ಜೆಡಿಎಸ್ ಶಾಸಕರ ಪುತ್ರನಿಂದ ಬಿಜೆಪಿ ಸಂಸದರ ಭೇಟಿ!
ಬೆಂಗಳೂರು, ಮೇ 28 : ಜೆಡಿಎಸ್ ಪಕ್ಷದ ಹಿರಿಯ ನಾಯಕರೊಬ್ಬರ ಪುತ್ರ ಬೆಂಗಳೂರಿನಲ್ಲಿ ಸಂಸದ ತೇಜಸ್ವಿ ಸೂರ್ಯ ಭೇಟಿಯಾಗಿದ್ದಾರೆ. ಇದರ ಹಿಂದೆ ರಾಜಕೀಯ ಕಾರಣಗಳು ಇಲ್ಲದಿದ್ದರೂ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
Recommended Video
ಗುರುವಾರ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯರನ್ನು ದುಶ್ಯಂತ್ ಶ್ರೀನಿವಾಸ್ ಭೇಟಿಯಾದರು. ತುಮಕೂರು ಕ್ಷೇತ್ರ ಬಿಜೆಪಿ ಶಾಸಕ ಜ್ಯೋತಿ ಗಣೇಶ್ ಅವರ ಸೋದರ ಸಂಬಂಧಿ ಸಹ ಈ ಸಂದರ್ಭದಲ್ಲಿ ಜೊತೆಗಿದ್ದರು.
ದುಶ್ಯಂತ್ ಶ್ರೀನಿವಾಸ್ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ, ಮಾಜಿ ಸಚಿವ ಎಸ್. ಆರ್. ಶ್ರೀನಿವಾಸ್ ಅವರ ಪುತ್ರ. ಬೆಂಗಳೂರು ನಗರದಲ್ಲಿ ಇಬ್ಬರು ಯುವ ನಾಯಕರು ಭೇಟಿಯಾಗಿ ಹಲವಾರು ವಿಚಾರಗಳ ಕುರಿತು ಚರ್ಚೆ ಮಾಡಿದ್ದಾರೆ.

ಈ ಭೇಟಿಗೆ ರಾಜಕೀಯ ಕಾರಣಗಳು ಇಲ್ಲದಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಭೇಟಿಯ ಫೋಟೋಗಳು ವೈರಲ್ ಆಗಿವೆ. ಲಾಕ್ ಡೌನ್ ಸಮಯದಲ್ಲಿ ಗುಬ್ಬಿ ಕ್ಷೇತ್ರದ ತುಂಬಾ ಸಂಚಾರ ನಡೆಸಿದ್ದ ದುಶ್ಯಂತ್ ಶ್ರೀನಿವಾಸ್ ಮಾಸ್ಕ್ ವಿತರಣೆ ಮಾಡಿದ್ದರು, ಜನರ ಕಷ್ಟ ಆಲಿಸಿದ್ದರು.
ಬಿಜೆಪಿ ಸೇರುವ ಸುದ್ದಿ ಹಬ್ಬಿತ್ತು: ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಗೊಂಡ ಬಳಿಕ ಎಸ್. ಆರ್. ಶ್ರೀನಿವಾಸ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಅದಕ್ಕೆ ಕಾರಣವಾಗಿದ್ದೂ ಅವರು ನೀಡಿದ್ದ ಒಂದು ಹೇಳಿಕೆ.

ಎಸ್. ಆರ್. ಶ್ರೀನಿವಾಸ್, "ನಮ್ಮ ಪಕ್ಷದ ರೀತಿ ಬಿಜೆಪಿಯಲ್ಲಿ ಅತೃಪ್ತರು ಕಿತ್ತಾಡುವುದು, ರಾಜೀನಾಮೆ ಕೊಡುವುದು ನಡೆಯಲ್ಲ. ಅವರಿಗೆ ಅವರದ್ದೇ ಆದ ಸಿದ್ಧಾಂತವಿದೆ, ಶಿಸ್ತು ಇದೆ. ಹೈಕಮಾಂಡ್ ಬಿಗಿಯಾಗಿದೆ ಹಾಗಾಗಿ ಸರ್ಕಾರ ಪೂರ್ಣ ಅವಧಿ ಮುಗಿಸಲಿದೆ" ಎಂದು ಹೇಳಿದ್ದರು.
ತಮ್ಮ ಮಾತಿನ ಬಗ್ಗೆ ಸ್ಪಷ್ಟನೆ ನೀಡಿದ್ದ ಅವರು, "ವಿಧಾನಸಭೆಯ ಈ ಅವಧಿವರೆಗೂ ಪಕ್ಷದಲ್ಲಿ ಇರುತ್ತೇನೆ. ಈ ಸಮಯದಲ್ಲಿ ಪಕ್ಷ ಬಿಡುವುದಿಲ್ಲ ಎಂದು ಕುಮಾರಸ್ವಾಮಿ ಅವರಿಗೆ ಹೇಳಿದ್ದೇನೆ. ಈ ಅವಧಿ ಬಳಿಕ ರಾಜಕೀಯ ನಿವೃತ್ತಿ ಪಡಿಬೇಕು ಎಂದು ಕೊಂಡಿದ್ದೇನೆ" ಎಂದು ಹೇಳಿದ್ದರು.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್












Click it and Unblock the Notifications