ಕರ್ನಾಟಕಕ್ಕೂ ಕಾಲಿಟ್ಟ ಮಹಾಮಾರಿ ಎಚ್ 1 ಎನ್ 1
ಬೆಂಗಳೂರು, ಫೆ. 4: ಎಚ್ 1 ಎನ್ 1 ಮಹಾಮಾರಿ ಇದೀಗ ರಾಜ್ಯಕ್ಕೂ ಕಾಲಿಟ್ಟಿದೆ. ಹಂದಿ ಜ್ವರ ಸೋಂಕಿನಿಂದ ಬಳಲುತ್ತಿರುವ ಸಂಖ್ಯೆ ಕಳೆದ ಒಂದು ವಾರದಲ್ಲಿ ದ್ವಿಗುಣವಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕಳೆದ ಒಂದು ವಾರದಲ್ಲಿ ಸೋಂಕಿನಿಂದ ಬಳಲುತ್ತಿರುವ 24 ಪ್ರಕರಣಗಳು ದಾಖಲಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 54 ಕ್ಕೆ ಏರಿದೆ. ಆದರೆ ಇಲ್ಲಿಯವರೆಗೆ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಜನವರಿ 1 ರಿಂದ ಫೆಬ್ರವರಿ 1 ಅಂದರೆ ಒಂದು ತಿಂಗಳ ಅವಧಿಯಲ್ಲಿ ಒಟ್ಟು 54 ಜನರಲ್ಲಿ ಹಂದಿ ಜ್ವರದ ಸೋಂಕು ಕಾಣಿಸಿಕೊಂಡಿದೆ.[191 ಜನರನ್ನು ಬಲಿ ತೆಗೆದುಕೊಂಡ ಎಚ್ 1 ಎನ್ 1]

ಮಹಾನಗರದಲ್ಲಿ ಭೀತಿ
ಬೆಂಗಳೂರು ನಗರ ವ್ಯಾಪ್ತಿಯಲ್ಲೇ ಅತಿ ಹೆಚ್ಚು ಅಂದರೆ ಒಟ್ಟು 37 ಪ್ರಕರಣಗಳು ಕಂಡುಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಬಗೆಯ ರೋಗ ಲಕ್ಷಣಗಳುಳ್ಳ 268 ಸ್ಯಾಂಪಲ್ ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು ವರದಿ ಬರಬೇಕಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ತುಮಕೂರಿನಲ್ಲೂ ಸಹ ರೋಗ ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ.
ಉತ್ತರ ಭಾರತ ಮತ್ತು ಆಂಧ್ರ ಪ್ರದೇಶಕ್ಕೆ ಸೀಮಿತವಾಗಿದ್ದ ಮಹಾಮಾರಿ ಇದೀಗ ರಾಜ್ಯವನ್ನು ವ್ಯಾಪಿಸುತ್ತಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 191 ಜನ ಎಚ್ 1 ಎನ್ 1 ಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಸರ್ಕಾರ ವರದಿ ಫೆಬ್ರವರಿ 3 ರಂದು ವರದಿ ನೀಡಿತ್ತು.
ಹಂದಿಜ್ವರದ ಲಕ್ಷಣಗಳೇನು
* ಸತತ ಕೆಮ್ಮು, ಅತೀವ ಜ್ವರ, ಕಫಗಟ್ಟಿರುವ ಗಂಟಲು, ಇಡಿಯ ದೇಹದ ಒಂದೊಂದು ಅಂಗವೂ ನೋವಿನಿಂದ ಕಿರುಗುಟ್ಟುವುದು, ಸುಸ್ತು, ತಲೆ ಎತ್ತಲಾರದಷ್ಟು ತಲೆನೋವು ಮತ್ತು ವಾಂತಿ ಮತ್ತು ಬೇಧಿ [ಹಂದಿಜ್ವರದ ಲಕ್ಷಣ ಮತ್ತು ಹರಡುವ ಬಗೆ ಹೇಗೆ?]
* ಈ ವೈರಸ್ ಪೀಡಿತ ಹಂದಿಯ ಮಾಂಸವನ್ನು ಸರಿಯಾಗಿ ಸ್ವಚ್ಛಗೊಳಿಸದೇ ಅಥವಾ ಬೇಯಿಸದೇ ತಿಂದರೆ ರೋಗ ಸಂಭವವಿರುತ್ತದೆ.
* ರೋಗಾಣು ಬೆರೆತ ನೀರು, ಮಾಂಸ, ಸೇವಿಸುವುದರಿಂದ ರೋಗ ಹರಡಬಹುದು.
* ಇದೊಂದು ಸಾಂಕ್ರಾಮಿಕ ಕಾಯಿಲೆ
* ಹಂದಿಜ್ವರ ಪೀಡಿತ ವ್ಯಕ್ತಿಯ ಜೊಲ್ಲು, ಸೀನಿನ ಮೂಲಕ ಸಿಡಿದ ದ್ರವ ಆಹಾರ ವಸ್ತುಗಳಿಗೆ ಸೇರಿದರೆ ಸೊಂಕು ತಗಲುವ ಸಾಧ್ಯತೆಯಿದೆ.
* ಮೂಗಿಗೆ ಸದಾ ಬಟ್ಟೆ ಕಟ್ಟಿಕೊಳ್ಳುವುದರಿಂದ ಕೆಲ ಪ್ರಮಾಣದಲ್ಲಿ ರೋಗ ಹರಡುವುದನ್ನು ತಡೆಯಬಹುದು.
-
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ












Click it and Unblock the Notifications