Nikhil Kumaraswamy: ನಿಖಿಲ್ ಕುಮಾರಸ್ವಾಮಿ ಸೋಲಿನ ಬಗ್ಗೆ ಎಚ್ಡಿ ಕುಮಾರಸ್ವಾಮಿ ಮೊದಲ ರಿಯಾಕ್ಷನ್
Channapatna By Election Results 2024: ನವೆಂಬರ್ 23ರಂದು ಕರ್ನಾಟಕದ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಮೂರರಲ್ಲೂ ಬಿಜೆಪಿ ಗೆಲುವಿನ ನಗೆ ಬೀರಿದೆ. ಅದರಲ್ಲೂ ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದಾರೆ. ಈ ಬಗ್ಗೆ ಅವರ ತಂದೆ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೊದಲ ರಿಯಾಕ್ಷನ್ ನೀಡಿದ್ದಾರೆ.
ಕರ್ನಾಟಕದ ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಮೂರು ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆದಿತ್ತು. ನಿನ್ನೆ ಅಂದರೆ ನವೆಂಬರ್ 23ರಂದು ಫಲಿತಾಂಶ ಹೊರಬಿದ್ದಿದ್ದು, ಮೂರರಲ್ಲೂ ಬಿಜೆಪಿ ಜಯಭೇರಿ ಬಾರಿಸಿಸಿದೆ. ಇನ್ನು ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಇಂದು (ನವೆಂಬರ್ 24) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಚರ್ಚೆ ಮಾಡಿ ಏನೂ ಪ್ರಯೋಜನ ಇಲ್ಲ. ಜನರು ನೀಡಿರುವ ತೀರ್ಪಿಗೆ ತಲೆ ಬಾಗಲೇಬೇಕು. ಏನೇ ಇದ್ದರೂ ಆಮೇಲೆ ಮಾತನಾಡುತ್ತೇನೆ ಎಂದು ಮಗನ ಸೋಲಿನ ಬಗ್ಗೆ ಮೊಲದ ಪ್ರತಿಕ್ರಿಯೆ ನೀಡಿದ್ದಾರೆ.
ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರನ್ನು 25,413 ಮತಗಳಿಂದ ಸೋಲಿಸಿ, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆಲುವು ಸಾಧಿಸಿದ್ದಾರೆ. ಸಿ.ಪಿ.ಯೋಗೇಶ್ವರ್ 1,12,642 ಮತ ಪಡೆದು ಗಲುವು ಸಾಧಿಸಿದರೆ, ನಿಖಿಲ್ ಕುಮಾರಸ್ವಾಮಿ 87,229 ಮತಗಳನ್ನು ಪಡೆಯುವ ಮೂಲಕ ಸೋಲನುಭವವಿಸಿದ್ದಾರೆ.
ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆದರೂ, ಚನ್ನಪಟ್ಟಣದಲ್ಲಿ ಈ ಬಾರಿ ಜಿದ್ದಾಜಿದ್ದಿ ಜೋರಾಗಿಯೇ ನಡೆದಿತ್ತು. 2018ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ, 2023ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ರಾಮನಗರದಲ್ಲಿ ಎರಡು ಸೋಲು ಕಂಡಿದ್ದದ್ದರು. ಆದರೂ ನಿಖಿಲ್ ಕುಮಾರಸ್ವಾಮಿ ಈ ಬಾರಿಯೂ ಕೂಡ ಚನ್ನಪಟ್ಟಣದಲ್ಲಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗಿಳಿದು ಮುಗ್ಗರಿಸಿದ್ದಾರೆ.
ಜಾರ್ಖಂಡ್ & ಮಹಾರಾಷ್ಟ್ರ ಫಲಿತಾಂಶ: ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಪಕ್ಷ 288 ಸ್ಥಾನಗಳ ಪೈಕಿ 234 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತ ಪಡೆದಿದ್ದರೆ, ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ 50 ಸ್ಥಾನಗಳನ್ನಷ್ಟೇ ಗೆದ್ದಿದೆ. ಇನ್ನು ಜಾರ್ಖಂಡ್ನಲ್ಲಿ 81 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಎಂಎಂ ನೇತೃತ್ವದ ಇಂಡಿಯಾ ಮೈತ್ರಿಕೂಟ 56 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರ ಹಿಡಿದಿದೆ. ಬಿಜೆಪಿ ನೇತೃತ್ವದ ಮೈತ್ರಿಕೂಟ 24 ಸ್ಥಾನಗಳನ್ನು ಗೆದ್ದಿದೆ.
ಜಾರ್ಖಂಡ್ನ 81 ವಿಧಾನಸಭೆ ಸ್ಥಾನಗಳಿಗೆ ಎರಡು ಹಂತದಲ್ಲಿ ಮತದಾನ ನಡೆದಿತ್ತು. ನವೆಂಬರ್ 13ರಂದು ಮೊದಲ ಹಂತದಲ್ಲಿ 43 ಸ್ಥಾನಗಳಿಗೆ, ನವೆಂಬರ್ 20ರಂದು ಎರಡನೇ ಹಂತದಲ್ಲಿ 38 ಸ್ಥಾನಗಳಿಗೆ ಮತದಾನಡ ನಡೆದಿತ್ತು. ಇನ್ನು ಮಹಾರಾಷ್ಟ್ರದ 288 ಸ್ಥಾನಗಳಿಗೂ ನವೆಂಬರ್ 20ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ನವೆಂಬರ್ 23ರಂದು ಈ ಎರಡು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications