karnataka assembly elections 2023; ಗುಜರಾತ್‌ ಸೂತ್ರ ಕರ್ನಾಟಕದಲ್ಲಿಲ್ಲ! ಯಾರಿಗೆ ಟಿಕೆಟ್‌ ಕೊಡಲು ನಿರ್ಧಾರ?

2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗುಜರಾತ್ ಬಿಜೆಪಿ ಮಾದರಿ ಇಲ್ಲ

ನವದೆಹಲಿ, ಮಾರ್ಚ್‌ 15: ರಾಜ್ಯ ವಿಧಾನಸಭಾ ಚುನಾವಣೆಗೆ ವೇದಿಕೆ ಸಜ್ಜಾಗಿದ್ದು, ಈ ಬಾರಿ ರಾಜ್ಯ ಬಿಜೆಪಿಯಲ್ಲಿ ಟಿಕೆಟ್‌ ನೀಡುವ ಕುರಿತು ಸಾಕಷ್ಟು ಲೆಕ್ಕಾಚಾರಗಳನ್ನ ಬಿಜೆಪಿ ಹೈಕಮಾಂಡ್‌ ಹಾಕಿಕೊಂಡಿತ್ತು.

ಇನ್ನೂ ರಾಜ್ಯ ಬಿಜೆಪಿಯಲ್ಲೂ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗುಜರಾತ್‌ ಮಾದರಿ ಅನುಸರಿಸಲಾಗುತ್ತದೆ ಎಂದು ರಾಜ್ಯ ಬಿಜೆಪಿಯಲ್ಲೇ ಮಾತುಗಳುಕೇಳಿ ಬಂದಿತ್ತು. ಆದರೆ ಈ ಕುರಿತು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದ್ದು, ಕರ್ನಾಟಕ ರಾಜ್ಯ ವಿಧಾನಸಭೆಯಲ್ಲಿ 'ಗುಜರಾತ್‌ ಮಾದರಿ' ಅನುಸರಿಸುವ ಬದಲು ಗೆಲ್ಲುವ ಕುದುರೆಗಳು ಎನ್ನಿಸಿಕೊಳ್ಳುವ ಹಾಲಿ ಶಾಸಕರಿಗೆ ಟಿಕೆಟ್‌ ನೀಡಲು ಬಿಜೆಪಿ ಮುಂದಾಗಿದೆ ಎಂದು ಹೇಳಲಾಗಿದೆ.

Gujarat BJP Model Not In Karnataka Assembly Elections 2023

ಆಡಳಿತ ವಿರೋಧಿ ಅಲೆ ತಗ್ಗಿಸಲು ಗುಜರಾತ್‌ ಚುನಾವಣೆಗೂ ಮೊದಲು ಬಹಳಷ್ಟು ಹಾಲಿ ಶಾಸಕರನ್ನು ಕೈಬಿಟ್ಟು ಹೊಸ ಮುಖಗಳಿಗೆ ಬಿಜೆಪಿ ಟಿಕೆಟ್‌ ನೀಡಿತ್ತು. ಆದರೆ ದಕ್ಷಿಣದ ರಾಜ್ಯದಲ್ಲಿ ಈ ಯೋಜನೆ ಫಲ ಕೊಡಲಾರದು ಎಂದು ಭಾವಿಸಿರುವ ಬಿಜೆಪಿ, ಗೆಲ್ಲುವ ಸಾಧ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಹಾಲಿ ಶಾಸಕರಿಗೇ ಟಿಕೆಟ್‌ ನೀಡಲು ಮುಂದಾಗಿದೆ ಎಂದು ವರದಿ ಹೇಳಿದೆ.

ಬಹುತೇಕ ನಾಯಕರು ಯಾವುದೇ ಪಕ್ಷಕ್ಕೆ ಸೇರಿದ್ದರೂ ತಮ್ಮದೇ ಆದ ಮತಬ್ಯಾಂಕ್ ಮತ್ತು ಬೆಂಬಲ ಗುಂಪುಗಳನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಕ್ಷವು ತನ್ನ ಅಸ್ತಿತ್ವದಲ್ಲಿರುವ ಬಹುತೇಕ ಶಾಸಕರನ್ನು ಕಣಕ್ಕಿಳಿಸಲಿದೆ ಎಂದು ಮೂಲಗಳು ತಿಳಿಸಿದ್ದು, ಶಾಸಕರ ಸಂಬಂಧಿಕರಿಗೂ ಟಿಕೆಟ್ ನೀಡಬಾರದು ಎಂದು ಹಲವು ಮುಖಂಡರು ಆಗ್ರಹಿಸಿದ್ದಾರೆ ಎನ್ನಲಾಗಿದೆ.
ಕರ್ನಾಟಕದ ರಾಜಕೀಯ ಪರಿಸ್ಥಿತಿ ಗುಜರಾತ್‌ಗಿಂತ ಭಿನ್ನವಾಗಿದೆ ಎಂದು ತಿಳಿದು ಬಂದಿದ್ದು, 120ಕ್ಕೂ ಹೆಚ್ಚು ಸ್ಥಾನಗಳಲ್ಲಿ ನಾಯಕರು ತಮ್ಮ ವೈಯಕ್ತಿಕ ಪ್ರಭಾವದಿಂದ ಚುನಾವಣೆ ಗೆಲ್ಲುತ್ತಾರೆ. ಒಂದು ವೇಳೆ ಅವರಿಗೆ ಟಿಕೆಟ್ ನಿರಾಕರಿಸಿದರೆ, ಇವರು ಪಕ್ಷಾಂತರ ಮಾಡಬಹುದು ಎಂನ ಭಯ ಪಕ್ಷದಲ್ಲಿ ನಾಯಕರಲ್ಲಿ ಕಾಡಿದೆ ಎಂದು ಹೇಳಲಾಗಿದೆ.

Gujarat BJP Model Not In Karnataka Assembly Elections 2023

ಈ ಬಾರಿಯ ಚುನಾವಣೆಯಲ್ಲಿ 6-7 ಶಾಸಕರಿಗೆ ಟಿಕೆಟ್‌ ನೀಡದಿರುವ ಸಾಧ್ಯತೆಗಳಿವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದರು. ಇವರಲ್ಲಿ 75 ವರ್ಷ ಮೇಲ್ಪಟ್ಟವರು ಹಾಗೂ ಅನಾರೋಗ್ಯಕ್ಕೆ ತುತ್ತಾಗಿರುವವರೇ ಇದ್ದಾರೆ. ಟಿಕೆಟ್‌ ಹಂಚಿಕೆ ವೇಳೆ ಈ ಶಾಸಕರ ಮಾತಿಗೆ ಮನ್ನಣೆ ನೀಡಿ ಇವರು ಸೂಚಿಸಿದವರಿಗೆ ಟಿಕೆಟ್‌ ನೀಡಲಾಗುತ್ತದೆ ಎಂದು ವರದಿ ಹೇಳಿದೆ.

ಬಿಜೆಪಿಯ ಗುಜರಾತ್ ಚುನಾವಣಾ ಸೂತ್ರವು ಕೆಲವು ಗಂಭೀರ ಪರಿಣಾಮಗಳನ್ನು ಸಹ ಹೊಂದಿದೆ. ಇತ್ತೀಚಿನ ವಿಧಾನಸಭಾ ಚುನಾವಣೆಗೆ ಮುನ್ನ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ 42 ಹಾಲಿ ಶಾಸಕರನ್ನು ಕೈಬಿಟ್ಟ ನಂತರ, ಎರಡೂ ರಾಜ್ಯಗಳಲ್ಲಿ ಪಕ್ಷವು ಬಂಡಾಯವನ್ನು ಎದುರಿಸಿತು.

ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಪ್ರಧಾನಿ ನರೇಂದ್ರ ಮೋದಿ ಮತ್ತು ಆಯಾ ಕ್ಷೇತ್ರಗಳಲ್ಲಿ ತನ್ನ ರಾಜ್ಯ ನಾಯಕರ ವೈಯಕ್ತಿಕ ಹಿಡಿತವನ್ನು ಆಧರಿಸಿದೆ. 2024 ರ ಚುನಾವಣೆಯ ನಂತರವೂ ಪ್ರಧಾನಿ ಮೋದಿ ಅವರು ಹುದ್ದೆಯಲ್ಲಿ ಉಳಿಯುವುದನ್ನು ಖಚಿತಪಡಿಸಿಕೊಳ್ಳಲು ಶ್ರಮಿಸುವುದಾಗಿ ಭರವಸೆ ನೀಡಿದ ಯಡಿಯೂರಪ್ಪ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ.

ಯಡಿಯೂರಪ್ಪ ಅವರು ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಮತ್ತು ತೆರೆಮರೆಯಲ್ಲಿ ಕೆಲಸ ಮಾಡುತ್ತಾರೆ. ಬಿವೈ ವಿಜಯೇಂದ್ರ ಅವರ ಕ್ಷೇತ್ರವಾದ ಶಿಕಾರಿಪುರದಿಂದ ಸ್ಪರ್ಧಿಸಬಹುದು. ಆದರೆ, ಕುಟುಂಬ ರಾಜಕಾರಣದ ಆರೋಪಗಳನ್ನು ದೂರವಿಡಲು ಇಲ್ಲಿಯವರೆಗೆ ಬಿ.ವೈ ವಿಜಯೇಂದ್ರ ಅವರಿಗೆ ಟಿಕೆಟ್ ಘೋಷಣೆ ಮಾಡಿಲ್ಲ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+