ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೊಲೀಸರನ್ನು ಮಾಧ್ಯಮಗಳಿಂದ ದೂರ ಮಾಡಿದ ಹೊಸ ಆದೇಶ

|
Google Oneindia Kannada News

ಬೆಂಗಳೂರು, ಜೂನ್ 26 : ಕರ್ನಾಟಕದ ಪೊಲೀಸ್ ಇಲಾಖೆಯ ಹೊಸ ಆದೇಶವೊಂದು ವಿವಾದಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಪೊಲೀಸರು ಮಾಧ್ಯಮಕ್ಕೆ ಮಾಹಿತಿ ನೀಡಿದರೆ ತಕ್ಷಣ ಅಮಾನತು ಮಾಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.

'ಮೀಡಿಯಾ ಪಾಲಿಸಿ' ಎಂಬ ಹೆಸರಿನಲ್ಲಿ ಈ ಆದೇಶ ಹೊರಬಿದ್ದಿದೆ. ಇದನ್ನು ಎಲ್ಲಾ ಮಹಾನಗರಗಳ ಪೊಲೀಸ್ ಆಯುಕ್ತು, ಜಿಲ್ಲಾ ಎಸ್ಪಿಗಳಿಗೆ ಕಳುಹಿಸಲಾಗಿದೆ. ಪಾಲಿಸಿಯನ್ನು ಅನುಸರಿಸುವಂತೆ ಸೂಚನೆ ನೀಡಲಾಗಿದೆ.

ಖಾಕಿ ತೊಟ್ಟು ಪ್ರತಿಭಟಿಸುತ್ತಿದ್ದ ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ!ಖಾಕಿ ತೊಟ್ಟು ಪ್ರತಿಭಟಿಸುತ್ತಿದ್ದ ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ!

ಈ ಆದೇಶದಲ್ಲಿ ಪ್ರಮುಖವಾಗಿ 3 ಉಲ್ಲೇಖಗಳನ್ನು ನೀಡಲಾಗಿದೆ. ಸೂಚನೆಗಳನ್ನು ಉಲ್ಲಂಘನೆ ಮಾಡಿದರೆ ಅವರ ಮೇಲೆ ಇಲಾಖಾ ವಿಚಾರಣೆ ಬಾಕಿ ಇರಿಸಿ ತಕ್ಷಣದಿಂದ ಅಮಾನತುಗೊಳಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಆದೇಶ ನೀಡಲಾಗಿದೆ.

Guidelines for police about media

ಉಲ್ಲೇಖಗಳು ಹೀಗಿವೆ.....

* ಯಾವುದೇ ಪೂರ್ವಾನುಮತಿ ಇಲ್ಲದೇ ಪೊಲೀಸ್ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಯಾವುದೇ ಪತ್ರಿಕೆ, ಆಕಾಶಾವಾಣಿ, ದೂರದರ್ಶನ ಅಥವ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಭಾಗವಹಿಸಕೂಡದು.

ಔರಾದ್ಕರ್ ವರದಿ : ಒಂದು ವಾರದಲ್ಲಿ ಪೊಲೀಸರಿಗೆ ಸಿಹಿ ಸುದ್ದಿಔರಾದ್ಕರ್ ವರದಿ : ಒಂದು ವಾರದಲ್ಲಿ ಪೊಲೀಸರಿಗೆ ಸಿಹಿ ಸುದ್ದಿ

* ಇಲಾಖೆಗೆ ಸಂಬಂಧಪಟ್ಟ ಯಾವುದೇ ವಿಷಯಗಳ ವಿವರಗಳನ್ನು ಜಿಲ್ಲಾ ಮಟ್ಟದಲ್ಲಿ ಮಾಧ್ಯಮಗಳಿಗೆ ನೀಡಲು ಆಯಾ ಘಟಕದ ಘಟಕಾಧಿಕಾರಿಗಳಾದ ಪೊಲೀಸ್ ಅಧೀಕ್ಷಕರು/ ಪೊಲೀಸ್ ಆಯುಕ್ತರು/ ವಲಯದ ಐಜಿಪಿ ಅವರು ಅಥವ ಅವರುಗಳಿಂದ ಅನುಮೋದನೆಗೊಂಡ ನಂತರ ಸಂಬಂಧಪಟ್ಟ ಘಟಕದ ನೋಡೆಲ್ ಅಧಿಕಾರಿ ಅವರು ಮಾತ್ರ ಮಾಧ್ಯಮಕ್ಕೆ ಮಾಹಿತಿ ನೀಡಲು ಅಧಿಕೃತ ಅಧಿಕಾರಿಗಳಾಗಿರುತ್ತಾರೆ.

ದಂಡಿಸುವ ಲಾಠಿಯಲ್ಲಿ ಸಪ್ತಸ್ವರ, ಕೊಳಲು ವಾದನಕ್ಕೆ ತಲೆದೂಗಿದ ಖಾಕಿ ಪಡೆ!ದಂಡಿಸುವ ಲಾಠಿಯಲ್ಲಿ ಸಪ್ತಸ್ವರ, ಕೊಳಲು ವಾದನಕ್ಕೆ ತಲೆದೂಗಿದ ಖಾಕಿ ಪಡೆ!

* ಮೇಲ್ಕಂಡ ಸೂಚನೆ ಉಲ್ಲಂಘನೆ ಮಾಡಿದಲ್ಲಿ ಅವರ ಮೇಲೆ ಇಲಾಖಾ ವಿಚಾರಣೆ ಬಾಕಿಇರಿಸಿ ತಕ್ಷಣದಿಂದ ಅಮಾನತುಗೊಳಿಸಲು ಕೂಡಲೇ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ.

English summary
Karnataka government new guidelines for police about media. If police not follow the guideline they will suspend with immediate effect.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X