ಸಿಎಂ ಗೃಹ ಕಚೇರಿಗೆ ಜಿಮ್ ಟ್ರೈನರ್ಸ್ಗಳ ಭೇಟಿ, ಆದೇಶ ಹಿಂಪಡೆಯಲು ಮನವಿ
ಬೆಂಗಳೂರು, ಏಪ್ರಿಲ್ 03: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
Recommended Video
ಅದರಲ್ಲಿ ಸ್ವಿಮ್ಮಿಂಗ್ ಪೂಲ್ ಹಾಗೂ ಜಿಮ್ಗಳನ್ನು ಬಂದ್ ಮಾಡುವಂತೆ ಸೂಚಿಸಲಾಗಿತ್ತು, ಈ ಆದೇಶವನ್ನು ಹಿಂಪಡೆಯುವಂತೆ ಜಿಮ್ ಟ್ರೈನರ್ಸ್ಗಳು ಮನವಿ ಮಾಡಿದರು.
ಶನಿವಾರ ಸಿಎಂ ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾಗೆ ಜಿಮ್ ಟ್ರೈನರ್ಸ್ಗಳು ಭೇಟಿ ನೀಡಿದ್ದರು, ಕೆಲ ಸಮಯಗಳ ಕಾಲ ಮಾತುಕತೆ ನಡೆಸಿದರು. ಐದು ಮಂದಿ ಜಿಮ್ ಟ್ರೈನರ್ಸ್ಗಳು ಆಗಮಿಸಿದ್ದರು.

ಜಿಮ್ಗಳಲ್ಲಿ ಕೊರೊನಾ ನಿಯಮ ಅಳವಡಿಕೆ ಆಗಿದೆ. ಆದರೂ ಕೊರೊನಾ ಸೋಂಕು ಹೆಚ್ಚಾಗಿದೆ ಎಂದು ಜಿಮ್ ಬಂದ್ಗೆ ಆದೇಶ ಮಾಡುವುದು ತಪ್ಪು, ಜಿಮ್ಗಳನ್ನು ಮಾಡಿರುವವರ ಸಮಸ್ಯೆ ಅರ್ಥ ಮಾಡಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಜಿಮ್, ಸ್ವಿಮ್ಮಿಂಗ್ ಪೂಲ್ ಮುಚ್ಚಲು ಆದೇಶ. ಯಾವುದೇ ಕಾರಣಕ್ಕೂ ಪ್ರತಿಭಟನೆ, ಜಾಥಗಳಿಗೆ ಅವಕಾಶವಿಲ್ಲ. ದೇವಾಲಯ, ಪ್ರಾರ್ಥನಾ ಮಂದಿರಕ್ಕೆ ಜನರು ಭೇಟಿ ನೀಡಲು ಅವಕಾಶ. ಆದರೆ, ಗುಂಪು ಸೇರುವ ಕಾರ್ಯಕ್ರಮ ಮಾಡುವಂತಿಲ್ಲ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿತ್ತು.
ಇನ್ನು, ಅಪಾರ್ಟ್ಮೆಂಟ್ಗಳಲ್ಲಿ ಜಿಮ್, ಪಾರ್ಟಿ ಹಾಲ್, ಕ್ಲಬ್, ಸ್ವಿಮ್ಮಿಂಗ್ ಫುಲ್ ಮುಚ್ಚಲು ಆದೇಶ , ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆಯು ನಿಗದಿಪಡಿಸಿದ ಆಸನದ ಸಂಖ್ಯೆಗಳನ್ನು ಮೀರುವಂತಿಲ್ಲ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿಬಿಎಂಪಿ ವ್ಯಾಪ್ತಿಯಲ್ಲಿ ಚಿತ್ರಮಂದಿರದಲ್ಲಿ ಶೇ 50ರಷ್ಟು ಸೀಟು ಭರ್ತಿ.
ಒಂದ್ ಬಿಟ್ಟು ಒಂದು (ಪರ್ಯಾಯ ಆಸನದಲ್ಲಿ ಕೂರಬೇಕು) ಮೈಸೂರು, ಕಲಬುರಗಿ ದಕ್ಷಿಣ ಕನ್ನಡ, ಉಡುಪಿ, ಬೀದರ್ ಮತ್ತು ಧಾರವಾಡಕ್ಕೂ ಇದು ಅನ್ವಯ ಎಂದು ಹೇಳಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications