25ವರ್ಷವಾದರೂ ಡಾಂಬರ್ ಮುಖ ನೋಡದ ಬಡಪಾಯಿ ರಸ್ತೆ
ಮಂಗಳೂರು, ಜೂನ್ 28: ರಾಜ್ಯ ಬಿಜೆಪಿ ಮುಖಂಡರಲ್ಲಿ ಸತತವಾಗಿ ವಿಧಾನಸಭೆಗೆ ಆಯ್ಕೆಯಾಗುತ್ತಿರುವ ಶಾಸಕರಲ್ಲಿ ಸುಳ್ಯ ಕ್ಷೇತ್ರದ ಎಸ್.ಅಂಗಾರ ಕೂಡಾ ಒಬ್ಬರು. ಜನಾನುರಾಗಿ ಶಾಸಕರೆಂದೇ ಹೆಸರಾಗಿರುವ ಅಂಗಾರ ಅವರ ಕ್ಷೇತ್ರದ ವ್ಯಾಪ್ತಿಗೆ ಬರುವ ಒಂದು ರಸ್ತೆ ಕೆಟ್ಟು, ಕಿತ್ತು ಹೋಗಿ ಎರಡೂವರೆ ದಶಕಗಳೇ ಕಳೆದು ಹೋಗಿದೆ.
Recommended Video
ಯಾವ ಕಾರಣಕ್ಕಾಗಿ ಈ ರಸ್ತೆ ರಿಪೇರಿ ಭಾಗ್ಯ ಕಂಡಿಲ್ಲ ಎನ್ನುವುದಕ್ಕೆ ಸ್ಥಳೀಯರಲ್ಲಿ ಯಾವುದೇ ಬಲವಾದ ಕಾರಣಗಳಿಲ್ಲ. ಒಂದೋ ಸ್ಥಳೀಯರು ಮನವಿ ಮಾಡಿ ಮಾಡಿ ಹೈರಾಣವಾಗಿರಬಹುದು ಅಥವಾ ಸ್ಥಳೀಯ ಗ್ರಾಮ ಪಂಚಾಯತಿ ಸದಸ್ಯರು ಅಸಡ್ದೆಯ ಪರಮಾವಧಿ ತೋರಿರಬಹುದು.
ಸುಳ್ಯ ವಿಧಾನಸಭಾ ಕ್ಷೇತ್ರದ ಗುತ್ತಿಗಾರು - ಬಳಪ ರಸ್ತೆಯಲ್ಲಿ ದಿನವೊಂದಕ್ಕೆ ಸುಮಾರು ಇನ್ನೂರಕ್ಕೂ ಹೆಚ್ಚು ವಾಹನಗಳು ಓಡಾಡುತ್ತವೆ. ಸುಮಾರು ಐದು ಕಿಲೋಮೀಟರ್ ವಿಸ್ತಾರದ ಈ ರಸ್ತೆ ಸಂಪೂರ್ಣವಾಗಿ ಹದೆಗೆಟ್ಟಿದೆ ಎಂದು ಹೇಳಲಾಗುವುದಿಲ್ಲ.

ಯಾಕೆಂದರೆ, ಗುತ್ತಿಗಾರು ನಿಂದ ಎರಡು ಕಿ.ಮೀ ರಸ್ತೆ ಸಂಪೂರ್ಣ ಹದೆಗೆಟ್ಟಿದೆ. ಮತ್ತೆ, ಅಲ್ಲಿಂದ ಸುಮಾರು ಒಂದೂವರೆ ಕಿಲೋಮೀಟರ್ ರಸ್ತೆಗೆ ಡಾಂಬರ್ ಹಾಕಲಾಗಿದೆ. ಅದಾದ ನಂತರ ಮತ್ತದೇ ಸಮಸ್ಯೆ. ಮಳೆಗಾಲದಲ್ಲಂತೂ ಕೆಟ್ಟು ಹೋಗಿರುವ ರಸ್ತೆಯಲ್ಲಿ ಓಡಾಡುವುದೂ ಒಂದೇ, ಕಂಡದಲ್ಲಿ (ಗದ್ದೆ) ಓಡಾಡುವುದೂ ಒಂದೇ.
ಐದು ಕಿಲೋಮೀಟರ್ ವ್ಯಾಪ್ತಿಯ ಗುತ್ತಿಗಾರು - ಬಳಪ ರಸ್ತೆಯ ಆರಂಭದಿಂದ ಕೊನೆಯವರೆಗೆ ಅದು ಬೇರೆ ಬೇರೆ ಪಂಚಾಯತಿ ವ್ಯಾಪ್ತಿಗೆ ಬರಬಹುದು. ಹಾಗಾಗಿ, ಒಬ್ಬರು ಜನಪ್ರತಿನಿಧಿಯಾಗಿ ತಮ್ಮ ಕೆಲಸವನ್ನು ನಿರ್ವಹಿಸಿರಬಹುದು, ಇನ್ನೊಬ್ಬರು ದಿವ್ಯ ನಿರ್ಲ್ಯಕ್ಷ ತಾಳಿರಬಹುದು.

ಸ್ಥಳೀಯ ಯುವಕರ ಪ್ರಕಾರ, "ನಾವು ತಿಳಿದಹಾಗೇ ಈ ರಸ್ತೆ ರಿಪೇರಿ ಆದ ನೆನಪೇ ನಮಗಿಲ್ಲ. ರಿಪೇರಿ ಆಗುತ್ತೆ ಎನ್ನುವ ಭರವಸೆಯನ್ನೂ ನಾವು ಕಳೆದುಕೊಂಡಿದ್ದೇವೆ ಮತ್ತು ಯಾವ ಕಾರಣಕ್ಕಾಗಿ ಈ ರಸ್ತೆಯ ಒಂದು ಭಾಗಕ್ಕೆ ಮಾತ್ರ ಡಾಂಬರ್ ಹಾಕಲಾಗಿಲ್ಲ ಎನ್ನುವ ಕಾರಣವೂ ನಮಗೆ ತಿಳಿದಿಲ್ಲ" ಎನ್ನುತ್ತಾರೆ.
ಯಡಿಯೂರಪ್ಪನವರ ಸರಕಾರ ಅಧಿಕಾರಕ್ಕೆ ಬಂದಾಗ, ಸ್ವಲ್ವದರಲ್ಲೇ ಸಚಿವ ಸ್ಥಾನದಿಂದ ವಂಚಿತರಾದವರು ಶಾಸಕ ಅಂಗಾರ. ಮಾನ್ಯ ಶಾಸಕರು, ತಮ್ಮ ಅಸೆಂಬ್ಲಿ ವ್ಯಾಪ್ತಿಯ ಗ್ರಾಮ ಪಂಚಾಯತಿ ಸದಸ್ಯರಿಗೆ ಸೂಕ್ತ ನಿರ್ದೇಶನ ಕೊಟ್ಟು, ಗುತ್ತಿಗಾರು - ಬಳಪ ರಸ್ತೆಗೆ ಡಾಂಬರು ಭಾಗ್ಯ ಕರುಣಿಸಿ, ಯಾರೂ ಮಾಡದ ಕೆಲಸವನ್ನು ಮಾಡಿದ ಹಿರಿಮೆಗೆ ಪಾತ್ರರಾಗಲಿ ಎನ್ನುವುದು ಸ್ಥಳೀಯರ ಮನಸ್ಸಿನ ಮಾತು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications