ಚುನಾವಣಾ ಆಯೋಗದ ನಡೆ ಶಂಕಾಸ್ಪದ; ಮಹಾರಾಷ್ಟ್ರದಲ್ಲಿ ಮೌನ, ರಾಜ್ಯದಲ್ಲಿ ಪ್ರಶ್ನೆ ಏಕೆ?: ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿಯು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಇಬ್ಬಗೆಯ ನೀತಿ ತಾಳಿದೆ. ಇಲ್ಲಿನ ಪ್ರೇರಣೆಯಿಂದಲೇ ಬೇರೆ ರಾಜ್ಯಗಳಲ್ಲಿ ಜಾರಿಗೊಳಿಸುತ್ತಿದೆ. ಇನ್ನೂ ನಮ್ಮ ಯೋಜನೆಗಳಿಗೆ ಚುನಾವಣೆಗಾಗಿ ಮತದಾರರ ಸೆಳೆಯಲು ನೀಡಿದ ಯೋಜನೆಗಳಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಚುನಾವಣೆ ಆಯೋಗದ ಪ್ರಶ್ನೆಗೆ ಉತ್ತರಿಸಿದ್ದಾರೆ.
ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ ಭಾರತದ ಚುನಾವಣಾ ಆಯೋಗವು (ECI) ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದು, ರಾಜ್ಯದ ಗ್ಯಾರಂಟಿ ಯೋಜನೆಗಳಡಿ ಬಿಡುಗಡೆಯಾದ ನಿಧಿಗಳ ವಿವರಗಳನ್ನು ಕೇಳಿದೆ. ಈ ಸಂಬಂಧ ಬುಧವಾರ ಅವರು ಎಕ್ಸ್ ಪೊಸ್ಟ್ ಮೂಲಕ ಉತ್ತರ ನಿಡಿದ್ದಾರೆ.

ನಮ್ಮ ಗ್ಯಾರಂಟಿ ಯೋಜನೆಗಳು ಈ ಉಪಚುನಾವಣೆ ಸಮಯದಲ್ಲಿ ಜಾರಿಯಾದವುಗಳಲ್ಲ ಎಂಬುದನ್ನು ಆರಂಭದಲ್ಲೇ ಸ್ಪಷ್ಟಪಡಿಸುತ್ತಿದ್ದೇನೆ. ಇವು 2023ರ ವಿಧಾನಸಭೆ ಚುನಾವಣೆಯಲ್ಲಿ ಜನರಿಗೆ ನೀಡಿದ ಭರವಸೆಗಳ ಭಾಗವಾಗಿ ನಮ್ಮ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಕಾರ್ಯಕ್ರಮಗಳಾಗಿವೆ. ಈ ಯೋಜನೆಗಳಡಿ ರಾಜ್ಯದ ಎಲ್ಲ ಫಲಾನುಭವಿಗಳ ಖಾತೆಗಳಿಗೆ ನಿಯಮಿತವಾಗಿ, ಪಾರದರ್ಶಕವಾಗಿ ಹಣ ವರ್ಗಾವಣೆಯಾಗುತ್ತಿದೆ. ರಾಜ್ಯದ ಎಲ್ಲ ವರ್ಗದ ಜನರು ಘನತೆಯಿಂದ ಜೀವಿಸಲು ಮತ್ತು ಜೀವನ ನಿರ್ವಹಣೆಗೆ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸರ್ಕಾರವು ನೇರವಾಗಿ ಒದಗಿಸುತ್ತಿರುವ ಅನುದಾನವಾಗಿದೆ. ಈ ಯೋಜನೆಗಳು ಆಡಳಿತದ ಭಾಗವೇ ಹೊರತು, ಮತದಾರರನ್ನು ಸೆಳೆಯುವ ಕಾರ್ಯಕ್ರಮಗಳಲ್ಲ ಎಂದು ತಿಳಿಸಿದ್ದಾರೆ.
'ಬಿಟ್ಟಿ ಭಾಗ್ಯ' ಎನ್ನುವ ಬಿಜೆಪಿಯಿಂದ ಬೇರೆ ರಾಜ್ಯಗಳಲ್ಲಿ ಜಾರಿ
ಬಿಜೆಪಿಯು ಗ್ಯಾರಂಟಿ ಯೋಜನೆಗಳ ಬಗ್ಗೆ ಇಬ್ಬಗೆ ನೀತಿಯ ಧೋರಣೆಯನ್ನು ತಳೆದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಒಂದು ಕಡೆ ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು 'ಬಿಟ್ಟಿ ಭಾಗ್ಯ' ಎಂದು ಅಪಹಾಸ್ಯ ಮಾಡುತ್ತಾರೆ. ಮತ್ತೊಂದು ಕಡೆ ಅದೇ ಯೋಜನೆಗಳನ್ನು ಅನುಕರಿಸಿ ತಾವು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಜಾರಿಗೊಳಿಸುತ್ತಾರೆ. ಇದರಿಂದ ಕರ್ನಾಟಕದ ಮಾದರಿಯು ದೇಶಕ್ಕೆ ಪ್ರೇರಣೆಯಾಗಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಚಾಟಿ ಬೀಸಿದ್ದಾರೆ.
ಚುನಾವಣಾ ಆಯೋಗ ನೀತಿ ಅನುಮಾನಾಸ್ಪದ
ಆದರೆ ಈ ವಿಚಾರವಾಗಿ ಚುನಾವಣಾ ಆಯೋಗ ಅನುಸರಿಸುತ್ತಿರುವ ನೀತಿಯು ಅನುಮಾನಸ್ಪದವಾಗಿದೆ. ಮಹಾರಾಷ್ಟ್ರ ಮತ್ತು ಬಿಹಾರದಂತಹ ರಾಜ್ಯಗಳಲ್ಲಿ ಚುನಾವಣೆಗೂ ಮುನ್ನ ನಗದು ವರ್ಗಾವಣೆ ಯೋಜನೆಗಳನ್ನು ಪ್ರಕಟಿಸಲಾಗಿದೆ ಮತ್ತು ಅಂತಹ ಯೋಜನೆಗಳ ಪ್ರಕ್ರಿಯೆಯನ್ನು ವೇಗಗೊಳಿಸಲಾಗಿದೆ. ಮತದಾರರಿಗೆ ನೇರವಾಗಿ ಯೋಜನೆಗಳ ಲಾಭವನ್ನು ವರ್ಗಾವಣೆ ಮಾಡಲಾಗಿದೆ. ಅವೆಲ್ಲವೂ ಬಹಿರಂಗವಾಗಿ ನಡೆದಿವೆ. ಆದರೂ ಚುನಾವಣಾ ಆಯೋಗ ಮೌನ ವಹಿಸಿತ್ತು. ಯಾವುದೇ ಪರಿಶೀಲನೆಗೆ ಒಳಪಡಿಸದೆ ಯೋಜನೆಗಳನ್ನು ಮುಂದುವರಿಸಲು ಅನುಮತಿ ನೀಡಿತ್ತು ಎಂದು ಅವರು ವಿವರಿಸಿದರು.
ಚುನಾವಣೆ ಆಯೋಗದ ಪಕ್ಷಪಾತ ಬಯಲು; ಸಿಎಂ
ಇದು ನಿಷ್ಪಕ್ಷಪಾತ ನಡೆಯಲ್ಲ, ಇದು ಒಂದು ಪಕ್ಷಕ್ಕೆ ನೀಡಿದ ಸಹಕಾರವಾಗಿದೆ. ಬಿಜೆಪಿ ಅಥವಾ ಎನ್ಡಿಎ ಸರ್ಕಾರಗಳು ಏನು ಮಾಡಿದರೂ ಚುನಾವಣಾ ಆಯೋಗ ಕಣ್ಣು ಮುಚ್ಚಿಕೊಂಡಿರುತ್ತದೆ. ಆದರೆ ಕರ್ನಾಟಕ ಸರ್ಕಾರ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುತ್ತಿರುವಾಗ ಅದೇ ಆಯೋಗವು ಕ್ಯಾತೆ ತೆಗೆಯುತ್ತಿದೆ. ಈ ಇಬ್ಬಗೆಯ ನೀತಿಯು ಚುನಾವಣಾ ಆಯೋಗದ ಪಕ್ಷಪಾತವನ್ನು ಬಯಲು ಮಾಡುತ್ತದೆ.
ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಗುರಿಯಾಗಿಸಿ ದಾಳಿ ಮಾಡುವುದು ಕೇವಲ ರಾಜಕೀಯ ಎಂದೆನಿಸುವುದಿಲ್ಲ. ಇದು ಬಡವರ ವಿರುದ್ಧ, ಮಹಿಳೆಯರ ವಿರುದ್ಧ ಮತ್ತು ಕರ್ನಾಟಕದ ವಿರುದ್ಧದ ಪರೋಕ್ಷ ದಾಳಿಯಾಗಿದೆ.
ನುಡಿದಂತೆ ನಡೆಯುವ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನಮ್ಮ ಸರ್ಕಾರವು ಚುನಾವಣಾ ಆಯೋಗದ ಇಂತಹ ಗೊಡ್ಡು ಬೆದರಿಕೆಗಳಿಗೆ ಬಗ್ಗದೆ ತಾನು ಕೊಟ್ಟ ಭರವಸೆಗಳನ್ನು ಪೂರೈಸುವಲ್ಲಿ ಬದ್ಧವಾಗಿರುತ್ತದೆ ಮತ್ತು ಪ್ರತಿ ಕನ್ನಡಿಗನ ಸೇವೆಯನ್ನು ಎಂದಿನಂತೆ ಮುಂದುವರಿಸಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
The Election Commission of India (ECI) has written to the Government of Karnataka seeking details on the release of funds under the State’s guarantee schemes in Davanagere and Bagalkot districts, where by-elections are underway.
— Siddaramaiah (@siddaramaiah) April 8, 2026
Let me state this clearly: Our guarantee schemes… pic.twitter.com/ooWewU7wqL
-
ಅಸ್ತಿತ್ವಕ್ಕಾಗಿ ಬಿಜೆಪಿ ಸೇರ್ಪಡೆ: ವಿರೋಧ ಪಕ್ಷಗಳ ಮೇಲೆ ಸಿದ್ದರಾಮಯ್ಯರ ಕಿಡಿ -
ವಿಶ್ವ ಆರೋಗ್ಯ ದಿನ 2026: ಸ್ವಸ್ಥ ಕರ್ನಾಟಕ ನಿರ್ಮಾಣಕ್ಕೆ ಸಿದ್ದರಾಮಯ್ಯ ನೀಡಿದ 'ಆರೋಗ್ಯ ಭಾಗ್ಯ'ಗಳ ಪಟ್ಟಿ ಇಲ್ಲಿದೆ -
ಗೃಹ ಸಚಿವರ 'ಸಿದ್ದರಾಮಯ್ಯ ಇನ್ನೂ 2 ವರ್ಷ ಸಿಎಂ' ಹೇಳಿಕೆ: ಡಿಕೆ ಸುರೇಶ್ ಹೇಳಿದ್ದೇನು? -
ಉಪಚುನಾವಣೆ ಮಾತ್ರವಲ್ಲ ಕಾಂಗ್ರೆಸ್ ಸರ್ಕಾರಕ್ಕೆ ಜನ ಹೇಳುವ 'ಟಾಟಾ..ಟಾಟಾ..ಬೈ ಬೈ ಎಲೆಕ್ಷನ್': ಆರ್.ಅಶೋಕ್ ಭವಿಷ್ಯ -
ಉಪಚುನಾವಣಾ ಅಖಾಡ ಸಜ್ಜು: ನಾಳೆ ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಮತದಾನ; ಇಂದು ಮನೆ ಮನೆ ಮತಯಾಚನೆ -
Mohsina Kidwai: ಕೇಂದ್ರ ಮಾಜಿ ಸಚಿವೆ ಮೊಹ್ಸಿನಾ ಕಿದ್ವಾಯಿ ನಿಧನ, ಗಣ್ಯರ ಸಂತಾಪ -
Kerala Elections 2026: ಕೇರಳಂ ಚುನಾವಣಾ ಸಮೀಕ್ಷೆ: ಯುಡಿಎಫ್ಗೆ ಅಧಿಕಾರದ ಹಾದಿ ಸುಗಮ; ಎಲ್ಡಿಎಫ್ಗೆ ಹಿನ್ನಡೆ ಸಾಧ್ಯತೆ -
Viral Video: ತಮಿಳುನಾಡು ಚುನಾವಣೆ: ಹಸಿ ಸೊಪ್ಪು, ತರಕಾರಿ ತಿನ್ನುತ್ತಾ ಮತಯಾಚಿಸಿದ ಸ್ವತಂತ್ರ ಅಭ್ಯರ್ಥಿ ನಟ ಮನ್ಸೂರ್ ಅಲಿ ಖಾನ್ -
ರಾಜ್ಯದ 3,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಶಿಥಿಲಾವಸ್ಥೆಯಲ್ಲಿ: 'ಸಿಎಂಗೆ ದೋಸೆ ಮಜಾ, ಮಕ್ಕಳಿಗೆ ಜೀವ ಭಯ' ಎಂದ ಆರ್. ಅಶೋಕ್ -
ಅಧಿಕಾರ ಬದಲಾವಣೆ; ನನ್ನ-ಸಿಎಂ ಬಿಟ್ಟು ಬೇರೆಯವರ ಮಾತು ಮುಖ್ಯವಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ -
IPL ವಿಐಪಿ ಟಿಕೆಟ್ ದುರ್ಬಳಕೆ ಆಗಿಲ್ಲ: ಶಾಸಕರ ಕುಟುಂಬಸ್ಥರು ಪಂದ್ಯ ನೋಡಿದರೆ ತಪ್ಪೇನು; ಪರಮೇಶ್ವರ್ ಪ್ರಶ್ನೆ -
Raghav Chadha: ರಾಘವ್ ಚಡ್ಡಾ: ಉಲ್ಕಾ ರಾಜಕೀಯಕ್ಕೆ ಎಷ್ಟು ಕಿಮ್ಮತ್ತು: ರಾಜಾರಾಂ ತಲ್ಲೂರು ಬರಹ -
ಬಾಗಲಕೋಟೆಗೆ ಸಿದ್ದರಾಮಯ್ಯ ದ್ರೋಹ ಮಾಡಿದ್ರೆ ಪಕ್ಷ ಮತ್ತೆ ಗೆಲ್ಲುತ್ತಿತ್ತೇ? ಬಸವರಾಜ ಬೊಮ್ಮಾಯಿಗೆ ಕಾಂಗ್ರೆಸ್ ತಿರುಗೇಟು -
ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಗ್ಯಾರಂಟಿಯೇ ರಕ್ಷಾಕವಚ: ಪ್ರಧಾನಿ 'ಹುಸಿ ಭರವಸೆ' ಟೀಕೆಗೆ ಸುರ್ಜೆವಾಲ ತಿರುಗೇಟು -
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral












Click it and Unblock the Notifications