Breaking: ಜಿಎಸ್ಟಿ ಸಭೆ: ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ
ಬೆಂಗಳೂರು, ಜೂ. 17: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಯಲ್ಲಿ ಇಂದು ನಡೆಯಲಿರುವ ಜಿ.ಎಸ್.ಟಿ ಸಚಿವರ ಮಂಡಳಿ (ಗ್ರೂಪ್ ಆಫ್ ಮಿನಿಸ್ಟರ್ಸ್) ಸಭೆಯಲ್ಲಿ ಭಾಗವಹಿಸಲು ತೆರಳಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಧ್ಯಾಹ್ನ 2.30ಕ್ಕೆ ಜಿಎಸ್ಟಿ ಸಭೆ ನಡೆಯಲಿದ್ದು, ಕರ್ನಾಟಕ ಭವನದಿಂದ ವೀಡಿಯೊ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇಂದು ಸಂಜೆಯೇ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.

Recommended Video
ದುಬೈನಲ್ಲಿ ಬಿಎಸ್ವೈ ಫ್ಯಾಮಿಲಿ ಆಸ್ತಿ ಹೊಂದಿರೋದು ನಿಜಾನಾ!! *Politics | OneIndia Kannada
"ದೆಹಲಿ ಭೇಟಿ ಅಲ್ಪಾವಧಿಯದ್ದು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬೆಂಗಳೂರಿಗೆ ನಾಳೆ ಆಗಮಿಸುತ್ತಿದ್ದಾರೆ. ದೆಹಲಿಯಲ್ಲಿ ಯಾರನ್ನೂ ಭೇಟಿಯಾಗುವ ಉದ್ದೇಶ ಇಲ್ಲ. ಯಾರನ್ನೂ ಭೇಟಿಯಾಗಲು ಕಾಲಾವಕಾಶವನ್ನೂ ಕೇಳಿಲ್ಲ," ಎಂದು ಏರ್ಪೋರ್ಟ್ಗೆ ತೆರಳುವುದಕ್ಕೂ ಮುನ್ನ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.












Click it and Unblock the Notifications