ಬಿ ಎಸ್ ಯಡಿಯೂರಪ್ಪ ಅವರು ಸಿಎಂ ಆಗುವುದನ್ನು ತಪ್ಪಿಸಿದ್ದು ಎಚ್ ಡಿ ರೇವಣ್ಣ: ಸತ್ಯ ಬಿಚ್ಚಿಟ್ಟ ದೇವೇಗೌಡ
ಮೈಸೂರು, ನವೆಂಬರ್ 28: ಬಿ ಎಸ್ ಯಡಿಯೂರಪ್ಪ ಅವರು ಸಿಎಂ ಆಗುವುದನ್ನು ತಪ್ಪಿಸಿದ್ದು ಎಚ್ ಡಿ ರೇವಣ್ಣ. 20 - 20 ಸೂತ್ರದನ್ವಯ ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆಗಬೇಕಿತ್ತು ಎಂದು ಮಾಜಿ ಸಚಿವ ಬಿ ಟಿ ದೇವೇಗೌಡ ಅವರು ಹೇಳಿದರು.
ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಈ ಬಗ್ಗೆ ರೇವಣ್ಣ ಒಪ್ಪಿಕೊಂಡು ಕ್ಷಮೆ ಸಹ ಯಾಚಿಸಿದ್ದಾರೆ. ಹೆಚ್ ಡಿ ರೇವಣ್ಣ ಅವರು ಡಿಸಿಎಂ ಆಗಬೇಕಿತ್ತು, ಅದು ಆಗುವುದಿಲ್ಲ ಎನ್ನುವ ಕಾರಣಕ್ಕೆ ತಪ್ಪಿಸಿದರು. ದೊಡ್ಡ ಗೌಡರ ಜೊತೆ ಮಾತನಾಡಿ ಯಡಿಯೂರಪ್ಪ ಅವರಿಗೆ ಸಿಎಂ ಸ್ಥಾನ ತಪ್ಪಿಸಿದರು ಎಂದು ಜಿ ಟಿ ದೇವೇಗೌಡ ಅವರು ಹೇಳಿದರು.

ಬಂಧನದ ಸೇಡನ್ನು ಯಾರು ಇಟ್ಟುಕೊಂಡಿಲ್ಲ. ನನ್ನ ತಂದೆ, ನಾನು, ನನ್ನ ಮಗ ಯಾವತ್ತು ಜೈಲಿಗೆ ಹೋಗುವ ಸ್ಥಿತಿ ಬಂದಿಲ್ಲ. ಮುಂದೆಯೂ ಅಂತಹ ಸ್ಥಿತಿ ಬರುವುದು ಬೇಡ ಅಂತಾ ಪ್ರಾರ್ಥಿಸುತ್ತೇನೆ. ಇನ್ನು ಮುಂದೆ ನಾನು ರಾಜಕೀಯವಾಗಿ ಯಾರ ವಿರುದ್ದವೂ ಮಾತನಾಡುವುದಿಲ್ಲ. ನನ್ನನ್ನು ಕಳ್ಳ ಎಂದರೂ ಸಹ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇದೇ ಕೊನೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಶಾಸಕ ಜಿ ಟಿ ದೇವೇಗೌಡ ಹೇಳಿದರು.
ಯಡಿಯೂರಪ್ಪಗೆ ಅಧಿಕಾರ ತಪ್ಪಿಸಿದ್ದು ನಾನೇ ಎಂಬ ಮಾಜಿ ಸಚಿವ ಹೆಚ್ ಡಿ ರೇವಣ್ಣ ಹೇಳಿಕೆ ಸತ್ಯ. ಈ ವಿಚಾರ ಮೊದಲೇ ರಾಜ್ಯದ ಜನರಿಗೆ ಗೊತ್ತಿತ್ತು, ಅದನ್ನು ಈಗ ರೇವಣ್ಣ ಒಪ್ಪಿಕೊಂಡಿದ್ದಾರೆ ಅಷ್ಟೇ. ಜೆಡಿಎಸ್ನ ಎಲ್ಲಾ ಶಾಸಕರಿಗೂ ಕುಮಾರಸ್ವಾಮಿ ಡಿಸಿಎಂ ಆಗಬೇಕು ಎಂಬ ಆಸೆ ಇತ್ತು. ಅದಕ್ಕಾಗಿ ರೇವಣ್ಣ, ಯಡಿಯೂರಪ್ಪನವರಿಗೆ ಅಧಿಕಾರ ತಪ್ಪಿಸಿದರು.
ಇನ್ನೂ ನನ್ನ ಮೇಲೆ ಯಾವ ಕೇಸ್ ಇದೆ ತೋರಿಸಿ. ಇಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ, ಸಿದ್ದರಾಮಯ್ಯ ಸೇಡು ತೀರಿಸಿಕೊಳ್ಳಲಿಕ್ಕೆ ರಾಜಕೀಯ ಮಾಡಿದ್ದಾರೆ. ಸೋಲಿಸಲಿಕ್ಕೆ ಪ್ರಯತ್ನ ಮಾಡಿದ್ದಾರೆ, ಆದರೆ ಸುಳ್ಳು ಕೇಸ್ ಹಾಕಿಸುವ ಕೆಲಸ ಸಿದ್ದರಾಮಯ್ಯ ಕೂಡ ಮಾಡಿಲ್ಲ ಎಂದು ಶಾಸಕ ಜಿ ಟಿ ದೇವೇಗೌಡ ಅವರು ಹೇಳಿದರು.
ನಾನು ಸಾಧ್ಯವಾದಷ್ಟು ಮಾಧ್ಯಮಗಳಿಂದ ದೂರ ಇದ್ದೀನಿ. ಏನನ್ನೂ ಮಾತನಾಡಬಾರದು ಎಂದು ನನ್ನ ಮನಸ್ಸಿನಲ್ಲಿ ತೀರ್ಮಾನ ಮಾಡಿದ್ದೀನಿ, ಆದರೆ ಯಾಕೆ ನನ್ನ ಹೆಸರನ್ನು ಪದೇ ಪದೇ ಮಾತನಾಡುತ್ತಿದ್ದಾರೋ ಗೊತ್ತಿಲ್ಲ. ಚಾಮುಂಡೇಶ್ವರಿ ಕ್ಷೇತ್ರದ ಜನರ ಸಮಸ್ಯೆ ಆಲಿಸುವುದು. ಅಭಿವೃದ್ಧಿ ಮಾಡುವುದು ಬಿಟ್ಟು ಬೇರೆ ಯಾವುದೇ ಆಲೋಚನೆ ನನಗೆ ಇಲ್ಲ. ನನಗೆ 15 ವರ್ಷವಿದ್ದಾಗ ನಮ್ಮ ತಂದೆಯವರು ತೀರಿಕೊಂಡ ಬಳಿಕ, ನಮ್ಮ ಗ್ರಾಮದಲ್ಲಿ ನಾವಿಲ್ಲದೆ ಯಾವುದೇ ತೀರ್ಮಾನ ಮಾಡುತ್ತಿರಲಿಲ್ಲ ಎಂದು ಹೇಳಿದರು.
ನಮ್ಮ ತಂದೆ ಪಟೇಲರು, ಈವರೆಗೂ ಯಾವುದೇ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿಲ್ಲ. ಸಾರ್ವಜನಿಕ ಜೀವನ ಪ್ರಾರಂಭ ಮಾಡಿ 54 ವರ್ಷ ಆಗಿದೆ, ನನ್ನ ಮೇಲೆ ಯಾರು ಸಹ ರಾಜಕೀಯವಾಗಿ ದೂರು ಕೊಟ್ಟಿಲ್ಲ. ನನ್ನ ಮಗ 2010ರಿಂದ ರಾಜಕೀಯ ಪ್ರಾರಂಭ ಮಾಡಿದರು. ನಮ್ಮ ಕುಟುಂಬದ ಯಾವೊಬ್ಬರ ಮೇಲೆ ಈಗಲೂ ಯಾವುದೇ ದೂರು ದಾಖಲಾಗಿಲ್ಲ. ಹುಣಸೂರಿಗೆ ಸಿಎಂ ಬಂದಾಗ ನನ್ನ ಅಭಿವೃದ್ಧಿ ಬಗ್ಗೆ ಮೆಚ್ಚುಗೆಯ ಮಾತನಾಡಿದರು.
ಯಡಿಯೂರಪ್ಪ ಸಿಎಂ ಆಗಬೇಕೆಂದು ನಾನು ಬಿಜೆಪಿಗೆ ಹೋಗಿದ್ದು, ಗೃಹಮಂಡಳಿಯಲ್ಲಿ ಏನು ಮಾಡಬಾರದು ಎಂದು ಜೆಡಿಎಸ್, ಕಾಂಗ್ರೆಸ್ ನವರು ಮುಂದಾದರು. ಸಿದ್ದರಾಮಯ್ಯ ಜೊತೆ 25 ವರ್ಷ ಜೊತೆಯಲ್ಲಿದ್ದೆ.ಸಿದ್ದರಾಮಯ್ಯ, ಕುಮಾರಸ್ವಾಮಿ ಜೊತೆ ಒಂದೇ ಒಂದು ಫೋನ್ ಕೂಡ ಪೊಲೀಸರಿಗೆ ಮಾಡಿಸಿಲ್ಲ. ಯಾವ ಅರ್ಥದಲ್ಲಿ ರೇವಣ್ಣ ಈ ರೀತಿ ಹೇಳಿಕೆ ನೀಡಿದರೋ ಗೊತ್ತಿಲ್ಲ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು ಹೇಳಿದರು.
ನನ್ನ ಅರೆಸ್ಟ್ ಮಾಡ್ತಾರೆ ಬಿಡಿಸಿಕೊಡಿ ಎಂದು ಯಾರ ಬಳಿಯೂ ಕೇಳಿಲ್ಲ. ರೇವಣ್ಣನವರೇ ದಯವಿಟ್ಟು ಕ್ಷಮಿಸಿ, ನನ್ನ ಯಾರು ಕೂಡ ಅರ್ಥ ಮಾಡಿಕೊಳ್ಳಲಿಕ್ಕೆ ಸಾಧ್ಯವಿಲ್ಲ. ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ರೇವಣ್ಣನವರನ್ನು ಕೇಳುತ್ತೇನೆ ಎಂದು ಹೆಚ್ ಡಿ ರೇವಣ್ಣ ಹೇಳಿಕೆಗೆ ಜಿ ಟಿ ದೇವೇಗೌಡ ತಿರುಗೇಟು ನೀಡಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications