Hampi Utsav: ಜನವರಿಯಲ್ಲಿ ಎರಡು ದಿನಗಳ ಅದ್ಧೂರಿ ಹಂಪಿ ಉತ್ಸವ
ವಿಜಯನಗರ, ಡಿಸೆಂಬರ್ 2: ಎರಡು ದಿನಗಳ ಹಂಪಿ ಉತ್ಸವ ನಡೆಸಲು ವಿಜಯನಗರ ಜಿಲ್ಲಾಡಳಿತ ಅಂತಿಮವಾಗಿ ದಿನಾಂಕಗಳನ್ನು ನಿರ್ಧರಿಸಿದೆ. ಆರಂಭದಲ್ಲಿ ಜನವರಿ 6, 2023 ರಂದು ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ದಿನದಂದೇ ಉದ್ಘಾಟನೆ ಮಾಡಲು ಯೋಜಿಸಲಾಗಿತ್ತು.
ಈಗ 2 ದಿನಗಳ ಹಂಪಿ ಉತ್ಸವವನ್ನು ಜನವರಿ ಮಧ್ಯದಲ್ಲಿ ಹಮ್ಮಿಕೊಳ್ಳಲಾಗಿದ್ದು, ಒಂದು ಅಥವಾ ಎರಡು ದಿನಗಳಲ್ಲಿ ಅಂತಿಮ ದಿನಾಂಕಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ. ಮಂಗಳವಾರ ವಿಜಯನಗರ ಜಿಲ್ಲಾಧಿಕಾರಿ ವೆಂಕಟೇಶ್ ಟಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಹರಿಬಾಬು ಬಿ.ಎಲ್ ಪ್ರತಿ ವರ್ಷ ಹಂಪಿ ಉತ್ಸವ ಆಯೋಜಿಸುವ ಪ್ರದೇಶಗಳನ್ನು ಪರಿಶೀಲನೆ ನಡೆಸಿದ್ದಾರೆ. ಜಲಕ್ರೀಡೆ ಪ್ರದೇಶ, ಮುಖ್ಯ ವೇದಿಕೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಇತರ ಸ್ಥಳಗಳನ್ನು ಅವರು ಪರಿಶೀಲಿಸಿದರು.
ಹಂಪಿ ಉತ್ಸವವು ರಾಜ್ಯ ಸರ್ಕಾರ ನಡೆಸುವ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಈ ಕಾರ್ಯಕ್ರಮವನ್ನು 1980ರ ದಶಕದಲ್ಲಿ ಮಾಜಿ ಉಪಮುಖ್ಯಮಂತ್ರಿ ಎಂ.ಪಿ. ಪ್ರಕಾಶ್ ಅವರು ಮೊದಲು ಪ್ರಾರಂಭಿಸಿದರು. ನಂತರ ಸರ್ಕಾರ ಇದನ್ನು ನಡೆಸಿಕೊಂಡು ಬರಲಾಗುತ್ತಿದೆ. ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಹಂಪಿಯ ತುಂಗಭದ್ರಾ ನದಿಯ ದಡದಲ್ಲಿ ಸಾಂಕೇತಿಕವಾಗಿ ಉತ್ಸವವನ್ನು ಆಯೋಜಿಸಲಾಗಿದೆ. ಆದರೆ ಈ ಬಾರಿ ಎರಡು ದಿನಗಳ ಉತ್ಸವವನ್ನು ಅದ್ಧೂರಿಯಾಗಿ ಮಾಡಲು ಆಡಳಿತ ಮತ್ತು ಸಚಿವರು ಮತ್ತು ಸ್ಥಳೀಯ ಶಾಸಕ ಆನಂದ್ ಸಿಂಗ್ ಉತ್ಸುಕರಾಗಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರೊಂದಿಗೆ ಚರ್ಚಿಸಿದ್ದೇವೆ. ಡಿಸೆಂಬರ್ 5 ರಂದು ಈ ಬಗ್ಗೆ ಸಭೆ ನಡೆಸಿ ದಿನಾಂಕವನ್ನು ಅಂತಿಮಗೊಳಿಸಲಾಗುವುದು. ಉತ್ಸವವನ್ನು ಮೂರು ದಿನಕ್ಕೆ ಹೆಚ್ಚಿಸಬೇಕು ಎಂಬ ಆಗ್ರಹ ಕೇಳಿ ಬಂದಿದೆ. ಸಚಿವರ ನೇತೃತ್ವದಲ್ಲಿ ಎಲ್ಲ ಪಾಲುದಾರರ ಸಭೆ ನಡೆಯಲಿದೆ. ಉತ್ಸವವನ್ನು ಅದ್ಧೂರಿಯಾಗಿ ನಡೆಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಡಿಸೆಂಬರ್ ಮೂರನೇ ವಾರದಿಂದ ಕಾರ್ಯಕ್ರಮಕ್ಕೆ ಸಿದ್ಧತೆ ಆರಂಭಿಸುತ್ತೇವೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಹೇಳಿದರು.

ಸಾಮಾನ್ಯ ಕಾರ್ಯಕ್ರಮಗಳಾದ ತುಂಗಾ ಆರತಿ, ಸಾಂಸ್ಕೃತಿಕ ಸಂಜೆ, ಹಂಪಿ ಬೈ ಸ್ಕೈ ಹೆಲಿಕಾಪ್ಟರ್ ರೈಡ್, ಲೈಟ್ ಆ್ಯಂಡ್ ಸೌಂಡ್ ಶೋ, ಗ್ರಾಮೀಣ ಕ್ರೀಡೆಗಳ ಜತೆಗೆ ತುಂಗಭದ್ರಾ ನದಿಯಲ್ಲಿ ಜಲಕ್ರೀಡೆ ನಡೆಸಲು ಆಡಳಿತ ಮಂಡಳಿ ಮುಂದಾಗಿದೆ. ಹಿಂದಿನ ಆವೃತ್ತಿಗಳಲ್ಲಿ ಕಮಲಾಪುರ ಕೆರೆಯಲ್ಲಿ ಜಲಕ್ರೀಡೆ ನಡೆಯಲಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications