Get Updates
Get notified of breaking news, exclusive insights, and must-see stories!

ದಿವಂಗತ ಗುರುಪಾದಪ್ಪ ನಾಗಮಾರಪಲ್ಲಿ ಸಂಕ್ಷಿಪ್ತ ಪರಿಚಯ

ಬೆಂಗಳೂರು, ನವೆಂಬರ್ 17 : ಬೀದರ್ ಕ್ಷೇತ್ರದ ಕೆಜೆಪಿ ಶಾಸಕ ಮತ್ತು ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಲ್ಲಿ ವಿಧಿವಶರಾಗಿದ್ದಾರೆ. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಮಂಗಳವಾರ ಮುಂಜಾನೆ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ.

ಬುಧವಾರ ಬೆಳಗ್ಗೆ ಬೀದರ್‌ ಜಿಲ್ಲೆಯ ಔರಾದ್ ತಾಲೂಕಿನ ಚಿಂತಾಕಿ ಗ್ರಾಮದಲ್ಲಿ ಗುರುಪಾದಪ್ಪ ನಾಗಮಾರಪಲ್ಲಿ ಅವರ ಅಂತ್ಯಸಂಸ್ಕಾರ ನಡೆಯಲಿದೆ. ಮಂಗಳವಾರ ಬೆಳಗ್ಗೆ 11 ಗಂಟೆಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿನಿಂದ ಗುರುಪಾದಪ್ಪ ನಾಗಮಾರಪಲ್ಲಿ ಅವರ ಮೃತದೇಹವನ್ನು ಬೀದರ್‌ಗೆ ತೆಗೆದುಕೊಂಡು ಹೋಗಲಾಗುತ್ತದೆ. [ಗುರುಪಾದಪ್ಪ ನಾಗಮಾರಪಲ್ಲಿ ವಿಧಿವಶ]

gurupadappa nagamarapalli

7 ಬಾರಿ ಶಾಸಕರಾಗಿದ್ದ ಗುರುಪಾದಪ್ಪ ನಾಗಮಾರಪಲ್ಲಿ ಅವರು ಸಹಕಾರಿ ಕ್ಷೇತ್ರದಲ್ಲಿ ಮಾಡಿದ ಸಾಧನೆ ಅಪಾರವಾದದ್ದು. ಮೊದಲು ಔರಾದ್ ಕ್ಷೇತ್ರದ ಶಾಸಕರಾಗಿದ್ದ ಅವರು ಕ್ಷೇತ್ರ ಪುನರ್‌ವಿಂಗಡನೆ ನಂತರ ಬೀದರ್ ಕ್ಷೇತ್ರದಿಂದ ಸ್ಪರ್ಧಿಸಿ ವಿಧಾನಸಭೆ ಪ್ರವೇಶಿಸಿದ್ದರು. ಗುರುಪಾದಪ್ಪ ನಾಗಮಾರಪಲ್ಲಿ ಅವರ ಸಂಕ್ಷಿಪ್ತ ಪರಿಚಯ ಇಲ್ಲಿದೆ.......

* ಗುರುಪಾದಪ್ಪ ನಾಗಮಾರಪಲ್ಲಿ ಬೀದರ್‌ ಕ್ಷೇತ್ರದ ಹಾಲಿ ಶಾಸಕ (ಕೆಜೆಪಿ)
* ತಂದೆ ಸಂಗನಬಸಪ್ಪ ನಾಗಮಾರಪಲ್ಲಿ
* 1984 ರಿಂದ 2007ರ ತನಕ ಔರಾದ್ ಶಾಸಕರಾಗಿ ಕಾರ್ಯ ನಿರ್ವಹಣೆ
* 2008ರಲ್ಲಿ ಬೀದರ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ
* 2013ರ ಚುನಾವಣೆಯಲ್ಲಿ ಬೀದರ್‌ ಕ್ಷೇತ್ರದಿಂದ ಕೆಜೆಪಿ ಅಭ್ಯರ್ಥಿಯಾಗಿ ಗೆಲುವು
* 1989ರಲ್ಲಿ ಗೃಹ ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಣೆ
* 1996-1998ರ ಅವಧಿಯಲ್ಲಿ ಸಂಪುಟ ದರ್ಜೆಯ ಅರಣ್ಯ ಸಚಿವರಾಗಿ ಕಾರ್ಯ ನಿರ್ವಹಣೆ
* 2005-2006ರ ಅವಧಿಯಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾಗಿ ಕಾರ್ಯನಿರ್ವಹಣೆ
* ಯಡಿಯೂರಪ್ಪ ಅವರು ಕೆಜೆಪಿ ಕಟ್ಟಿದಾಗ ಬಿಜೆಪಿ ತೊರೆದು ಕೆಜೆಪಿ ಸೇರಿದ್ದರು
* 2013ರ ವಿಧಾನಸಭೆ ಚುನಾವಣೆಯಲ್ಲಿ 50,718 ಮತಗಳನ್ನು ಪಡೆದು ಜಯಗಳಿಸಿದ್ದರು
* ಬೀದರ್ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ರಹೀಮ್ ಖಾನ್ ಅವರನ್ನು ಸೋಲಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+