Get Updates
Get notified of breaking news, exclusive insights, and must-see stories!

ನೂತನ ಸಚಿವರಾಗಿ ಎಚ್ ನಾಗೇಶ್, ಆರ್ ಶಂಕರ್ ಪ್ರಮಾಣ ವಚನ

ಬೆಂಗಳೂರು, ಜೂನ್ 14: ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದ್ದು ನೂತನ ಸಚಿವರಾಗಿ ಪಕ್ಷೇತರ ಶಾಸಕ ಎಚ್ ನಾಗೇಶ್ ಹಾಗೂ ಕಾಂಗ್ರೆಸ್‌ನ ಆರ್‌ ಶಂಕರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಜಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಿಆರ್ ವಾಲಾ ಪ್ರತಿಜ್ಞಾವಿಧಿ ಬೋಧಿಸಿದರು. ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇದ್ದರು. ಸಂಪುಟ ದರ್ಜೆ ಸಚಿವರಾಗಿ ಆರ್ ಶಂಕರ್ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ಆರ್ ಶಂಕರ್ ಅವರು ಕೆಪಿಜೆಪಿ ಪಕ್ಷದಲ್ಲಿದ್ದು ಇದೀಗ ಕಾಂಗ್ರೆಸ್‌ ಜೊತೆ ವಿಲೀನ ಮಾಡಿಕೊಂಡಿದ್ದಾರೆ.

ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೊದಲು ಶಂಕರ್ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು.

H Nagesh R Shankar filled 2 of the total 3 vacant ministerial berths

ಇದೇ ವೇಳೆ ಕೆಪಿಜೆಪಿಯನ್ನು ಕಾಂಗ್ರೆಸ್‌ ಪಕ್ಷದಲ್ಲಿ ವಿಲೀನಗೊಳಿಸುವ ಪತ್ರವನ್ನು ನೀಡಿದ್ದರು. ಶಂಕರ್ ರಾಣೆ ಬೆನ್ನೂರು ಹಾಗೂ ಎಚ್ ನಾಗೇಶ್ ಮುಳಬಾಗಿಲು ಕ್ಷೇತ್ರವನ್ನು ಪ್ರತಿನಿಧಿಸಿ ಶಾಸಕರಾಗಿದ್ದಾರೆ.

ಮೂರನೇ ಸ್ಥಾನ ಭರ್ತಿ ಮಾಡುವ ಬಗ್ಗೆ ಜೆಡಿಎಸ್ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲದಿರುವುದರಿಂದ ಒಂದು ಸ್ಥಾನ ಖಾಲಿ ಉಳಿದಿದೆ.

H Nagesh R Shankar filled 2 of the total 3 vacant ministerial berths

ಬಂಡಾಯ, ಅಸಮಾಧಾನ, ಅತೃಪ್ತಿಗಳ ನಡುವೆ ಇಬ್ಬರು ಸಂಪುಟದೊಳಗೆ ಎಂಟ್ರಿ ಕೊಟ್ಟಿದ್ದಾರೆ.13 ತಿಂಗಳ ಮೈತ್ರಿ ಸರ್ಕಾರದಲ್ಲಿ ಎರಡನೇ ಸಂಪುಟ ವಿಸ್ತರಣೆ ಇದಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+