ಸಿದ್ದರಾಮಯ್ಯ ಟ್ವೀಟ್ಗೆ ವಿಶ್ವನಾಥ್ ಪ್ರತಿಟ್ವೀಟ್
ಬೆಂಗಳೂರು, ಮೇ 13: ಸಿದ್ದರಾಮಯ್ಯ-ವಿಶ್ವನಾಥ್ ಅವರ ನಡುವಿನ ವಾಕ್ಸಮರ ಹೆಚ್ಚಾಗುತ್ತಲೇ ಇದೆ, ಪರಸ್ಪರರು ಒಬ್ಬರನ್ನೊಬ್ಬರು ದೂಷಿಸಿಕೊಳ್ಳುತ್ತಲೇ ಇದ್ದಾರೆ.
ವಿಶ್ವನಾಥ್ ಅವರ ವಿರುದ್ಧ ಸಿದ್ದರಾಮಯ್ಯ ಅವರು ಇಂದು ಮಾಡಿದ್ದ ಟ್ವೀಟ್ಗೆ ಪ್ರತಿಯಾಗಿ ವಿಶ್ವನಾಥ್ ಅವರು ಸಹ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
Part-1
— Adagooru H Vishwanath (@AH_Vishwanath) May 13, 2019
ಮೈತ್ರಿ ಧರ್ಮಕ್ಕೆ ಧಕ್ಕೆ ಬರುವ 'ನಾನೇ ಮುಖ್ಯಮಂತ್ರಿ' ಎನ್ನುವ ವಿಷಯ ಪ್ರಸ್ತಾವನೆ ಪ್ರಥಮವಾಗಿ ಸಿದ್ದರಾಮಯ್ಯನವರೆ ನಿಮ್ಮಿಂದಲೇ ಆಗಿದು. ನನ್ನ ಹೇಳಿಕೆ ಬಹಳ ಜವಾಬ್ದಾರಿಯುತವಾಗಿದೆ. ಕಿಡಿಗೇಡಿತನ, ಕುಖ್ಯಾತಿ, ಎಲ್ಲರನ್ನೂ ಏಕವಚನದಲ್ಲಿ ಸಂಭೋದಿಸುವುದು, ಸುಳ್ಳು ಹೇಳುವುದು ನನ್ನ ಜನ್ಮದಲ್ಲಿ ನನ್ನ ರಕ್ತದಲ್ಲಿಯೆ ಬಂದಿಲ್ಲ.
ಟ್ವಿಟ್ಟರ್ನಲ್ಲಿ ಬರೆದುಕೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್, ಮೈತ್ರಿ ಧರ್ಮಕ್ಕೆ ಧಕ್ಕೆ ಬರುವ 'ನಾನೇ ಮುಖ್ಯಮಂತ್ರಿ' ಎನ್ನುವ ವಿಷಯ ಪ್ರಸ್ತಾವನೆ ಪ್ರಥಮವಾಗಿ ಸಿದ್ದರಾಮಯ್ಯನವರೆ ನಿಮ್ಮಿಂದಲೇ ಆಗಿದು ಎಂದು ಸಿದ್ದರಾಮಯ್ಯ ಅವರನ್ನು ತಿವಿದಿದ್ದಾರೆ.

ಮುಂದುವರೆದು, ನನ್ನ ಹೇಳಿಕೆ ಬಹಳ ಜವಾಬ್ದಾರಿಯುತವಾಗಿದೆ. ಕಿಡಿಗೇಡಿತನ, ಕುಖ್ಯಾತಿ, ಎಲ್ಲರನ್ನೂ ಏಕವಚನದಲ್ಲಿ ಸಂಭೋದಿಸುವುದು, ಸುಳ್ಳು ಹೇಳುವುದು ನನ್ನ ಜನ್ಮದಲ್ಲಿ ನನ್ನ ರಕ್ತದಲ್ಲಿಯೆ ಬಂದಿಲ್ಲ ಎಂದು ಹೇಳಿದ್ದಾರೆ.
Part-2
— Adagooru H Vishwanath (@AH_Vishwanath) May 13, 2019
ಸಮನ್ವಯ ಸಮಿತಿಗೆ ನನ್ನನ್ನು ಆಹ್ವಾನಿಸಿ ಬಂದು ಉತ್ತರಿಸುತ್ತೇನೆ. ನಿಮಗೆ ನಮ್ಮ ಕುಲದೈವ ಬೀರೇಶ್ವರ ಒಳ್ಳೆಯ ಬುದ್ದಿ ಕೊಡಲಿ.
ಸಮನ್ವಯ ಸಮಿತಿಗೆ ನನ್ನನ್ನು ಆಹ್ವಾನಿಸಿ ಅಲ್ಲಿಯೇ ಬಂದು ಉತ್ತರಿಸುತ್ತೇನೆ ಎಂದಿರುವ ವಿಶ್ವನಾಥ್, ನಿಮಗೆ ನಮ್ಮ ಕುಲದೈವ ಬೀರೇಶ್ವರ ಒಳ್ಳೆಯ ಬುದ್ದಿ ಕೊಡಲಿ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಆಡಳಿತ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳು ಆಗಿಲ್ಲವೆಂದು ವಿಶ್ವನಾಥ್ ಅವರು ಹೇಳಿದ್ದರು, ಇದಕ್ಕೆ ಆಕ್ರೋಶದಿಂದ ಸಿದ್ದರಾಮಯ್ಯ ಉತ್ತರಿಸಿದ್ದರು, ಇವರಿಬ್ಬರು ನಾಯಕರ ನಡುವಿನ ವಾಗ್ವಾದ ದಿನೇ-ದಿನೇ ಹೆಚ್ಚಾಗುತ್ತಿದ್ದು, ಜೆಡಿಎಸ್-ಕಾಂಗ್ರೆಸ್ ಪಕ್ಷಗಳ ನಡುವಿನ ಜಗಳವಾಗಿ ಬದಲಾಗುತ್ತಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications