Breaking; ಮೂರೂವರೆ ವರ್ಷದ ಬಳಿಕ ಪಕ್ಷದ ಕಚೇರಿಗೆ ಬಂದ ಜೆಡಿಎಸ್ ಶಾಸಕ!
ಬೆಂಗಳೂರು, ಅಕ್ಟೋಬರ್ 26; ಮೂರೂವರೆ ವರ್ಷದ ಬಳಿಕ ಜೆಡಿಎಸ್ ಶಾಸಕರೊಬ್ಬರು ಪಕ್ಷದ ಕಚೇರಿಗೆ ಭೇಟಿ ನೀಡಿದ್ದಾರೆ. ಕಳೆದ ವಾರ ಮೈಸೂರಿನಲ್ಲಿ ಶಾಸಕರ ಮನೆಗೆ ಪಕ್ಷದ ವರಿಷ್ಠ ಎಚ್. ಡಿ. ದೇವೇಗೌಡ ಭೇಟಿ ನೀಡಿದ್ದರು.
ಬುಧವಾರ ದೀಪಾವಳಿಯ ಅಂಗವಾಗಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ಪಕ್ಷದ ಕಚೇರಿಗೆ ಭೇಟಿ ನೀಡಿದರು. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಗೊಂಡ ಬಳಿಕ ಜಿ. ಟಿ. ದೇವೇಗೌಡ ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರವಾಗಿದ್ದರು.
ಜೆಡಿಎಸ್ ಪಕ್ಷದ ಕೇಂದ್ರ ಕಚೇರಿ ಜೆ. ಪಿ. ಭವನಕ್ಕೆ ಆಗಮಿಸಿದ ಅವರು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿಗೆ ಸಿಹಿ ತಿನ್ನಿಸಿದರು. ಪಕ್ಷದ ಚಟುವಟಿಕೆಗಳಿಂದ ದೂರವಾಗಿದ್ದ ಅವರು ಪಕ್ಷದ ಕಚೇರಿಗೆ ಮೂರುವರೆ ವರ್ಷಗಳಿಂದ ಆಗಮಿಸಿರಲಿಲ್ಲ.

ಜಿ. ಟಿ. ದೇವೇಗೌಡರು ಜೆಡಿಎಸ್ ಪಕ್ಷ ಬಿಡಲಿದ್ದಾರೆ ಎಂಬ ಸುದ್ದಿಗಳು ಹಬ್ಬಿತ್ತು. ಆದರೆ ಕಳೆದ ಗುರುವಾರ ಎಚ್. ಡಿ. ದೇವೇಗೌಡ, ಎಚ್. ಡಿ. ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ ಜಿ. ಟಿ. ದೇವೇಗೌಡರ ಮನೆಗೆ ಭೇಟಿ ನೀಡಿದ್ದರು.
ಬಳಿಕ ಮಾತನಾಡಿದ್ದ ಜಿ. ಟಿ. ದೇವೇಗೌಡರು, "ದೇವೇಗೌಡರಿಗೆ ನನ್ನ ಬಗ್ಗೆ ಪ್ರೀತಿ ಇದೆ. ಅವರು ನನ್ನನ್ನು ಮರಿ ದೇವೇಗೌಡ ಎಂದೇ ಕರೆಯುತ್ತಿದ್ದರು. ಹಿಂದೆ ಹಲವು ಸ್ಥಾನವನ್ನು ಕೊಟ್ಟಿದ್ದರು. ಮೂರು ವರ್ಷಗಳಿಂದ ದೂರವಿದ್ದರೂ ನನ್ನ ಬಗ್ಗೆ ಪ್ರೀತಿ ಕಡಿಮೆಯಾಗಿಲ್ಲ" ಎಂದು ಹೇಳಿದ್ದರು.
"ನಾನು ಜೆಡಿಎಸ್ ಬಿಡುವುದಿಲ್ಲ. ಇಲ್ಲೇ ಇರುತ್ತೇನೆ. ದೇವೇಗೌಡರು ಪ್ರಾದೇಶಿಕ ಪಕ್ಷ ಉಳಿಸಿದರು. ಅವರ ಕನಸು ನನಸು ಮಾಡುತ್ತೇವೆ. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತೇನೆ" ಎಂದು ಜಿ. ಟಿ. ಭಾವುಕರಾಗಿದ್ದರು.

ಬುಧವಾರ ಪಕ್ಷದ ಕೇಂದ್ರ ಕಚೇರಿಗೆ ಭೇಟಿ ನೀಡುವ ಮೂಲಕ ಜಿ. ಟಿ. ದೇವೇಗೌಡರು ಎಲ್ಲಾ ಅಸಮಾಧಾನಗಳನ್ನು ಮರೆತಿದ್ದಾರೆ. ಎಚ್. ಡಿ. ದೇವೇಗೌಡರು ಜಿ. ಟಿ. ದೇವೇಗೌಡರಿಗೆ ಮೈಸೂರಿನ ಉಸ್ತುವಾರಿಯನ್ನು ನೀಡಿದ್ದಾರೆ.
-
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಜಿಬಿಎ ಚುನಾವಣೆ: ಕರಡು ಮತದಾರರ ಪಟ್ಟಿ ಬಗ್ಗೆರಾಜಕೀಯ ಪ್ರತಿನಿಧಿಗಳ ಆಕ್ಷೇಪಣೆ, ಆಯುಕ್ತರಿಗೆ ಮಹತ್ವದ ಸಲಹೆ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ











Click it and Unblock the Notifications