5 ಸಾವಿರ ಪರಿಹಾರ ಪಡೆಯಲು ಆಟೋ, ಟ್ಯಾಕ್ಸಿ ಚಾಲಕರಿಗೆ ಅರ್ಹತೆಗಳು
ಬೆಂಗಳೂರು, ಮೇ 10 : ಕರ್ನಾಟಕ ಸರ್ಕಾರ ಆಟೋ, ಟ್ಯಾಕ್ಸಿ ಚಾಲಕರಿಗೆ ನೆರವವಾಗಲು 5 ಸಾವಿರ ರೂ. ಪರಿಹಾರ ಧನ ಘೋಷಣೆ ಮಾಡಿದೆ. ಘೋಷಣೆ ಮಾಡಿರುವ ಪರಿಹಾರವನ್ನು ಪಡೆಯಲು ಹಲವು ನಿಯಮಗಳನ್ನು ರಚನೆ ಮಾಡಲಾಗಿದೆ.
ಕೊರೊನಾ ಸೋಂಕು ಹರಡುವುದನ್ನು ತಡೆಯಲು ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಆಟೋ ಮತ್ತು ಟ್ಯಾಕ್ಸಿ ಸೇವೆ ಸಂಪೂರ್ಣ ಬಂದ್ ಆಗಿದೆ. ಈ ಸಂದರ್ಭದಲ್ಲಿ ಅವರಿಗೆ ಆದ ನಷ್ಟವನ್ನು ಗಮನಿಸಿ ಸರ್ಕಾರ ಪರಿಹಾರ ನೀಡುವುದಾಗಿ ಘೋಷಣೆ ಮಾಡಿತ್ತು.
ಸರ್ಕಾರದಿಂದ ಘೋಷಣೆ ಮಾಡಿರುವ 5000 ರೂ.ಗಳನ್ನು ಪಡೆಯಲು ಆಟೋ/ಟ್ಯಾಕ್ಸಿ ಚಾಲಕರಿಗೆ ಹಲವು ನಿಯಮಗಳನ್ನು ಸರ್ಕಾರ ರೂಪಿಸಿದೆ. ಪರಿಹಾರಕ್ಕಾಗಿ ಅರ್ಜಿಗಳನ್ನು ಸಲ್ಲಿಸುವ ಮೊದಲು ಇವುಗಳನ್ನು ಸರಿಯಾಗಿ ಓದಿಕೊಳ್ಳಬೇಕು ಎಂದು ಸರ್ಕಾರ ಹೇಳಿದೆ.
ಆಟೋ ಮತ್ತು ಟ್ಯಾಕ್ಸಿ ಚಾಲಕರು ಸೇವಾ ಸಿಂಧು ವೆಬ್ ಸೈಟ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಹ ಫಲಾನುಭವಿಗಳಿಗೆ ಆಧಾರ್ ಸಂಖ್ಯೆಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಪರಿಹಾರದ ಹಣ ನೇರವಾಗಿ ಜಮಾವಣೆ ಮಾಡಲಾಗುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಪರಿಹಾರ ಪಡೆಯಲು ಅರ್ಹತೆಗಳು
* ಆಟೋ/ಟ್ಯಾಕ್ಸಿ ಚಾಲನೆ ಮಾಡಲು ಚಾಲನಾ ಅನುಜ್ಞಾ ಪತ್ರ ಮತ್ತು ಬ್ಯಾಡ್ಜ್ ಹೊಂದಿರುವವರು ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅರ್ಹರು.
* ಫಲಾನುಭವಿಗಳು ಆಟೋ/ಟ್ಯಾಕ್ಸಿ ಚಾಲಕರಾಗಿದ್ದು, ದಿನಾಂಕ 1/3/2020ಕ್ಕೆ ಚಾಲ್ತಿಯಲ್ಲಿರುವ ಚಾಲನಾ ಅನುಜ್ಞಾ ಪತ್ರದ ವಿವರಗಳನ್ನು ಸೇವಾ ಸಿಂಧು ವೆಬ್ ಸೈಟ್ನಲ್ಲಿ ನಮೂದಿಸಬೇಕು.

ಆಧಾರ್ ಕಾರ್ಡ್ ವಿವರ ಕಡ್ಡಾಯ
* ಆಟೋ/ಟ್ಯಾಕ್ಸಿ ಚಾಲಕರ ಆಧಾರ್ ಕಾರ್ಡ್ ವಿವರಗಳನ್ನು ಸೇವಾ ಸಿಂಧು ವೆಬ್ಸೈಟ್ನಲ್ಲಿ ನಮೂದಿಸಬೇಕು.
* ಚಾಲಕರ ಬ್ಯಾಂಕ್ ಖಾತೆ ವಿವರ, ಐಎಫ್ಎಸ್ಸಿ ಕೋಡ್, ಎಂಇಸಿಆರ್ ಕೋಡ್ ಅನ್ನು ಸಹ ತಪ್ಪದೇ ನಮೂದಿಸಬೇಕು.

ವಾಹನದ ಸಂಖ್ಯೆ ನಮೂದಿಸಬೇಕು
* ಚಾಲಕರು ಚಾಲನೆ ಮಾಡುವ ವಾಹನದ ನೋಂದಣಿ ಸಂಖ್ಯೆ ವಿವರಗಳನ್ನು ಸೇವಾ ಸಿಂಧು ಪೋರ್ಟ್ಲ್ನಲ್ಲಿ ಕಡ್ಡಾಯವಾಗಿ ದಾಖಲು ಮಾಡಬೇಕು.
* ಚಾಲಕರು ತಮ್ಮ ದೈನಂದಿನ ಉದ್ಯೋಗ ನಡೆಸಲಾಗದೇ ಆದಾಯಗಳಿಸಲಾಗದೇ ಆದಾಯ ಕಳೆದುಕೊಂಡ ಬಗ್ಗೆ ಪೋರ್ಟಲ್ನಲ್ಲಿ ಸ್ವಯಂ ಘೋಷಣಾ ಪತ್ರವನ್ನು ನಮೂದಿಸಬೇಕು.

ಯಾರಿಗೆ ಮಾತ್ರ ಇದು ಸೀಮಿತ
* ಆಟೋ ರಿಕ್ಷಾ/ ಟ್ಯಾಕ್ಸಿ ಚಾಲಕರು ಹಾಗೂ ಸ್ವಂತ ವಾಹನ ಚಲಾಯಿಸುವ ಮ್ಯಾಕ್ಸಿ ಕ್ಯಾಬ್ ಚಾಲಕರುಗಳು ಮಾತ್ರ ಈ ಯೋಜನೆಯಡಿ ಪರಿಹಾರ ಪಡೆಯಬಹುದು.
* ಈ ಎಲ್ಲಾ ಅರ್ಹತೆಗಳು ಇದ್ದು ಸೇವಾ ಸಿಂಧು ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಿದರೆ ಅರ್ಹ ಫಲಾನುಭವಿಗಳಿಗೆ ಆಧಾರ್ ಸಂಖ್ಯೆಗೆ ಲಿಂಕ್ ಆದ ಬ್ಯಾಂಕ್ ಖಾತೆಗೆ ನೇರವಾಗಿ ಪರಿಹಾರ ಜಮಾವಣೆಯಾಗುತ್ತದೆ.
-
ಸ್ವಾವಲಂಬಿ ಬದುಕಿಗೆ ರಾಮಲಿಂಗಾ ರೆಡ್ಡಿ ಸಾಥ್: ಮಂಗಳಮುಖಿಯರು ಮತ್ತು ಮಹಿಳೆಯರಿಗೆ 20 EV ಆಟೋ ಭಾಗ್ಯ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು?












Click it and Unblock the Notifications