Gruha Lakshmi: ಗೃಹಿಣಿಯರಿಗೆ ಸಿಹಿ ಸುದ್ದಿ: ಒಂದೇ ಕಂತಿನಲ್ಲಿ 2 ತಿಂಗಳ ಬಾಕಿ ಹಣ ಜಮೆ
ಬೆಂಗಳೂರು, ಆಗಸ್ಟ್ 06: ಕರ್ನಾಟಕ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿರುವ 'ಗೃಹ ಲಕ್ಷ್ಮಿ' ಯೋಜನೆಗೆ ಇದೇ ಆಗಸ್ಟ್ಗೆ ಒಂದು ವರ್ಷ ತುಂಬುತ್ತಿದೆ. ಕಳೆದ 2023 ಆಗಸ್ಟ್ 30ರಂದು ಸರ್ಕಾರ ಯೋಜನೆಗೆ ಚಾಲನೆ ನೀಡಿತ್ತು. ಆದರೆ ಕಳೆದ ಎರಡು (ಜೂನ್, ಜುಲೈ) ತಿಂಗಳಿನಿಂದ ಹಣ ಜಮೆ ಆಗಿಲ್ಲ ಎಂಬ ದೂರುಗಳು ಬಂದಿವೆ. ಈ ಸಂಬಂಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆಯ ಯಜಮಾನಿಗೆ ಗುಡ್ ನ್ಯೂಸ್ ನೀಡಿದ್ದಾರೆ.
'ಗೃಹ ಲಕ್ಷ್ಮಿ' ಯೋಜನೆಯಡಿ ಮಹಿಳೆಯರ ಬ್ಯಾಂಕ್ ಖಾತೆಗೆ ಮಾಸಿಕ ರೂ.2000 ಜಮೆ ಮಾಡಲಾಗುತ್ತದೆ. ಜೂನ್, ಜುಲೈ ತಿಂಗಳ ಹಣ ಜಮೆ ಆಗಿಲ್ಲ. ಮುಂದಿನ ಒಂದೆರಡು ದಿನಗಳಲ್ಲಿ ಎರಡು ತಿಂಗಳ ಹಣ ಫಲಾನುಭವಿಗಳ ಖಾತೆಗೆ ಏಕಕಾಲಕ್ಕೆ ಜಮೆ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

2 ತಿಂಗಳ ಹಣ ಒಟ್ಟಿಗೆ ಜಮೆ: ಸಚಿವೆ
ಈ ಕುರಿತು ಮಂಡ್ಯದ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವೆ, ತಾಂತ್ರಿಕ ಕಾರಣದಿಂದಾಗಿ ಈ ರೀತಿ ವಿಳಂಬವಾಗಿದೆ. ಯಾರು ಭಯಪಡುವ ಅಗತ್ಯವಿಲ್ಲ. ನಿಮಗೆ ಕಳೆದ ಎರಡು ತಿಂಗಳಿಂದ ಭಾರದ ಗೃಹ ಲಕ್ಷ್ಮೀ ಯೋಜನೆಯ ಹಣ ಆಗಸ್ಟ್ನಲ್ಲಿ ಜಮೆ ಆಗಲಿದೆ ಎಂದು ಹೇಳಿದರು.
ಹಣ ಜಮೆ ವೇಳೆ ಒಂದಷ್ಟು ತಾಂತ್ರಿಕ ಸಮಸ್ಯೆಗಳು ಎದುರಾಗಿದ್ದವು. ಹೀಗಾಗಿ ಯೋಜನೆಯ ಫಲಾನಭವಿಗಳಿಗೆ ಸಕಾಲಕ್ಕೆ ಹಣ ಜಮೆ ಆಗಿಲ್ಲ. ಇದೀಗ ಉಂಟಾದ ತಾಂತ್ರಿಕ ಸಮಸ್ಯೆಯನ್ನು ಸರ್ಕಾರ ಬಗೆಹರಿಸಿದೆ. ಆದಷ್ಟು ಶೀಘ್ರವೇ ನಿಮ್ಮ ಖಾತೆಗೆ ಹಣ ಬರಲಿದೆ. ಆತಂಕ, ಚಿಂತೆ ಪಡಬೇಡಿ, ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳಲಿದೆ ಎಂದರು.
ವರಮಹಾಲಕ್ಷ್ಮೀ ಹಬ್ಬಕ್ಕೂ ಮೊದಲೇ ಗುಡ್ನ್ಯೂಸ್
ಇದಷ್ಟೇ ಅಲ್ಲದೇ ಯೋಜನೆಯಡಿ ನೋಂದಾಯಿ ಫಲಾನುಭವಿಗಳಿಗೆ ಇನ್ನು ಮುಂದೆ ಪ್ರತಿ ತಿಂಗಳು15ನೇ ತಾರೀಖಿನೊಳಗೆ ಹಣ ಜಮೆ ಮಾಡಲು ನಿರ್ಧರಿಸಲಾಗಿದೆ. ನಿಮ್ಮ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗಲಿದೆ ಎಂದು ಅವರು ತಿಳಿಸಿದರು. ಈ ಮೂಲಕ ಮುಂಬರಲಿರುವ ವರಮಹಾಲಕ್ಷ್ಮೀ ಹಬ್ಬಕ್ಕೂ ಮೊದಲೇ ಸಚಿವೆ ಮನೆ ಯಜಮಾನಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಸಚಿವೆ ಹೇಳಿಕೆಯಿಂದ ಅನುಮಾನ ನಿವಾರಣೆ
ರಾಜ್ಯ ಸರ್ಕಾರ ಐದು ಗ್ಯಾರೆಂಟಿ ಘೋಷಣೆಗಳನ್ನು ಜಾರಿ ಮಾಡಿತು. ಈ ಪೈಕಿ ಗೃಹ ಲಕ್ಷ್ಮಿ ಯೋಜನೆಯು ಒಂದಾಗಿದೆ. ಇದರಡಿ ಮನೆಯ ಯಜಮಾನಿಯೊಬ್ಬರಿಗೆ ಮನೆ ನಿರ್ವಹಣೆ, ಆರ್ಥಿಕ ಸ್ಥಿತಿ ಸರಿದೂಗಿಸಲು, ಮಹಿಳೆಯರ ಆರ್ಥಿಕ ಸಬಲತೆಗಾಗಿ ಮಾಸಿಕವಾಗಿ ಎರಡು ಸಾವಿರ ರೂಪಾಯಿ ಹಣ ನೀಡುತ್ತಾ ಬಂದಿದೆ. ಆದರೆ ಕಳೆದ ಎರಡು ತಿಂಗಳಿನಿಂದ ಹಣ ಬಾರದಿದ್ದಾಗ, ಸರ್ಕಾರ ಯೋಜನೆ ನಿಲ್ಲಿಸಿತಾ? ಎಂಬ ಅನುಮಾನ ಕಾಡಿತ್ತು. ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತಿನಿಂದ ಸಂಶಯ, ಗೊಂದಲಗಳು ನಿವಾರಣೆ ಆಗಿದೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications