Gruhalakshmi Scheme: ಗೃಹಲಕ್ಷ್ಮಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್: ₹4,000 ಜಮಾ ಬಗ್ಗೆ ಅಪ್ಡೇಟ್
Gruhalakshmi Scheme: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿಯಲ್ಲಿ ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿ ನೀಡಲಾಗುತ್ತದೆ. ಹಾಗೆಯೇ ಇದೀಗ ಎರಡು ಕಂತುಗಳ ಹಣ ಬಿಡುಗಡೆ ಬಗ್ಗೆ ಮಹತ್ವದ ಮಾಹಿತಿಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿದ್ದಾರೆ.
ಹೌದು.. ರಾಜ್ಯದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ವೀರಭೂಮಿ ಸ್ಮಾರಕದ ಲೋಕಾರ್ಪಣೆ ಸಮಾರಂಭ ನಡೆಯಿತು. ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾಗವಹಿಸಿ ಈ ಕುರಿತು ಮಾತನಾಡಿದ್ದು, ಸಿಎಂ ಸಿದ್ದರಾಮಯ್ಯ ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಎರಡು ತಿಂಗಳ ಹಣ ಬಿಡುಗಡೆ ಯಾವಾಗ?: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹ ಲಕ್ಷ್ಮೀ ಯೋಜನಾ ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಎರಡು ತಿಂಗಳ ಹಣ ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ತಿಳಿಸಿದರು. ಇದೇ ವೇಳೆ ರಾಜಕೀಯದಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ಪ್ರಯತ್ನಗಳು ನಡೆಯುತ್ತಿವೆ ಅಂತಲೂ ಹೇಳಿದರು.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ಸಮನವಾಗಿ ತಲುಪುತ್ತಿವೆ. ಎಷ್ಟೋ ಜನರಿಗೆ ಗೃಹಲಕ್ಷ್ಮೀ ಹಣ ಬಂದಿದೆ. ಇದರಿಂದ ಮಹಿಳೆಯರ ಜೀವನ ಉತ್ತಮ ಆಗಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಜನರ ಜೀವನ ಉತ್ತಮಗೊಂಡಿದೆ ಎಂದು ತಿಳಿಸಿದರು.
"ಸಿಎಂ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡಿದ್ದೇನೆ. ಆದಷ್ಟು ಬೇಗ ಅವರ ಖಾತೆಗೆ ಹಾಕುವಂತೆ ಸೂಚನೆ ನೀಡಿದ್ದಾರೆ," ಎಂದು ಘೋಷಿಸಿದರು. ಇನ್ನೂ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮಹಿಳೆಗೆ ಪ್ರತಿ ತಿಂಗಳು ಪ್ರತಿ ಮನೆ ಯಜಮಾನಿಗೆ 2,000 ರೂಪಾಯಿ ನೀಡಲಾಗುತ್ತದೆ. ಕೆಲವು ತಿಂಗಳುಗಳಿಂದ ಹಣ ಬಿಡುಗಡೆಯಲ್ಲಿ ವಿಳಂಬ ಆದ ಕಾರಣ ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಶೀಘ್ರವೇ ಹಣ ಜಮಾ: ಗೃಹಲಕ್ಷ್ಮಿ ಯೋಜನೆಯು ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದ್ದು, ಇದು ಬಡ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ತುಂಬಾ ಸಹಾಯ ಆಗುತ್ತಿದೆ. ಇದೀಗ ಸಚಿವೆ ಹೆಬ್ಬಾಳ್ಕರ್ ಅವರ ಈ ಮಹತ್ವದ ಘೋಷಣೆಯಿಂದ ಲಕ್ಷಾಂತರ ಮಹಿಳೆಯರಿಗೆ ಸಂತಸ ಆದಂತಾಗಿದೆ. ಅವರು ಹೇಳಿರುವ ಪ್ರಕಾರ, ಹಣ ಶೀಘ್ರವೇ ಫಲಾನುಭವಿಗಳ ಖಾತೆಗೆ ಜಮಾ ಆಗುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ.
ರಾಯಣ್ಣನ ಬಗ್ಗೆ ಹೆಬ್ಬಾಳ್ಕರ್ ಹೇಳಿದ್ದೇನು?: ರಾಯಣ್ಣ ವೀರಭೂಮಿ ಲೋಕಾರ್ಪಣೆ ಸಮಾವೇಶ ಸಮಾರಂಭದಲ್ಲಿ ಭಾಷಣ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇಡೀ ರಾಷ್ಟ್ರಕ್ಕೆ ಹೆಮ್ಮೆಯಾಗುವಂತಹ ಕೆಲಸ ರಾಯಣ್ಣ ವೀರಭೂಮಿ ಲೋಕಾರ್ಪಣೆಯ ಮೂಲಕ ನಡೆದಿದೆ ಎಂದು ಹೇಳಿದರು. ಸಂಗೊಳ್ಳಿ ರಾಯಣ್ಣ ಅಂದರೆ ಧೈರ್ಯ, ವಿಶ್ವಾಸ, ತ್ಯಾಗ ಮತ್ತು ದೇಶಭಕ್ತಿ. ರಾಯಣ್ಣ ಹೆಸರು ಕೇಳಿದರೆ ಸಾಕು ರೋಮಾಂಚನವಾಗುತ್ತದೆ ಎಂದು ವರ್ಣನೆ ಮಾಡಿದರು.
33 ವರ್ಷದಲ್ಲಿ ರಾಯಣ್ಣರನ್ನು ಗಲ್ಲಿಗೇರಿಸಲಾಯಿತು. ಆದರೆ ಸೂರ್ಯ, ಚಂದ್ರ ಇರುವವರೆಗೂ ಅವರ ಹೆಸರು ಉಳಿಯುತ್ತದೆ ಎಂದು ಹೇಳಿದರು. ಇಂತಹ ಮಹಾನ್ ನಾಯಕರಿಂದಲೇ ನಮಗೆ ಸ್ವಾತಂತ್ರ್ಯ ಸಿಕ್ಕಿದೆ ಎಂದು ಸ್ಮರಿಸಿದರು. ಹೀಗೆ ರಾಯಣ್ಣನ ಬಗ್ಗೆ ಮಾತನಾಡಿದ್ದು, ಇದೇ ವೇಳೆ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಕುರಿತು ಈ ಮಹತ್ವದ ಮಾಹಿತಿ ಬಿಚ್ಚಿಟ್ಟರು. ಎರಡು ಕಂತುಗಳ ಹಣ ಶೀಘ್ರದಲ್ಲೇ ಜಮಾ ಆಗಲಿದೆ ಎನ್ನುವ ಭರವಸೆ ನೀಡಿದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications