Gruha Lakshmi Scheme: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಈ ದಿನ ಹಣ ಬಿಡುಗಡೆ ಎಂದ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ, ಫೆಬ್ರವರಿ 24: ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಹಣ ಮಹಿಳೆಯರ ಖಾತೆಗೆ ಜಮೆ ಆಗುವ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಮುಂದಿನ 8 ದಿನಗಳಲ್ಲಿ ಯಜಮಾನಿಯರ ಖಾತೆಗೆ ಜಮೆ ಆಗಲಿದೆ ಎಂದು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಬಿಜೆಪಿಯವರು ಅಪಪ್ರಚಾರ ಮಾಡಲಿ. ನಾವು ಈಗಾಗಲೇ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದೇವೆ. ತಾಲೂಕು ಪಂಚಾಯಿತಿ ಮುಖಾಂತರ ಬಿಡುಗಡೆ ಮಾಡಬೇಕು ಅಂತ ಹೇಳಿರೋದ್ರಿಂದ ಸ್ವಲ್ಪ ತಡವಾಗಿದೆ. ಯಾವುದೇ ಕಾರಣಕ್ಕೂ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ನಿಲ್ಲೋದಿಲ್ಲ. 8-10 ದಿನಗಳಲ್ಲಿ ಬರುತ್ತೆ ಅಂತ ಹೇಳಿದ್ದೆ. 2 ದಿನ ಕಳೆದಿದೆ. ಇನ್ನು 8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

ರಸ್ತೆ ಅಪಘಾತದಿಂದ ನಾನು ವಿಶ್ರಾಂತಿ ಪಡೆಯುತ್ತಿದ್ದೆ. ವಿಶ್ರಾಂತಿಯಲ್ಲಿದ್ದ ಕಾರಣಕ್ಕೆ ಹಣ ವಿಳಂಬವಾಗಿದೆ. ಇನ್ನೊಂದು 8 ದಿನಗಳಲ್ಲಿ ಹಣ ಮಹಿಳೆಯರ ಖಾತೆಗೆ ಜಮೆಯಾಗಲಿದೆ ಎಂದು ಹೇಳಿದ್ದಾರೆ. ಕೆಲವು ತಾಂತ್ರಿಕ ದೋಷಗಳಿಂದ ಮಹಿಳೆಯರ ಖಾತೆಗೆ ಕಳೆದ ಮೂರು ತಿಂಗಳಿಂದ ಹಣ ಜಮೆಯಾಗಿಲ್ಲ. ಆದರೆ ಮುಂದಿನ 8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಜಮೆ ಆಗುತ್ತದೆ. ಹೊಸ ಮಾದರಿಯಲ್ಲಿ ಗೃಹ ಲಕ್ಷ್ಮಿಯ ಹಣ ಜಮಾ ಆಗುತ್ತಿದೆ. ಬೆಂಗಳೂರು ಸುತ್ತಮುತ್ತಲಿನ ಐದು ತಾಲ್ಲೂಕು ಪಂಚಾಯಿತಿಗಳಿಗೆ ಹಣ ನೀಡಿದ್ದೇವೆ. ಅಲ್ಲಿಂದ ಸಿಡಿಪಿಒ ಮೂಲಕ ಹಣ ಬಿಡುಗಡೆ ಮಾಡಲಾಯಿತು. ಸರಿಯಾಗಿ ಒಂದು ವಾರ ಹತ್ತು ದಿನದೊಳಗೆ ಗೃಹ ಲಕ್ಷ್ಮಿಯ ಹಣ ಬಿಡುಗಡೆ ಮಾಡಲಾಗುವುದು ಎಂದರು.
ಬಸ್ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಉತ್ತರಿಸಿ, ಇಂತಹ ಘಟನೆಗಳನ್ನ ಖಂಡಿಸುತ್ತೇನೆ. ಘಟನೆ ನಡೆದು ಐದೇ ನಿಮಿಷಕ್ಕೆ ಕಮಿಷನರ್ ಅವರಿಗೆ ಮಾತಾಡಿದೆ.
ಯಾರು ತಪ್ಪಿತಸ್ಥರಿದ್ದಾರೆ ಅವರನ್ನ ತಕ್ಷಣ ಅರೆಸ್ಟ್ ಮಾಡುವಂತೆ ಹೇಳಿದ್ದೆ. ನಾವೆಲ್ಲರೂ ಮೊದಲು ಭಾರತೀಯರು, ಕನ್ನಡಿಗರು, ಸ್ವರಾಜ್ಯದ ಬಗ್ಗೆ ಮಾತಾಡಿದಾಗ ನಾಲ್ಕೈದು ಜನ ಪುಂಡರು ಬಂದು. ಭಾಷಾ ವಿವಾದ ಎಳೆದು ರಾಜಕೀಯ ಬೆಳೆ ಬೇಯಿಸಿಕೊಳ್ತಿದ್ದಾರೆ ಇದನ್ನ ಖಂಡಿಸುತ್ತೇನೆ.
ನನ್ನ ಕ್ಷೇತ್ರದಲ್ಲಿ ಭಾಷಾ ವಿವಾದ ಕಿತ್ತು ಹಾಕಿದ್ದೇವೆ. ಸರ್ಕಾರಿ ನೌಕರ ಮೇಲೆ ಕೈ ಮಾಡಿದ್ದು ಅಕ್ಷಮ್ಯ ಅಪರಾಧ. ತಪ್ಪಿತಸ್ಥರಿಗೆ ಶಿಕ್ಷೆಯಾಗುವ ರೀತಿ ನಾವೆಲ್ಲಾ ಮಾಡ್ತೇವಿ, ಕರ್ನಾಟಕ ರಾಜ್ಯ ಬೇರೆ ಅಲ್ಲಾ ಇನ್ನೊಂದು ರಾಜ್ಯ ಬೇರೆಯಲ್ಲ. ಆ ರಾಜ್ಯದ ಜನರು ನಮ್ಮ ಬಸ್ ಡ್ರೈವರ್ ಗಳಿಗೆ ಧಮಕಿ ಕೊಡುವುದು ನಿಲ್ಲಬೇಕು. ಇದನ್ನ ಇಲ್ಲಿಗೆ ಮುಗಿಸಬೇಕು. ಸ್ಥಳೀಯ ಸಿಪಿಐ ಕರ್ತವ್ಯ ನಿಭಾಯಿಸುವುದರಲ್ಲಿ ವಿಫಲರಾಗಿದ್ದಾರೆ ಅನ್ನೋದನ್ನ ನಾನು ಕೇಳಿದ್ದೇನೆ. ಸುಮಧುರವಾದ ವಾತಾವರಣ ಇದನ್ನ ಕೆಡಸಬೇಡಿ. ಇದರಲ್ಲಿ ಸ್ಥಳೀಯ ಸಿಪಿಐ ಅವರು ಗಮನಕ್ಕೆ ತರದೇ ಪೋಕ್ಸೋ ಕೇಸ್ ಮಾಡಿದ್ದಾರೆ. ನಾವು ಹೇಳಿದ ಮೇಲೆಯೂ ರಾತ್ರಿ 12ಗಂಟೆಗೆ ಕೇಸ್ ಮಾಡಿದ್ದಾರೆ. ಇದರ ಬಗ್ಗೆ ಗೃಹಸಚಿವರಿಗೆ ಮತ್ತು ಡಿಜಿ ಅವರಿಗೆ ಮಾತಾಡಿದ್ದೇನೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದರು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ












Click it and Unblock the Notifications