Gruha Lakshmi scheme: ಈ ದಿನಾಂಕದೊಳಗೆ ಯಜಮಾನಿಯ ಖಾತೆಗೆ ಬರಲಿದೆ ದುಡ್ಡು, ಮಾಹಿತಿ, ವಿವರ ತಿಳಿಯಿರಿ
ಬೆಳಗಾವಿ, ನವೆಂಬರ್, 08: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ "ಗೃಹಲಕ್ಷ್ಮಿ" ಯೋಜನೆಯೂ ಒಂದಾಗಿದೆ. ಈ ಯೋಜನೆಯ ಹಣವು ಮನೆ ಯಜಮಾನಿಗೆ ತಲುಪಲು ವಿಳಂಬವಾಗುತ್ತಿವೆ ಎನ್ನುವ ಆರೋಪಗಳು ಕೇಳಿಬಂದಿವೆ. ಬಳಿಕ ಎಚ್ಚೆತ್ತ ಸರ್ಕಾರ ಹಣ ವರ್ಗಾವಣೆಗೆ ದಿನಾಂಕವನ್ನು ನಿಗಧಿ ಮಾಡಿದೆ.
ಪ್ರತಿ ತಿಂಗಳು 2000 ರೂಪಾಯಿ ನೀಡುತ್ತಿತ್ತು. ಇದೀಗ ಈ ಮಹತ್ವಾಕಾಂಕ್ಷೆಯ ಯೋಜನೆಯಡಿ ಹಣ ವರ್ಗಾವಣೆ ವಿಳಂಬವಾಗುತ್ತಿರುವ ಆರೋಪ ಕೇಳಿಬಂದಿವೆ. ಇನ್ನು ಈ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಹಾಗಾದರೆ ಅವರು ಏನು ಹೇಳಿದ್ದಾರೆ ಎಂದು ಇಲ್ಲಿ ತಿಳಿಯಿರಿ.
ತಾಂತ್ರಿಕ ಸಮಸ್ಯೆಯಿಂದ ಹಣ ವರ್ಗಾವಣೆ ವಿಳಂಬ ಆಗುತ್ತಿದೆ ಮತ್ತು ಇಲಾಖೆಯು ಪ್ರಕ್ರಿಯೆಯನ್ನು ಚುರುಕುಗೊಳಿಸುತ್ತಿದೆ. ಪ್ರತಿ ತಿಂಗಳ 15-20ರ ಒಳಗೆ ಹಣ ವರ್ಗಾವಣೆ ಮಾಡುವುದಾಗಿ ಹಣಕಾಸು ಇಲಾಖೆ ಭರವಸೆ ನೀಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ.

ಸಚಿವೆ ನೀಡಿನ ಭರವಸೆ ಏನು?
20 ಲಕ್ಷಕ್ಕೂ ಹೆಚ್ಚು ಮಹಿಳೆಯರು ಕರ್ನಾಟಕ ಕಾಂಗ್ರೆಸ್ ಸರ್ಕಾರದ "ಗೃಹ ಲಕ್ಷ್ಮಿ" ಯೋಜನೆಯ ಮೊದಲ ಕಂತನ್ನು ಇನ್ನೂ ಸ್ವೀಕರಿಸಿಲ್ಲ ಎನ್ನುವ ಆರೋಪಗಳು ಕೇಳಿಬಂದಿದ್ದವು. ಆದರೆ ಈ ಬಗ್ಗೆ ಪ್ರತಿಕ್ರಯಿಸಿದ ಅವರು, ಈ ಯೋಜನೆಯಿಂದ ಮನೆಯ ಯಜಮಾನಿಗೆ ತಿಂಗಳಿಗೆ 2,000 ರೂಪಾಯಿಗಳ ಆರ್ಥಿಕ ಸಹಾಯ ಸಿಕ್ಕಂತಾಗುತ್ತದೆ. ಕಾಂಗ್ರೆಸ್ ನೇತೃತ್ವದ ಸರ್ಕಾರವು ಆಗಸ್ಟ್ 30ರಂದು ಈ ಯೋಜನೆಯನ್ನು ಪ್ರಾರಂಭಿಸಿತು. ಮತ್ತು ಹಣವನ್ನು ವರ್ಗಾಯಿಸುವಲ್ಲಿ ಹಲವಾರು ಅಡೆತಡೆಗಳನ್ನು ಎದುರಿಸಿತು. ಆದರೆ ಇನ್ನೂ ವಿಳಂಬ ಆಗದಂತೆ ಇಲಾಖೆ ಪ್ರಕ್ರಿಯೆಯನ್ನು ಚುರುಕುಗೊಳಿಸುತ್ತಿದೆ ಎಂದು ತಿಳಿಸಿದರು.
ಹಣ ವರ್ಗಾವಣೆಯಲ್ಲಿ ವಿಳಂಬ ಏಕೆ?
ಸರ್ಕಾರವು ಈ ತಿಂಗಳು 1.10 ಕೋಟಿ ಜನರಿಗೆ ಹಣ ಬಿಡುಗಡೆ ಮಾಡಿದೆ. KYC, ಆಧಾರ್ ಸೇರಿದಂತೆ ಇನ್ನಿತರ ವಿವರಗಳು ಮತ್ತು ಇ-ಆಡಳಿತದಲ್ಲಿನ ತಾಂತ್ರಿಕ ಸಮಸ್ಯೆಗಳಿಂದಾಗಿ ಹಣ ವರ್ಗಾವಣೆಯಲ್ಲಿ ವಿಳಂಬ ಆಗುತ್ತಿದೆ. ಮೊದಲ ಕಂತಿನಲ್ಲಿ ಹಣ ಸಿಗದ ಜನರಿಗೆ ಒಂದೇ ಬಾರಿಗೆ ಎರಡು ತಿಂಗಳು ಹಣ ಪಡೆಯುತ್ತಿದ್ದಾರೆ. ನಾವು ಎಲ್ಲಾ ಬ್ಯಾಂಕ್ಗಳು ಮತ್ತು ನಮ್ಮ ಉದ್ಯೋಗಿಗಳೊಂದಿಗೆ ಸಭೆಗಳನ್ನು ನಡೆಸುತ್ತಿದ್ದೇವೆ. ಮತ್ತು ಪ್ರಕ್ರಿಯೆಯನ್ನು ಸರಳಗೊಳಿಸುತ್ತಿದ್ದೇವೆ ಎಂದು ಹೆಬ್ಬಾಳ್ಕರ್ ಹೇಳಿದರು.
ಹಣಕಾಸು ಇಲಾಖೆಯ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ಹಣ ವರ್ಗಾವಣೆ ಯಾವಾಗ ಎಂದು ಜನರು ಗೊಂದಲಕ್ಕೀಡಾಗಬಾರದು. ಈ ಹಿಂದೆ ಹಣ ಬಿಡುಗಡೆಯಾದಾಗ 25 ದಿನಗಳ ಕಾಲ ಪ್ರಕ್ರಿಯೆ ನಡೆಯುತ್ತಿತ್ತು. ಈಗ ಅದನ್ನು ಕೇವಲ 6 ದಿನಕ್ಕೆ ಇಳಿಸಲಾಗಿದೆ. 23 ಲಕ್ಷ ಜನರ ಕೆವೈಸಿ ಸಮಸ್ಯೆಗಳಿದ್ದವು. ಮತ್ತು ಅವುಗಳಲ್ಲಿ ಹೆಚ್ಚಿನವುಗಳನ್ನು ನಾವು ಪರಿಹರಿಸಿದ್ದೇವೆ. ಸುಮಾರು ಇಂತಹ 7 ಲಕ್ಷ ಪ್ರಕರಣಗಳು ಮಾತ್ರ ಬಾಕಿ ಉಳಿದಿದ್ದು, ಅವುಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು. .
ಹಣ ವರ್ಗಾವಣೆಯಲ್ಲಿನ ಗೊಂದಲದಿಂದಾಗಿ ಹಲವಾರು ಮಹಿಳೆಯರು ಬ್ಯಾಂಕ್ಗಳ ಮೊರೆ ಹೋಗುತ್ತಿದ್ದು, ಈ ಕುರಿತು ವಿಚಾರಿಸಲು ಸಮಸ್ಯೆ ಸೃಷ್ಟಿಯಾಗಿದೆ. ಮುಂದಿನ ತಿಂಗಳೊಳಗೆ ಪ್ರಕ್ರಿಯೆ ಚುರುಕುಗೊಳಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭರವಸೆ ನೀಡಿದರು.
ಕಳೆದ ಎರಡು ತಿಂಗಳಿನಿಂದ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಿದ್ದಿಲ್ಲ ಎಂದು ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಬಳಿಕ ಎಚ್ಚತ್ತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಶೀಘ್ರದಲ್ಲೇ ಈ ಸಮಸ್ಯೆಯನ್ನು ಬಗೆಹರಿಸಿ ನಿಮ್ಮ ಖಾತೆಗೆ ಸರಿಯಾದ ಸಮಯಕ್ಕೆ ಹಣ ಜಮಾ ಆಗುವಂತೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಹಾಗಾದರೆ ಮುಂದಿನ ತಿಂಗಳಲ್ಲಾದರೂ ಈ ಭರವಸೆ ಪ್ರಕಾರ ಅರ್ಹ ಎಲ್ಲಾ ಮಹಿಳೆಯರಿಗೂ ಗೃಹಲಕ್ಷ್ಮಿ ಹಣ ಸಿಗುತ್ತಾ ಎಂದು ಕಾದುನೋಡಬೇಕಿದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications