Get Updates
Get notified of breaking news, exclusive insights, and must-see stories!

Gruha Lakshmi Scheme Launch LIVE: ಇಲ್ಲಿ ಮೋದಿ ಅಂತ ಹೇಳಿದರೆ ಕೇಸ್ ಹಾಕ್ತಾರೆ: ಖರ್ಗೆ ವಾಗ್ದಾಳಿ

ಮೈಸೂರು, ಆಗಸ್ಟ್ 30: ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಪ್ರಮುಖ ಕಾರಣಗಳಲ್ಲೊಂದು ಗೃಹಲಕ್ಷ್ಮಿ ಯೋಜನೆ. ಪಂಚ ಗ್ಯಾರಂಟಿಗಳಲ್ಲೊಂದಾದ ಈ ಯೋಜನೆಯಡಿ ಕುಟುಂಬದ ಯಜಮಾನಿಗೆ ಮಾಸಿಕ ಎರಡು ಸಾವಿರ ರೂಪಾಯಿ ಹಣವನ್ನು ಸರ್ಕಾರ ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆ ಮಾಡಲಿದೆ. ಸರ್ಕಾರದ ಈ ಮಹತ್ವಾಕಾಂಕ್ಷೆ ಯೋಜನೆಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಮೈಸೂರಿನಲ್ಲಿ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದ ಲೈವ್ ಅಪ್ಡೇಟ್ಸ್ ಅನ್ನು ಈ ಪೇಜಿನಲ್ಲಿ ನೀಡಲಾಗುತ್ತದೆ.

Gruhalakshmi Scheme Launch Today Live News updates in Kannada Rahul Gandhi To inaugurate from Mysuru

Aug 30, 2023, 2:51 pm IST

ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ 'ಗೃಹ ಲಕ್ಷ್ಮಿ' ಯೋಜನೆ ಜಾರಿ ಕಾರ್ಯಕ್ರಮ ಮುಕ್ತಾಯವಾಗಿದೆ.
Aug 30, 2023, 2:44 pm IST

ನುಡಿದಂತೆ ನಡೆದಿದ್ದೇವೆ : ಸಿದ್ದರಾಮಯ್ಯ

ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಕೊಟ್ಟ ಭರವಸೆ ಈಡೇರಿಸಿದ್ದೇವೆ, ಈ ಗ್ಯಾರಂಟಿಗಳು ಜಾರಿಯಾದ್ರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಮೋದಿ ಟೀಕೆ ಮಾಡಿದ್ರು, ಆದರೆ ನಾವು ನಮ್ಮ ಎಲ್ಲಾ ಗ್ಯಾರಂಟಿಗಳನ್ನ ಜಾರಿಗೆ ಮಾಡಿದ್ದೇವೆ, ನುಡಿದಂತೆ ನಡೆದಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.
Aug 30, 2023, 2:41 pm IST

1.10 ಕೋಟಿ ಫಲಾನುಭವಿಗಳ ಖಾತೆ ತಲಾ 2,000 ರೂಪಾಯಿ ಜಮ: ಸಿದ್ದರಾಮಯ್ಯ

1.10 ಕೋಟಿ ಫಲಾನುಭವಿಗಳ ಖಾತೆ ತಲಾ 2,000 ರೂಪಾಯಿ ಜಮೆ ಮಾಡಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು. ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ ಗ್ಯಾರಂಟಿ ಈಗಾಗಲೇ ಜಾರಿ ಮಾಡಿದ್ದೇವೆ. ಮನೆ ಯಜಮಾನಿ ಖಾತೆಗೆ 2 ಸಾವಿರ ರೂಪಾಯಿ ಜಮೆ ಮಾಡಿದ್ದೇವೆ ಎಂದರು
Aug 30, 2023, 2:32 pm IST

ನುಡಿದಂತೆ ನಡೆದಿದ್ದೇವೆ - ಸಚಿವ ಪ್ರಿಯಾಂಕ್ ಖರ್ಗೆ.

ಪ್ರಜಾಧ್ವನಿ ಯಾತ್ರೆಯ ಸಂದರ್ಭದಲ್ಲಿ ರಾಜ್ಯದ ಜನರ ಸಮಸ್ಯೆಗಳನ್ನು ಅರಿತ ನಂತರ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿತು. ಅಂದು ಮಾಡಿದ ಘೋಷಣೆಯನ್ನು ನಮ್ಮ ಸರ್ಕಾರ ಇಂದು‌ ಜಾರಿಗೆ ತಂದು ನುಡಿದಂತೆ ನಡೆದುಕೊಂಡಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
Aug 30, 2023, 2:29 pm IST

ಕಾಂಗ್ರೆಸ್ ಸಾಧನೆಯ ರೆಕಾರ್ಡ್ ನನ್ನ ಬಳಿ ಇದೆ: ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ 50 ವರ್ಷದಲ್ಲಿ ಏನು ಮಾಡಿಲ್ಲ ಅಂತ ಹೇಳ್ತಾರೆ. ನಾವು ಮಾಡಿದ್ದು ಬಹಳ ಇದೆ. 1947ರ ಹಿಂದೆ 2 ಲಕ್ಷ ಪ್ರಾರ್ಥಮಿಕ ಶಾಲೆಗಳಿದ್ದವು. ಈಗ 8 ಲಕ್ಷ ಇದೆ. ಸೋನಿಯಾ ಗಾಂಧಿಯವರು ಫುಡ್ ಸೆಕ್ಯೂರಿಟಿ ಆ್ಯಕ್ಟ್ ತಂದ್ರು, ಅದಕ್ಕೆ ಉಚಿತ ಅನ್ನ ಭಾಗ್ಯವೂ ನಾವು ತಂದದ್ದು. ಬಡವರಿಗಾಗಿ ನಾವು ಯೋಜನೆಗಳನ್ನು ಮಾಡಿದ್ದೇವೆ. ಆದರೆ ಅವರು ಶ್ರೀಮಂತರಿಗಾಗಿದ್ದಾರೆ. ಕಾಂಗ್ರೆಸ್ ಸಾಧನೆಯ ರೆಕಾರ್ಡ್ ನನ್ನ ಬಳಿ ಇದೆ ಎಂದು ಖರ್ಗೆ ಹೇಳಿದರು.
Aug 30, 2023, 2:25 pm IST

ಇಲ್ಲಿ ಮೋದಿ ಅಂತ ಹೇಳಿದರೆ ಕೇಸ್ ಹಾಕ್ತಾರೆ: ಖರ್ಗೆ

ಇಲ್ಲಿ ಮೋದಿ ಅಂತ ಹೇಳಿದರೆ ಕೇಸ್ ಹಾಕ್ತಾರೆ. ಮೋದಿ ಎಂದಿದಕ್ಕೆ ರಾಹುಲ್ ಗಾಂಧಿ ಮೇಲೆ ಕೇಸ್ ಹಾಕಿದರು. ಆದ್ರೆ ರಾಹುಲ್ ಯಾವುದಕ್ಕೂ ಹೆದರುವುದಿಲ್ಲ. ಕನ್ಯಾಕುಮಾರಿಯಿಂದ ಕಶ್ಮೀರವರೆಗೆ ಪಾದಯಾತ್ರೆ ಮಾಡಿ ರಾಹುಲ್ ಗಾಂಧಿ ಜನರ ಮಾತು ಆಲಿಸಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ದ ಮಲ್ಲಿಕಾರ್ಜುನ್‌ ಖರ್ಗೆ ವಾಗ್ದಾಳಿ ನಡೆಸಿದರು.
Aug 30, 2023, 2:21 pm IST

ದೇಶದ ಸಂವಿಧಾನವನ್ನ ಕಳೆದುಕೊಳ್ಳಬೇಡಿ: ಖರ್ಗೆ

ದೇಶದ ಸಂವಿಧಾನವನ್ನ ಕಳೆದುಕೊಳ್ಳಬೇಡಿ, ಅದಕ್ಕೆ ಬೇಕಾದ ಹೋರಾಟವನ್ನ ನೀವು ಮಾಡಿ, ಸಂವಿಧಾನಕ್ಕಾಗಿ ನಾವೇಲ್ಲ ಹೋರಾಟ ಮಾಡುತ್ತಿದ್ದೇವೆ ಎಂದು ಮಲ್ಲಿಕಾರ್ಜುನ್‌ ಖರ್ಗೆ ಹೇಳಿದರು.
Aug 30, 2023, 2:17 pm IST

ಗೃಹ ಲಕ್ಷ್ಮೀ ಯೋಜನೆ ಜಾರಿ; ಕೇಂದ್ರ ನಾಯಕರ ವಿರುದ್ಧ ಖರ್ಗೆ ವಾಗ್ದಾಳಿ

50 ವರ್ಷದಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಂದ್ರ ನಾಯಕರು ಕೇಳುತ್ತಾರೆ. ಆದರೆ, ನಾವು ವಿಮಾನ ನಿಲ್ದಾಣ, ಅನೇಕ ಸಂಸ್ಥೆಗಳನ್ನು ಮಾಡಿದ್ದೇವೆ. ನಾವು ಮಾಡಿದ ಕೆಲಸಗಳಲ್ಲಿ ಹುಡುಕಾಡಿ ಸುಟ್ಟ ಬಣ್ಣ ಬಳಿದು ನಾವು ಮಾಡಿದ್ದೇವೆ ಎಂದು ಹೇಳುತ್ತಾರೆ ನಮ್ಮ ಬಳಿ ಕಾಂಗ್ರೆಸ್ ಸರ್ಕಾರ ಏನು ಮಾಡಿದೆ ಎಂಬ ರಿಪೋರ್ಟ್ ಕಾರ್ಡ್ ಇದೆ ಎಂದು ಹೇಳಿದರು.
Aug 30, 2023, 2:16 pm IST

ರಾಹುಲ್‌ ಗಾಂಧಿ ಯಾರಿಗೂ ಹೆದರುವುದಿಲ್ಲ: ಖರ್ಗೆ

ದೇಶದ ಉದ್ದಗಲಕ್ಕೂ ರಾಹುಲ್‌ ಗಾಂಧಿ ಪಾದಯಾತ್ರೆ ಮಾಡಿದ್ದಾರೆ. ರಾಹುಲ್‌ ಗಾಂಧಿಗೆ ಯಾರೇ ಏನೇ ಮಾಡಿದರು ಹೆದರುವುದಿಲ್ಲ ಎಂದು ಮಲ್ಲಿಕಾರ್ಜುನ್‌ ಖರ್ಗೆ ಹೇಳಿದರು.
Aug 30, 2023, 2:16 pm IST

ಕಾಂಗ್ರೆಸ್​ನ 100 ದಿನದ ಸಂಭ್ರಮ; QR scan ಮಾಡಿ ಸರ್ಕಾರದ ಸಾಧನೆಯನ್ನು ಓದಬಹುದು
Aug 30, 2023, 2:14 pm IST

ಕೇಂದ್ರ ನಾಯಕರು ಟೀಕೆ ಮಾಡಿದರು; ನಾವು ಮಾಡಿ ತೊರಿಸಿದ್ದೇವೆ: ಖರ್ಗೆ

ಕೇಂದ್ರ ನಾಯಕರು ಟೀಕೆ ಮಾಡಿದರು; ನಾವು ಮಾಡಿ ತೊರಿಸಿದ್ದೇವೆ: ಖರ್ಗೆ
ಗ್ಯಾರಂಟಿ ಯೋಜನೆಗಳ ಕುರಿತು ಕೇಂದ್ರ ನಾಯಕರು ಟೀಕೆ ಮಾಡಿದ್ರು, ಆದರೆ, ನಾವು ಇದನ್ನು ಮಾಡಿ ತೊರಿಸಿದ್ದೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಹೇಳಿದರು. ಯಾವ ಸರ್ಕಾರವೂ ಈ ರೀತಿಯ ಯೋಜನೆಗಳನ್ನು ಮಾಡಿಲ್ಲ. ಇಡೀ ಭಾರತದಲ್ಲಿ ಒಪ್ಪುವಂತಹ ಗ್ಯಾರಂಟಿಗಳಿವು ಎಂದು ಹೇಳಿದರು.
Aug 30, 2023, 2:01 pm IST

ಸರ್ಕಾರದ ಯೋಜನೆಗೆ ಜನತೆ ಸಂಭ್ರಮಿಸುತ್ತಿರುವುದು ನಮ್ಮಲ್ಲಿ ಸಾರ್ಥಕತೆ ಮೂಡಿಸುತ್ತಿದೆ: ಕಾಂಗ್ರೆಸ್‌
Aug 30, 2023, 2:00 pm IST

ಕರ್ನಾಟಕ ಇಡೀ ದೇಶಕ್ಕೆ ದಿಕ್ಸೂಚಿ : ರಾಹುಲ್ ಗಾಂಧಿ

ಕರ್ನಾಟಕ ಇಡೀ ದೇಶಕ್ಕೆ ದಿಕ್ಸೂಚಿಯಾಗಿದೆ. ನಮ್ಮ ಗ್ಯಾರಂಟಿ ಘೋಷಣೆ ವೇಳೆ ಕೇಂದ್ರ ಸರ್ಕಾರ ಟೀಕೆ ಮಾಡಿತ್ತು. ಆದ್ರೆ ನಾವಿಂದು ನುಡಿದಂತೆ ನಡೆದಿದ್ದೇವೆ ಎಂದು ರಾಹುಲ್‌ ಗಾಂಧಿ ಹೇಳಿದರು.
Aug 30, 2023, 1:58 pm IST

ಇದು ನನ್ನ ಜೀವನದ ಸಾರ್ಥಕ ಕ್ಷಣ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಇದು ನನ್ನ ಜೀವನದ ಸಾರ್ಥಕ ಕ್ಷಣ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ 'ಗೃಹ ಲಕ್ಷ್ಮಿ' ಯೋಜನೆಗೆ ಬುಧವಾರ ವಿದ್ಯುಕ್ತ ಚಾಲನೆ ನೀಡಲಾಗಿದ್ದು, ಜಗತ್ತಿನಲ್ಲಿ ವಿಶಿಷ್ಠವಾದ ಇಂತಹ ಯೋಜನೆಯನ್ನು ನನ್ನ ಇಲಾಖೆಯಿಂದ ಜಾರಿಗೊಳಿಸುತ್ತಿರುವುದು ನನಗೆ ಖುಷಿ ತಂದಿದೆ . ಇದು ನನ್ನ ಜೀವನದ ಸಾರ್ಥಕ ಕ್ಷಣ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು
Aug 30, 2023, 1:51 pm IST

ಮಹಿಳೆಯರಿಲ್ಲದೆ ಕರ್ನಾಟಕ ನಿಲ್ಲಲು ಸಾಧ್ಯವಿಲ್ಲ: ರಾಹುಲ್‌ ಗಾಂಧಿ

ಮಹಿಳೆಯರಿಲ್ಲದೆ ಕರ್ನಾಟಕ ನಿಲ್ಲಲು ಸಾಧ್ಯವಿಲ್ಲ: ರಾಹುಲ್‌ ಗಾಂಧಿ
ಬೇರು ಇಲ್ಲದೆ ಮರ ನಿಲ್ಲಲು ಸಾಧ್ಯವಿಲ್ಲವು ಅದೇ ರೀತಿ ಮಹಿಳೆಯರಿಲ್ಲದೆ ಕರ್ನಾಟಕ ನಿಲ್ಲಲು ಸಾಧ್ಯವಿಲ್ಲ ಎಂದು ರಾಹುಲ್‌ ಗಾಂಧಿ ಹೇಳಿದರು. ಕಾಂಗ್ರೆಸ್‌ ನ 5 ಗ್ಯಾರಂಟಿಗಳ ಪೈಕಿ 4 ಗ್ಯಾರಂಟಿಗಳು ಮಹಿಳೆಯರ ಸಬಲೀಕರಣಕ್ಕೆ ಜಾರಿ ಮಾಡಿದ್ದೇವೆ ಎಂದರು.
Aug 30, 2023, 1:48 pm IST

ನಮ್ಮ ಐದು ಗ್ಯಾರಂಟಿಗಳ ಪೈಕಿ 4 ಗ್ಯಾರಂಟಿಗಳು ಮಹಿಳೆಯರಿಗಾಗಿ: ರಾಹುಲ್‌ ಗಾಂಧಿ

ನಮ್ಮ ಐದು ಗ್ಯಾರಂಟಿಗಳ ಪೈಕಿ 4 ಗ್ಯಾರಂಟಿಗಳು ಮಹಿಳೆಯರಿಗಾಗಿ ಮಾಡಿರುವ ಯೋಜನೆಗಳು ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಹೇಳಿದರು. ರಾಜ್ಯದ ಹೆಣ್ಣು ಮಕ್ಕಳು ಉಚಿತವಾಗಿ ಶಕ್ತಿ ಯೋಜನೆ ಜಾರಿಯಾಗಿದೆ. ಅನ್ನ ಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡಲಾಗುತ್ತಿದೆ. ಗ್ರಹ ಜ್ಯೋತಿಯಡಿ 200 ಯುನಿಟ್ ವಿದ್ಯುತ್ ನೀಡಲಾಗುತ್ತಿದೆ ಎಂದು ಹೇಳಿದರು.
Aug 30, 2023, 1:42 pm IST

ಗೃಹ ಲಕ್ಷ್ಮೀ ಯೋಜನೆ ಜಾರಿ ಬಳಿಕ ರಾಹುಲ್‌ ಗಾಂಧಿ ಮಾತು

ಗೃಹ ಲಕ್ಷ್ಮೀ ಯೋಜನೆ ಜಾರಿ ಬಳಿಕ ರಾಹುಲ್‌ ಗಾಂಧಿ ಮಾತು
ಚುನಾವಣೆ ಪೂರ್ವದಲ್ಲಿ ನಮ್ಮ ನಾಯಕರು 5 ಗ್ಯಾರಂಟಿಗಳನ್ನ ನೀಡಿದ್ದೇವೆ, ಅದರಂತೆ ಕಾಂಗ್ರೆಸ್‌ ಕೊಟ್ಟಂತ ಮಾತನ್ನ ಉಳಿಸಿಕೊಂಡಿದೆ. ಕೊಟ್ಟ ಮಾತನ್ನ ಉಳಿಸಿಕೊಳ್ಳುವು ಕಾಂಗ್ರೆಸ್‌ ಮಾತ್ರ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದರು.
Aug 30, 2023, 1:37 pm IST

ಸರ್ಕಾರಕ್ಕೆ 100 ದಿನದ ಸಂಭ್ರಮ ಕಿರುಹೊತ್ತಿಗೆ ಬಿಡುಗಡೆ ಮಾಡಿದ ಖರ್ಗೆ, ರಾಹುಲ್‌ ಗಾಂಧಿ

ರಾಜ್ಯ ಸರ್ಕಾರದ ಬಹು ನಿರೀಕ್ಷೆಯ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮದಲ್ಲಿ ಸರ್ಕಾರಕ್ಕೆ ನೂರು ದಿನ ಪೂರೈಸಿದ ಹಿನ್ನಲೆ 100 ದಿನದ ಕಿರುಹೊತ್ತಿಗೆಯನ್ನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಹಾಗೂ ರಾಹುಲ್‌ ಗಾಂಧಿ ಬಿಡುಗಡೆ ಮಾಡಿದರು.
Aug 30, 2023, 1:33 pm IST

ಡಿಜಿಟಲ್ ಬಟನ್ ಒತ್ತುವ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಡಿಜಿಟಲ್ ಬಟನ್ ಒತ್ತುವ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಹಾಗೂ ರಾಹುಲ್‌ ಗಾಂಧಿ ಚಾಲನೆ ನೀಡಿದರು. ಕಾರ್ಯಕ್ರಮದ ವೇದಿಕೆ ಮೇಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಸಚಿವರಾದ ಡಾ.ಜಿ.ಪರಮೇಶ್ವರ್, ಡಾ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳ್ಕರ್, ಕೆ.ವೆಂಕಟೇಶ್, ಕೃಷ್ಣ ಭೈರೇಗೌಡ, ಚಲುವರಾಯಸ್ವಾಮಿ, ಕೆ.ಎನ್.ರಾಜಣ್ಣ ಉಪಸ್ಥಿತರಿದ್ದಾರೆ.
Aug 30, 2023, 1:31 pm IST

100 ದಿನದಲ್ಲಿ ನಾವು ನುಡಿದಂತೆ ನಡೆದಿದ್ದೇವೆ: ಡಿ ಕೆ ಶಿವಕುಮಾರ್‌

ಬೆಲೆ ಏರಿಕೆಯಿಂದ ರಾಜ್ಯದ ಜನತೆ ತತ್ತರಿಸಿ ಹೋಗಿದ್ರು, ಹೀಗಾಗಿ ನಾನು ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ ಈ ಗ್ಯಾರಂಟಿಗಳನ್ನ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಜಾರಿಗೊಳಿಸಿದ್ದೇವೆ. 100 ದಿನದಲ್ಲಿ ನಾವು ನುಡಿದಂತೆ ನಡೆದಿದ್ದೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.
Aug 30, 2023, 1:30 pm IST

100 ದಿನದಲ್ಲಿ ನಾವು ನುಡಿದಂತೆ ನಡೆದಿದ್ದೇವೆ: ಡಿ ಕೆ ಶಿವಕುಮಾರ್‌

100 ದಿನದಲ್ಲಿ ನಾವು ನುಡಿದಂತೆ ನಡೆದಿದ್ದೇವೆ: ಡಿ ಕೆ ಶಿವಕುಮಾರ್‌
ಬೆಲೆ ಏರಿಕೆಯಿಂದ ರಾಜ್ಯದ ಜನತೆ ತತ್ತರಿಸಿ ಹೋಗಿದ್ರು, ಹೀಗಾಗಿ ನಾನು ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ ಈ ಗ್ಯಾರಂಟಿಗಳನ್ನ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಜಾರಿಗೊಳಿಸಿದ್ದೇವೆ. 100 ದಿನದಲ್ಲಿ ನಾವು ನುಡಿದಂತೆ ನಡೆದಿದ್ದೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.
Aug 30, 2023, 1:30 pm IST

ರಾಹುಲ್‌ ಗಾಂಧಿಯವರನ್ನ ಕರುನಾಡಿಗೆ ಪ್ರೀತಿಯಿಂದ ಬರಮಾಡಿಕೊಂಡೆ: ಸಿದ್ದರಾಮಯ್ಯ
Aug 30, 2023, 1:22 pm IST

ಸಂವಿಧಾನದ ಪೀಠಿಕೆ ಓದಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್‌ ಸಿ ಮಹದೇವಪ್ಪ

ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮವನ್ನ ಜ್ಯೋತಿ ಬೆಳಗುವ ಮೂಲಕ ಕಾಂಗ್ರೆಸ್‌ ನಾಯಕರು ಚಾಲನೆ ನೀಡದ ಬಳಿಕ ಮೈಸೂರು ಜಿಲ್ಲಾ ಉಸ್ತುವಾರ ಸಚಿವ ಎಚ್‌ ಸಿ ಮಹದೇವಪ್ಪ ಸಂವಿಧಾನದ ಪೀಠಿಕೆಯನ್ನ ಓದಿದರು.
Aug 30, 2023, 1:15 pm IST

ಜ್ಯೋತಿ ಬೆಳಗುವ ಮೂಲಕ ಗೃಹಲಕ್ಷ್ಮೀ ಯೋಜನೆ ಚಾಲನೆ

ರಾಜ್ಯ ಸರ್ಕಾರದ ಬಹು ನಿರೀಕ್ಷೆಯ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮವನ್ನ ಜ್ಯೋತಿ ಬೆಳಗುವ ಮೂಲಕ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಸೇರಿದಂತೆ ಹಲವು ನಾಯಕರು ಚಾಲನೆ ನೀಡಿದರು.
Aug 30, 2023, 1:10 pm IST

ರಾಹುಲ್‌ ಗಾಂಧಿ ಹಾಗೂ ಮಲ್ಲಿಕಾರ್ಜುನ್‌ ಖರ್ಗೆ ಅವರಿಗೆ ಸನ್ಮಾನ

ರಾಜ್ಯ ಸರ್ಕಾರದ ಬಹು ನಿರೀಕ್ಷೆಯ ಗೃಹಲಕ್ಷ್ಮೀ ಯೋಜನೆಗೆ ಆಗಮಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರಿಗೆ ಗಣ್ಯರಿಂದ ಸನ್ಮಾನ ಮಾಡಲಾಯಿತು
Aug 30, 2023, 1:03 pm IST

ಬಳ್ಳಾರಿಯಲ್ಲಿ ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ

ರಾಜ್ಯ ಸರ್ಕಾರದ ಬಹು ನಿರೀಕ್ಷೆಯ ಗೃಹಲಕ್ಷ್ಮೀ ಯೋಜನೆಗೆ ಬಳ್ಳಾರಿ ನಗರದ ಮುನ್ಸಿಪಲ್ ಕಾಲೇಜಿನ ಮೈದಾನದಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಗೃಹಲಕ್ಷ್ಮಿ ಯೋಜನೆಯ ನೇರ ನಗದು ವರ್ಗಾವಣೆಯ ಚಾಲನಾ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಚಾಲನೆ ನೀಡಿದರು‌.
Aug 30, 2023, 12:59 pm IST

ವೇದಿಕೆಯಿಂದ ಕಾರ್ಯಕರ್ತರು ಹಾಗೂ ಮಹಿಳೆಯರತ್ತ ಕೈ ಬೀಸಿದ ರಾಹುಲ್‌ ಗಾಂಧಿ, ಖರ್ಗೆ

ಗೃಹಲಕ್ಷ್ಮೀ ಯೋಜನೆಗೆ ಇಂದು ಮೈಸೂರಿನಲ್ಲಿ ಚಾಲನೆ ಕಾರ್ಯಕ್ರಮದ ವೇದಿಕೆಗೆ ಆಗಮಿಸಿದ ರಾಹುಲ್‌ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರು ಕಾರ್ಯಕರ್ತರು ಹಾಗೂ ಮಹಿಳೆಯರತ್ತ ಕೈ ಬೀಸಿದರು.
Aug 30, 2023, 12:55 pm IST

ಮಹಾರಾಜ ಕಾಲೇಜು ಮೈದಾನಕ್ಕೆ ಆಗಮಿಸಿದ ರಾಹುಲ್‌ ಗಾಂಧಿ ಆಗಮನ

ಮೈಸೂರಿನಲ್ಲಿ ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆ ಜಾರಿ ಹಿನ್ನೆಲೆ ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ರಾಹುಲ್‌ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಸೇರಿದಂತೆ ಹಲವು ನಾಯಕರು ಆಗಮನ
Aug 30, 2023, 12:52 pm IST

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ
Aug 30, 2023, 12:45 pm IST

ಸಿದ್ದರಾಮಯ್ಯ ಕೈ ಹಿಡಿದು ಬಂದು ರಾಹುಲ್‌ ಗಾಂಧಿ
READ MORE

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+