ಶಂಕರ ಬಿದರಿ ಮಾತಿಗೆ ಕುಮಾರಣ್ಣ ಸಾಥ್
ಬೆಂಗಳೂರು, ಅ. 28: ಮರಳು ಮಾಫಿಯಾದಿಂದ ಸರ್ಕಾರದ ವಿವಿಧ ಮಂತ್ರಿಗಳಿಗೆ ಪ್ರತಿನಿತ್ಯ 4 ಕೋಟಿ ರೂ. ಲಂಚ ಸಂದಾಯವಾಗುತ್ತಿದೆ ಎಂದು ಆರೋಪಿಸಿರುವ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ ಬಿದರಿ ಮಾತಿಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಧ್ವನಿಗೂಡಿಸಿದ್ದಾರೆ. ಅಲ್ಲದೇ ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಪತ್ರವನ್ನು ಬರೆದಿದ್ದಾರೆ.
ಈ ಬಗ್ಗೆ ನಾನು ಹಿಂದೆಯೇ ಸರ್ಕಾರಕ್ಕೆ ಪತ್ರ ಬರೆದಿದ್ದೆ. ಅಕ್ರಮದಲ್ಲಿ ಸಚಿವರು ಮತ್ತು ಅವರ ಪುತ್ರರು ಭಾಗಿಯಾಗಿದ್ದಾರೆ ಎಂದು ಹೇಳಿದ್ದೆ. ಆಗ ಮತ್ತು ಈಗ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬರದಿರುವುದುನ್ನು ನೋಡಿದರೆ ಇಡೀ ಸರ್ಕಾರವೇ ಅಕ್ರಮದಲ್ಲಿ ಭಾಗಿಯಾದಂತೆ ಕಾಣುತ್ತಿದೆ ಎಂದು ಹೇಳಿಕೆಯಲ್ಲಿ ಆರೋಪಿಸಿದ್ದಾರೆ.[ಗೌಡರ ಕುಟುಂಬ ಗಾಜಿನ ಮನೆಯಲ್ಲಿಲ್ಲ, ಬೀದಿಯಲ್ಲಿದೆ!]

ಯಾವ ಸಚಿವರು ಈ ಬಗ್ಗೆ ಪ್ರತಿಕ್ರಿಯಿಸದಿದ್ದರೆ ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಲಿದ್ದೇನೆ. ಸರ್ಕಾರ ಈ ರೀತಿ ನಿರ್ಲಜ್ಜ ಭಾವನೆ ತಳೆದರೆ ಜನರಿಗೆ ಉತ್ತರ ನೀಡುವವರು ಯಾರು ಎಂದು ಪ್ರಶ್ನಿಸಿದ್ದಾರೆ.
ಶೂನ್ಯ ಭ್ರಷ್ಟಾಚಾರದ ಮೋದಿ ಸರ್ಕಾರ!
ಕುಮಾರಸ್ವಾಮಿ ಶಂಕರ್ ಬಿದರಿಯವರನ್ನು ಹೊಗಳುವ ಭರದಲ್ಲಿ ಮೋದಿ ಸರ್ಕಾರವನ್ನು ಹೊಗಳಿದ್ದಾರೆ. ಶೂನ್ಯ ಭ್ರಷ್ಟಾಚಾರವಿರುವ ಮೋದಿ ಸರ್ಕಾರ ಬೆಂಬಲಿಸಿ ಶಂಕರ್ ಬಿದರಿ ಬಿಜೆಪಿ ಕೈ ಹಿಡಿದಿದ್ದಾರೆ ಎಂದು ಹೇಳಿದ್ದಾರೆ.[ಬಿಜೆಪಿಗೆ ಸೆಲ್ಯೂಟ್ ಹೊಡೆದ ಶಂಕರ ಬಿದರಿ]
'ಕಾಂಗ್ರೆಸ್ ಕತ್ತೆಗಳಿಗೆ ಸನ್ಮಾನ'
ಬೆಂಗಳೂರು ಜೆಡಿಎಸ್ ಯುವ ಘಟಕ ಅಕ್ಟೋಬರ್ 29 ರಂದು ಬೆಳಿಗ್ಗೆ 11.30ಕ್ಕೆ ಆನಂದರಾವ್ ವೃತ್ತದ ಸಮೀಪದ ಗಾಂಧಿ ಪ್ರತಿಮೆ ಬಳಿ "ಕಾಂಗ್ರೆಸ್ ಕತ್ತೆಗಳಿಗೆ ಸನ್ಮಾನ" ಎಂಬ ಹಸರಿನಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಘಟಕದ ಅಧ್ಯಕ್ಷ ರಮೇಶ್ ಗೌಡ ತಿಳಿಸಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications