Gruha Lakshmi : 'ಗೃಹ ಲಕ್ಷ್ಮಿ' ಅರ್ಜಿ ಸ್ವೀಕರಿಸಲು ಮುಹೂರ್ತ ಫಿಕ್ಸ್: ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಮಾಹಿತಿ
ಕರ್ನಾಟಕ ಸರ್ಕಾರದ ಮಹತ್ವದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕರಿಸಲು ಮುಹೂರ್ತ ಫಿಕ್ಸ್ ಮಾಡಲಾಗಿದೆ. ಜುಲೈ 17 ಅಥವಾ 19ರಿಂದ ಅರ್ಜಿ ಸ್ವೀಕರಿಸಲಾಗುವುದು ಎಂದು ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹತ್ವದ ಯೋಜನೆಗೆ ಜುಲೈ 17ರಂದು ಕೇಂದ್ರದ ಕಾಂಗ್ರೆಸ್ ನಾಯಕರು ಚಾಲನೆ ನೀಡಬೇಕು ಎಂದು ಕೇಳಲಾಗಿದೆ. ಸಮಯ ಹೊಂದಾಣಿಕೆ ಆದರೆ ಕೇಂದ್ರದ ಕಾಂಗ್ರೆಸ್ ನಾಯಕರು ಸೋಮವಾರ (ಜುಲೈ 17) ಸಂಜೆ 5ಕ್ಕೆ ಬೆಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆ. ಅವರು ಬರದೇ ಇದ್ದಲ್ಲಿ ಬುಧವಾರ (ಜುಲೈ 19) ಸಂಜೆ 5ಕ್ಕೆ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ಮಧ್ಯಾಹ್ನ 2 ಗಂಟೆಯ ನಂತರ ಬಗ್ಗೆ ಸ್ಪಷ್ಟನೆ ನೀಡಲಾಗುವುದು ಎಂದರು.

ಕರ್ನಾಟಕ ರಾಜ್ಯಾದ್ಯಂತ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಾಹಿತಿ ನೀಡಿದರು. ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿ ಎಂದು ನೋಂದಾಯಿಸಿಕೊಂಡವರು, ಎಪಿಎಲ್, ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಹೊಂದಿರುವವರು, ಟ್ಯಾಕ್ಸ್ ಮತ್ತು ಜಿಎಸ್ಟಿ ಕಟ್ಟದೇ ಇರುವವರು ಈ ಯೋಜನೆಯ ಲಾಭ ಪಡೆಯಬಹುದು.
ಆಧಾರ್ ಲಿಂಕ್ ಆಗದವರು ಪಾಸ್ಬುಕ್ ಕೊಡಬೇಕು
ಅರ್ಜಿ ಸಲ್ಲಿಸುವಾಗ ಪಡಿತರ ಚೀಟಿ, ಆಧಾರ್ ನಂಬರ್ ಇರುವುದು ಕಡ್ಡಾಯವಾಗಿರುತ್ತದೆ. ಆಧಾರ್ ಲಿಂಕ್ ಆಗಿರದ ಖಾತೆಗೆ ಹಣ ಬರಬೇಕು ಎಂದರೆ ಬೇರೆ ಪಾಸ್ ಬುಕ್ ಅನ್ನು ಕೂಡ ನೀಡಬಹುದು. ಆ ಪಾಸ್ಬುಕ್ಅನ್ನು ಸಾಫ್ಟ್ವೇರ್ ನಲ್ಲಿ ಅಪ್ಲೋಡ್ ಮಾಡುತ್ತೇವೆ, ಆ ಮಾಹಿತಿ ನಮ್ಮ ಸಿಡಿಪಿಒ ಲಾಗಿನ್ಗೆ ಹೋಗಲಿದೆ, ಅದರ ಜೊತೆಯಲ್ಲಿ ತಹಶೀಲ್ದಾರ್ ತಾಲೂಕ್ ಪಂಚಾಯಿತ್ ಇಒ ಲಾಗಿನ್ಗೂ ಹೋಗಲಿದೆ.
ಈ ಪಾಸ್ಬುಕ್ ಪಡಿತರ ಚೀಟಿಯಲ್ಲಿರುವ ಮನೆಯ ಮುಖ್ಯಸ್ಥೆಯ ಜೊತೆ ಹೊಂದಾಣಿಕೆಯಾದರೆ ಅಲ್ಲಿ ಆರ್ಡರ್ ಕಾಪಿ ಕೊಡಲಾಗುವುದು. ಸಿಡಿಪಿಒ ಅಥವಾ ಅಂಗನವಾಡಿ ಕಾರ್ಯಕರ್ತೆಯರ ಮುಖಾಂತರ ತಲುಪಿಸಲಾಗುವುದು ಎಂದು ಹೇಳಿದರು.
ಏನೇನು ದಾಖಲೆ ಬೇಕು?
ಆಧಾರ್ ಲಿಂಕ್ ಇರುವ ಅಕೌಂಟ್ಗೆ ಹಣ ಬರಲಿ ಎಂದಾಗ ಅವರು ಅರ್ಜಿ ಸಲ್ಲಿಕೆ ವೇಳೆ ಪಾಸ್ಬುಕ್ ತರುವ ಅಗತ್ಯವಿರುವುದಿಲ್ಲ. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ತಂದರೆ ಸಾಕು, ಅದರ ಜೊತೆ ಆಧಾರ್ ಕಾರ್ಡ್ಗೆ ಲಿಂಕ್ ಆಗಿರುವ ಮೊಬೈಲ್ ತೆಗೆದುಕೊಂಡು ಹೋಗಬೇಕು ಎಂದು ಹೇಳಿದರು.
1.28 ಕೋಟಿ ಕುಟುಂಬಗಳು ಈ ಗೃಹಲಕ್ಷ್ಮಿ ಯೋಜನೆಯ ಲಾಭವನ್ನು ಪಡೆಯಲಿದ್ದಾರೆ. ಆಧಾರ್ ಕಾರ್ಡ್, ಪಡಿತರ ಚೀಟಿಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಗಳಿಗೆ ಅರ್ಜಿ ಸಲ್ಲಿಸುವ ಸಮಯ, ದಿನಾಂಕ, ಸ್ಥಳದ ಮಾಹಿತಿಯನ್ನು ಎಸ್ಎಂಎಸ್ ಮೂಲಕ ನೀಡಲಾಗುವುದು. ಆ ಸಮಯದಲ್ಲಿ ಅವರು ತಮಗೆ ಸಮೀಪದ ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸಿದರೆ ಜನಸಂದಣಿಯನ್ನು ತಪ್ಪಿಸಬಹುದು ಎಂದು ಹೇಳಿದರು.
ಒಂದು ವೇಳೆ ನೀಡಿರುವ ದಿನಾಂಕ, ಸಮಯವನ್ನು ತಪ್ಪಿಸಿಕೊಂಡರೆ ಅಂತಹವರು ನಿಗರದಿಪಡಿಸಿದ ಕೇಂದ್ರದಲ್ಲಿ ಸಂಜೆ 5 ಗಂಟೆಯ ನಂತರ ನೋಂದಣಿ ಮಾಡಿಕೊಳ್ಳಬಹುದು. ನೋಂದಣಿ ಮಾಡಿಕೊಳ್ಳಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ ಇದು ನಿರಂತರವಾಗಿ ನಡೆಯುತ್ತದೆ ಎಂದು ಹೇಳಿದರು.
ಹಣ ಕೊಡಬೇಡಿ
ಯೋಜನೆ ಬಗ್ಗೆ ಯಾವುದೇ ಗೊಂದಲವಿದ್ದರೂ ಮೊಬೈಲ್ ಸಂಖ್ಯೆ: 8147500500 ಈ ಸಂಖ್ಯೆಗೆ ಎಸ್ಎಂಎಸ್ ಮಾಡುವುದರ ಮುಖಾಂತರ ಬಗೆ ಹರಿಸಿಕೊಳ್ಳಬಹುದು ಎಂದು ಹೇಳಿದರು. 1902 ಸಹಾಯವಾಣಿಗೆ ಕರೆ ಮಾಡಿ ಕೂಡ ಈ ಯೋಜನೆಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು.
ಇದರ ಜೊತೆಗೆ ಪ್ರಜಾಪ್ರತಿನಿಧಿ ಎಂದು ಸರ್ಕಾರದಿಂದ ಗುರುತಿಸಲ್ಪಟ್ಟ ಸ್ವಯಂಸೇವಕರನ್ನು 1000 ಜನಸಂಖ್ಯೆ ಇದ್ದಾಗ ಇಬ್ಬರು (ಒಬ್ಬರು ಮಹಿಳೆ, ಒಬ್ಬರು ಪುರುಷ) ನೇಮಕ ಮಾಡಲಾಗುತ್ತದೆ. ಮನೆ ಬಾಗಿಲಿಗೆ ತೆರಳಿ ನೋಂದಣಿ ಮಾಡಿಕೊಳ್ಳಲಿದ್ದಾರೆ. ಇದು ಸಂಪೂರ್ಣ ಉಚಿತವಾಗಿರುತ್ತದೆ, ಯಾವುದೇ ಕಾರಣಕ್ಕೂ ಇದಕ್ಕೆ ಹಣ ಕೊಡಬಾರದು ಎಂದು ಅವರು ಮನವಿ ಮಾಡಿದರು.
ಯಾರೇ ಹಣ ಕೇಳಿದರೂ ತಕ್ಷಣ ಸಿಡಿಪಿಒಗಳ ಗಮನಕ್ಕೆ ತೆಗೆದುಕೊಂಡು ಬನ್ನಿ, ಇಲ್ಲ ಕೊಟ್ಟಿರುವ ಮೊಬೈಲ್ ಸಂಖ್ಯೆಗೆ ಮೆಸೇಜ್ ಮಾಡಿದರು ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ಗೃಹಜ್ಯೋತಿ ರೀತಿ ಇದನ್ನು ತಾವೇ ಸ್ವತಃ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ, ನಿಗದಿತ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಹೇಳಿದರು.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications