದಿನಗಳಿಗೂ ಶುಲ್ಕ ವಿಧಿಸಲಾಗಿದೆ. ಕೆಲವು ಗ್ರಾಹಕರಿಗೆ ಮಾತ್ರ ಈ ರೀತಿಯ ಸಮಸ್ಯೆಯಾಗಿದೆ, ಅಂತಹ ಗ್ರಾಹಕರಿಗೆ ಕ್ರೆಡಿಟ್ ನೀಡಲಾಗುವುದು, ಬಾಕಿ ಮೊತ್ತ ಯಾವುದು ಇಲ್ಲದಿದ್ದರೆ ನಾಲ್ಕು ತಿಂಗಳ ನಂತರ ಹಣ ವಾಪಸ್ ನೀಡಲಾಗುವುದು, ಜುಲೈ ತಿಂಗಳ ಬಿಲ್ ಕಟ್ಟಿದರೆ ಹಣ ವಾಪಸ್ ನೀಡುತ್ತೇವೆ" ಎಂದು ಹೇಳಿದ್ದಾರೆ.
ಆಗಸ್ಟ್ 5ಕ್ಕೆ ಅಧಿಕೃತ ಚಾಲನೆ
ಜುಲೈ 1ರಿಂದಲೇ ನೋಂದಣಿ ಮಾಡಿರುವ ಗ್ರಾಹಕರು ಉಚಿತ ವಿದ್ಯುತ್ ಪಡೆಯುತ್ತಿದ್ದಾರೆ. ಇದಕ್ಕೆ ಅಧಿಕೃತ ಚಾಲನೆಯನ್ನು ಆಗಸ್ಟ್ 5ರಂದು ನೀಡಲಾಗುವುದು ಎಂದು ಸಚಿವ ಜಾರ್ಜ್ ಹೇಲಿದ್ದಾರೆ. ಕಲಬುರಗಿಯಲ್ಲಿ ಇದಕ್ಕೆ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಇದುವರೆಗೆ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಲು 1.40 ಕೋಟಿ ಗ್ರಾಹಕರು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಜೂನ್ 25ರ ಒಳಗೆ ನೋಂದಣಿ ಮಾಡಿಕೊಂಡಿರುವ ಗ್ರಾಹಕರು ಜುಲೈ 1ರಿಂದ ಉಚಿತ ವಿದ್ಯುತ್ ಪಡೆದರೆ, ಜುಲೈ 25ರ ಒಳಗೆ ನೋಂದಣಿ ಮಾಡಿಕೊಂಡ ಗ್ರಾಹಕರು ಆಗಸ್ಟ್ 1ರಿಂದ ಉಚಿತ ವಿದ್ಯುತ್ ಪಡೆಯಲಿದ್ದಾರೆ.
-
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ












Click it and Unblock the Notifications