Hampi Temple: ಹಂಪಿ ದೇವಸ್ಥಾನದಲ್ಲಿ ಬಾಳೆಹಣ್ಣು ನಿಷೇಧ; ಕಾರಣವೇನು?
ಹಂಪಿ ವಿರೂಪಾಕ್ಷ ದೇವಸ್ಥಾನದಲ್ಲಿ ಇನ್ನು ಮುಂದೆ ಭಕ್ತರು ಪೂಜೆಗೆ ಬಾಳೆಹಣ್ಣು ತೆಗೆದುಕೊಂಡು ಹೋಗುವಂತಿಲ್ಲ. ದೇವಸ್ಥಾನದ ಆಡಳಿತ ಮಂಡಳಿಯೇ ನಿರ್ಧಾರ ತೆಗೆದುಕೊಂಡಿದೆ. ದೇವಸ್ಥಾನದ ಒಳಗಡೆ ಇರುವ ಆನೆಗಳಿಗೆ ಅತಿಯಾದ ಬಾಳೆಹಣ್ಣಿನ ಸಿಪ್ಪೆಯನ್ನು ಹಾಕುತ್ತಿರುವುದರಿಂದ ಸಮಸ್ಯೆಯಾಗುತ್ತಿದ್ದು ಅದನ್ನು ತಪ್ಪಿಸಲು ಈ ನಿರ್ಧಾರ ಮಾಡಲಾಗಿದೆ.
ಹಂಪಿ ವಿರೂಪಾಕ್ಷ ದೇವಸ್ಥಾನವು 7ನೇ ಶತಮಾನದಲ್ಲಿ ನಿರ್ಮಾಣವಾಗಿದ್ದು, ಪ್ರತಿವರ್ಷ ಲಕ್ಷಾಂತರ ಪ್ರವಾಸಿಗರು ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ. ದೇವಸ್ಥಾನಕ್ಕೆ ಬರುವ ಭಕ್ತರು ಪೂಜೆಗಾಗಿ ತರುವ ಬಾಳೆಹಣ್ಣನ್ನು ಕೆಲವರು ಆವರಣದಲ್ಲೇ ತಿಂದು ಸಿಪ್ಪೆಯನ್ನು ಆನೆಗಳಿಗೆ ನೀಡಿದರೆ, ಕೆಲವರು ಬಾಳೆಹಣ್ಣುಗಳನ್ನೇ ಆನೆಗಳಿಗೆ ನೀಡುತ್ತಾರೆ. ಇದರಿಂದ ಸಮಸ್ಯೆಯಾಗುತ್ತಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.

ದೇವಾಲಯದ ದತ್ತಿ ಅಧಿಕಾರಿ ಹನುಮಂತಪ್ಪ ಮಾತನಾಡಿ, "ಭಕ್ತರು ಆನೆಗೆ ಆಹಾರ ನೀಡಲು ಅತಿಯಾದ ಉತ್ಸಾಹ ತೋರುತ್ತಿದ್ದು ಸಮಸ್ಯೆಗೆ ಕಾರಣವಾಗಿದೆ. ಆನೆಗಳಿಗೆ ಇದರಿಂದ ಯಾವುದೇ ಸಮಸ್ಯೆಯಾಗದೇ ಇದ್ದರು, ದೇವಸ್ಥಾನದ ಪ್ರಾಂಗಣದಲ್ಲಿ ಗಲೀಜು ಹೆಚ್ಚಾಗುತ್ತಿದೆ. ಭಕ್ತರು ಬಾಳೆಹಣ್ಣಿನ ಸಿಪ್ಪೆ ಮತ್ತು ಬಾಳೆಹಣ್ಣು ತರುವ ಪ್ಲಾಸ್ಟಿಕ್ ಚೀಲಗಳನ್ನು ಸಹ ಬಿಟ್ಟು ಹೋಗುತ್ತಾರೆ" ಎಂದು ಪಿಟಿಐ ವರದಿ ಮಾಡಿದೆ.
ವಿವಾದ ಮಾಡದಂತೆ ಮನವಿ
ದೇವಸ್ಥಾನಕ್ಕೆ ಬಾಳೆಹಣ್ಣು ತರದಂತೆ ನಿಷೇಧ ಮಾಡಿದ ನಂತರ ಬಹಳಷ್ಟು ಜನ ಕರೆ ಮಾಡುತ್ತಿದ್ದಾರೆ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಬಾಳೆಹಣ್ಣು ತರುವುದರ ಮೇಲೆ ನಿಷೇಧ ಹೇರಿರುವುದು ದೇವಸ್ಥಾನದ ಸ್ವಚ್ಛತೆಯನ್ನು ಕಾಪಾಡಲು ಈ ನಿರ್ಧಾರ ಮಾಡಲಾಗಿದ್ದು ಇದನ್ನು ವಿವಾದ ಮಾಡಬಾರದು ಎಂದು ಜನರಿಗೆ ಮನವಿ ಮಾಡಿದ್ದಾರೆ.
ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ ವಿಚಾರಗಳ ಆಧಾರದ ಮೇಲೆ ನಾವು ನಿರ್ಧಾರ ತೆಗೆದುಕೊಂಡಿದ್ದೇವೆ, ಅದನ್ನು ಹೊರತು ಪಡಿಸಿ ಇದರಲ್ಲಿ ವಿವಾದ ಮಾಡುವಂತಹ ಯಾವುದೇ ವಿಚಾರವಿಲ್ಲ ಎಂದು ಹೇಳಿದರು.
ಹಂಪಿ ವಿರೂಪಾಕ್ಷ ದೇವಸ್ಥಾನವನ್ನು 'ದಕ್ಷಿಣ ಕಾಶಿ' ಎಂದು ಕರೆಯಲಾಗುತ್ತದೆ. ಹಂಪಿಯನ್ನು ನೋಡಲು ಪ್ರತಿದಿನ ಐದು ಸಾವಿರ ಭಕ್ತರು ಭೇಟಿ ನೀಡುತ್ತಾರೆ. ವಾರಾಂತ್ಯ ಮತ್ತು ರಜೆಯ ದಿನಗಳಲ್ಲಿ ಜನಸಂದಣಿ ಪ್ರಮಾಣ ಮತ್ತಷ್ಟು ಹೆಚ್ಚಾಗುತ್ತದೆ. ದಿನಕ್ಕೆ ಐವತ್ತು ಸಾವಿರಕ್ಕೂ ಹೆಚ್ಚು ಭಕ್ತರು ಇಲ್ಲಿಗೆ ಭೇಟಿ ನೀಡುತ್ತಾರೆ.
ಧಾರ್ಮಿಕವಾಗಿ ಮಾತ್ರವಲ್ಲದೆ ಐತಿಹಾಸಿಕವಾಗಿ ಕೂಡ ಹಂಪಿ ಪ್ರಸಿದ್ಧವಾಗಿದ್ದು ವಿದೇಶಿಯರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications