ರಾಜ್ಯದಲ್ಲಿ ಮತ್ತೆ ಎಚ್1ಎನ್1 (ಹಂದಿ ಜ್ವರ) ಭೀತಿ: ಇಬ್ಬರು ಸಾವು
ಬೆಂಗಳೂರು, ಫೆಬ್ರವರಿ 26: ಕೊರೊನಾ ವೈರಸ್ ಭೀತಿ ವ್ಯಾಪಕವಾಗುತ್ತಿರುವ ನಡುವೆಯೇ ರಾಜ್ಯದಲ್ಲಿ ಎಚ್1ಎನ್1 ಸೋಂಕಿನ ಭೀತಿ ಮತ್ತೆ ಎದುರಾಗಿದೆ. ಹಂದಿ ಜ್ವರ ಎಂದು ಕರೆಯಲಾಗುವ ಈ ಸೋಂಕಿಗೆ ರಾಜ್ಯದಲ್ಲಿ ಇಬ್ಬರು ಬಲಿಯಾಗಿದ್ದು, ಮಹಾಮಾರಿ ವೈರಸ್ ಮತ್ತೆ ಆತಂಕ ಉಂಟುಮಾಡಿದೆ.
ತುಮಕೂರು ಮತ್ತು ದಾವಣೆಗೆರೆ ಜಿಲ್ಲೆಗಳಲ್ಲಿ ತಲಾ ಒಬ್ಬರು ಎಚ್1ಎನ್1 ಸೋಂಕಿಗೆ ಬಲಿಯಾಗಿರುವುದು ವರದಿಯಾಗಿದೆ. ಬೇಸಿಗೆ ಕಾಲ ಶುರುವಾಗಿರುವುದರಿಂದ ಎಚ್1ಎನ್1 ಮತ್ತಷ್ಟು ವ್ಯಾಪಿಸುವ ಭೀತಿ ಎದುರಾಗಿದೆ.
ಕೆಲವು ದಿನಗಳ ಹಿಂದಷ್ಟೇ, ಸ್ಯಾಪ್ ಇಂಡಿಯಾ ಸಾಫ್ಟ್ವೇರ್ ಸಂಸ್ಥೆಯ ಬೆಂಗಳೂರು ಕಚೇರಿಯಲ್ಲಿನ ಇಬ್ಬರು ಉದ್ಯೋಗಿಗಳಲ್ಲಿ ಎಚ್1ಎನ್1 ಇರುವುದು ದೃಢಪಟ್ಟಿತ್ತು. ಇದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸಂಸ್ಥೆಯು ಬೆಂಗಳೂರು ಸೇರಿದಂತೆ ದೇಶದಾದ್ಯಂತ ಇರುವ ತನ್ನ ಎಲ್ಲ ಕಚೇರಿಗಳನ್ನೂ ತಾತ್ಕಾಲಿಕವಾಗಿ ಬಂದ್ ಮಾಡಿದೆ. ಉದ್ಯೋಗಿಗಳನ್ನು ಮನೆಯಿಂದಲೇ ಕಾರ್ಯ ನಿರ್ವಹಿಸುವಂತೆ ಸೂಚಿಸಿದೆ.

ರಾಜ್ಯದಲ್ಲಿ ಕಳೆದ ವರ್ಷ ಎಚ್1ಎನ್1 ಸೋಂಕಿನಿಂದ 96 ಮಂದಿ ಮೃತಪಟ್ಟಿದ್ದರು. ಈಗ ವರ್ಷದ ಅರಂಭದಲ್ಲಿಯೇ ಇಬ್ಬರು ಬಲಿಯಾಗಿದ್ದಾರೆ. ಎಚ್1ಎನ್1 ಶಂಕೆ ವ್ಯಕ್ತವಾದಾಗ ರೋಗಿಗಳ ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷೆ ಮಾಡಲಾಗುತ್ತದೆ. ಪ್ರಸಕ್ತ ವರ್ಷ ಇದುವರೆಗೂ ರಾಜ್ಯದಲ್ಲಿ 1823 ಶಂಕಿತ ರೋಗಿಗಳನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಅವರಲ್ಲಿ 192 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಅತಿ ಹೆಚ್ಚು, ಅಂದರೆ 94 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಉಡುಪಿ-46, ದಕ್ಷಿಣ ಕನ್ನಡ- 13, ಬೆಂಗಳೂರು ಗ್ರಾಮಾಂತರ-7, ದಾವಣಗೆರೆ-7, ಶಿವಮೊಗ್ಗ- 7, ಚಿಕ್ಕಮಗಳೂರು- 4, ಬಳ್ಳಾರಿ, ಚಿತ್ರದುರ್ಗ, ಕೋಲಾರ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ 2 ಹಾಗೂ ತುಮಕೂರು, ಮೈಸೂರು, ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿವೆ.
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications