ಬೆಂಗಳೂರು, ನವೆಂಬರ್ 02; ಕರ್ನಾಟಕದ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಎರಡು ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಹಾನಗಲ್ನಲ್ಲಿ ಕಾಂಗ್ರೆಸ್ ಜಯಗಳಿಸಿದೆ, ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಜಯ ದಾಖಲಿಸಿದೆ.
ಹಾವೇರಿ ಜಿಲ್ಲೆಯ ಹಾನಗಲ್ ಮತ್ತು ವಿಜಯಪುರ ಜಿಲ್ಲೆಯ ಸಿಂಧಗಿ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಮಂಗಳವಾರ ಬೆಳಗ್ಗೆ 8 ಗಂಟೆಗೆ ಆರಂಭವಾಯಿತು. ಹಾನಗಲ್ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪ್ರಬಲ ಪೈಪೋಟಿ ಎದುರಾಯಿತು. ಆದರೆ ಸಿಂದಗಿಯಲ್ಲಿ ಬಿಜೆಪಿಯ ರಮೇಶ್ ಭೂಸನೂರ ಮೊದಲ ಸುತ್ತಿನಿಂದಲೇ ಮುನ್ನಡೆ ಕಾಯ್ದುಕೊಂಡು 31,088 ಮತಗಳ ಅಂತರದಲ್ಲಿ ಗೆದ್ದರು.
ಹಾನಗಲ್ನಲ್ಲಿ ಕಾಂಗ್ರೆಸ್ನ ಶ್ರೀನಿವಾಸ ಮಾನೆ ಮತ್ತು ಬಿಜೆಪಿಯ ಶಿವರಾಜ ಸಜ್ಜನರ ನಡುವೆ ಪ್ರಬಲ ಪೈಪೋಟಿ ನಡೆಯಿತು. ಅಂತಿಮವಾಗಿ ಶ್ರೀನಿವಾಸ ಮಾನೆ 7598 ಮತಗಳಿಂದ ಗೆಲುವು ಸಾಧಿಸಿದರು. ಈ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಯಲ್ಲಿಯೇ ಪಕ್ಷದ ಅಭ್ಯರ್ಥಿ ಸೋಲು ಕಂಡು ಮುಖಭಂಗ ಅನುಭವಿಸಿದರು.
ಹಾನಗಲ್ನಲ್ಲಿ ಶಾಸಕರಾಗಿದ್ದ ಸಿ. ಎಂ. ಉದಾಸಿ ನಿಧನದಿಂದ ಮತ್ತು ಸಿಂಧಗಿಯಲ್ಲಿ ಶಾಸಕರಾಗಿದ್ದ ಎಂ. ಸಿ. ಮುನಗೂಳಿ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆದಿತ್ತು. ಎರಡೂ ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸಿದ್ದ ಜೆಡಿಎಸ್ ಹೀನಾಯ ಸೋಲು ಕಂಡಿತು. 2018ರಲ್ಲಿ ಗೆದ್ದಿದ್ದ ಸಿಂದಗಿ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಟ್ಟಿತು.
ಸಿಂದಗಿ ಮತ್ತು ಹಾನಗಲ್ ಕ್ಷೇತ್ರದ ಉಪ ಚುನಾವಣೆ ಫಲಿತಾಂಶದ ಕ್ಷಣ-ಕ್ಷಣದ ಮಾಹಿತಿ, ಚಿತ್ರಗಳು, ವಿಡಿಯೋ ಈ ಪುಟದಲ್ಲಿ ಓದುಗರಿಗೆ ಸಿಗಲಿದೆ.
Nov 02, 2021, 5:35 pm IST
ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆಗೆ 87,113 ಮತಗಳು, ಬಿಜೆಪಿಯ ಶಿವರಾಜ್ ಸಜ್ಜನರಗೆ 79,515 ಮತಗಳು ಹಾಗೂ ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ಗೆ 921 ಮತಗಳು ಸಿಕ್ಕಿವೆ. ಕಾಂಗ್ರೆಸ್ನ ಶ್ರೀನಿವಾಸ ಮಾನೆಗೆ 7,598 ಮತಗಳ ಅಂತದಿಂದ ಜಯ ಸಿಕ್ಕಿದೆ.
Nov 02, 2021, 4:48 pm IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾನಗಲ್ ಪಕ್ಕದ ಕ್ಷೇತ್ರದವರು. ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೇ ಬಿಜೆಪಿ ಸೋತಿದೆ. ಹಾನಗಲ್ನಲ್ಲಿ ಪ್ರಚಾರದ ವೇಳೆ ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಮಣ್ಣಾಗುತ್ತೇನೆ, ನಾನು ಅಕ್ಕಿಆಲೂರಿನ ಅಳಿಯ ಎಂದೆಲ್ಲಾ ಭಾವನಾತ್ಮಕವಾಗಿ ಮಾತನಾಡಿದರೂ ಕೂಡ ಜನರು ಅವರ ಮಾತಿಗೆ ಮರುಳಾಗದೆ ನಮ್ಮ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
Nov 02, 2021, 4:13 pm IST
ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ನಮ್ಮ ಪಕ್ಷದ ಅಭ್ಯರ್ಥಿ ರಮೇಶ್ ಭೂಸನೂರಗೆ ಹೃತ್ಪೂರ್ವಕ ಅಭಿನಂದನೆಗಳು. ಈ ಅಭೂತಪೂರ್ವ ವಿಜಯಕ್ಕೆ ಕಾರಣೀಕರ್ತರಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ಎಲ್ಲ ಹಿರಿಯ ನಾಯಕರು ಹಾಗೂ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.
Nov 02, 2021, 3:54 pm IST
ಕರ್ನಾಟಕದಲ್ಲಿ ನಮಗೆ ಮಿಶ್ರ ಫಲಿತಾಂಶ ಸಿಕ್ಕಿದ್ದು, ಇದಕ್ಕೆ ಇವಿಎಂ ದೂರಲ್ಲ. ಜನರ ತೀರ್ಪನ್ನು ಸ್ವಾಗತಿಸುತ್ತೇವೆ ಎಂದು ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನನಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.
Nov 02, 2021, 3:53 pm IST
ಹಾನಗಲ್ನಲ್ಲಿ ನಿರೀಕ್ಷಿಸಿದಷ್ಟು ಮತಗಳು ಬಂದಿಲ್ಲ, ಹೀಗಾಗಿಯೇ ನಮಗೆ ಹಿನ್ನಡೆ ಆಗಿದೆ. ಸಿ.ಎಂ. ಉದಾಸಿಗೆ ಸಲ್ಲಬೇಕಿದ್ದ ಮತ ಪಡೆಯಲು ಆಗಿಲ್ಲ. ನಮ್ಮ ಪಕ್ಷದ ಹಿರಿಯರು ಮತ್ತು ಕಾರ್ಯಕರ್ತರು ಕಷ್ಟಪಟ್ಟು ಕೆಲಸ ಮಾಡಿದ್ದರು. ಉಪ ಚುನಾವಣೆಯಲ್ಲಿ ಕೆಲಸ ಮಾಡಿದವರಿಗೆ ಧನ್ಯವಾದ ಎಂದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
Nov 02, 2021, 3:24 pm IST
ಜೆಡಿಎಸ್ ಪಕ್ಷವು ಬಿಜೆಪಿ ಬಿ ಟೀಮ್ ಎಂದು ಕಾಂಗ್ರೆಸ್ ಪಕ್ಷದ ನಾಯಕರು ನಡೆಸಿದ ದುರುದ್ದೇಶಪೂರಿತ. ಅಪಪ್ರಚಾರಕ್ಕೆ ಉಪ ಚುನಾವಣೆ ಫಲಿತಾಂಶವೇ ಉತ್ತರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
Nov 02, 2021, 2:39 pm IST
ಹಾನಗಲ್ ಉಪ ಚುನಾವಣೆಯಲ್ಲಿ ಸೋತ ಬಳಿಕ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ್ ಪ್ರತಿಕ್ರಿಯೆ ನೀಡಿದ್ದು, ಸೋಲಿನ ಹೊಣೆ ಪಕ್ಷದ್ದೂ ಹೌದು, ನನ್ನದೂ ಹೌದು. ಸೋಲಿಗೆ ಕಾರಣ ಗೊತ್ತಾಗುತ್ತಿಲ್ಲ. ವಿಜೇತ ಶ್ರೀನಿವಾಸ ಮಾನೆಗೆ ಅಭಿನಂದನೆ ಎಂದು ಹೇಳಿದ್ದಾರೆ.
Nov 02, 2021, 2:15 pm IST
ಹಾನಗಲ್ ಕ್ಷೇತ್ರದ 19ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿಗೆ 3789 ಮತ, ಬಿಜೆಪಿ ಅಭ್ಯರ್ಥಿಗೆ 3516 ಮತ ಹಾಗೂ ಜೆಡಿಎಸ್ ಅಭ್ಯರ್ಥಿಗೆ 55 ಮತ ಲಭಿಸಿದೆ.
Nov 02, 2021, 1:55 pm IST
ಅಂತಿಮವಾಗಿ 31,573 ಮತಗಳ ಅಂತರದಿಂದ ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು.
Nov 02, 2021, 1:51 pm IST
ಸಿಂದಗಿಯಲ್ಲಿ ನಮ್ಮ ನಿರೀಕ್ಷೆ ಹುಸಿಯಾಗಿದೆ, ಜೆಡಿಎಸ್ನಿಂದ ಬಂದ ಕಾರ್ಯಕರ್ತರೊಂದಿಗೆ ಹೊಂದಾಣಿಕೆಯಾಗಲಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
Nov 02, 2021, 1:46 pm IST
ಹಾನಗಲ್ನ 17ನೇ ಸುತ್ತು ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ 78342 ಮತ, ಬಿಜೆಪಿ ಅಭ್ಯರ್ಥಿ 71326 ಮತ ಹಾಗೂ ಜೆಡಿಎಸ್ ಅಭ್ಯರ್ಥಿ 820 ಮತಗಳನ್ನು ಪಡೆದಿದ್ದಾರೆ. 7016 ಮತಗಳಿಂದ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
ಸಿಂದಗಿ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಶ್ರೀ ರಮೇಶ್ ಭೂಸನೂರ ಅವರಿಗೆ ಅಭಿನಂದನೆಗಳು. ಕ್ಷೇತ್ರದ ಮತದಾರ ಬಂಧುಗಳಿಗೆ, ಕಾರ್ಯಕರ್ತರಿಗೆ ಮತ್ತು ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಕೇಂದ್ರ ಸಚಿವ, ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿದ್ದಾರೆ.
Nov 02, 2021, 1:14 pm IST
ಕರ್ನಾಟಕ
ಸಿಂಧಗಿ ಉಪ ಚುನಾವಣೆಯಲ್ಲಿ ಗೆಲುವು. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಟ್ವೀಟ್
ಸಿಂದಗಿ ಉಪಚುನಾವಣೆಯಲ್ಲಿ ಉತ್ತಮ ಅಂತರದಲ್ಲಿ ವಿಜಯ ಸಾಧಿಸಿದ ಪಕ್ಷದ ಅಭ್ಯರ್ಥಿ ರಮೇಶ್ ಭೂಸನೂರ್ ಅವರಿಗೆ ಅಭಿನಂದನೆಗಳು. ಪ್ರಧಾನಿ ಶ್ರೀ @narendramodi ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳು, ರಾಜ್ಯ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎನ್ನುವುದಕ್ಕೆ ಈ ಕ್ಷೇತ್ರದಲ್ಲಿ ಪಕ್ಷದ ಗೆಲುವು ಸಂಕೇತವಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಯಲ್ಲಿಯೇ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ. ಮುಖ್ಯಮಂತ್ರಿಗಳ ಸ್ವಕ್ಷೇತ್ರದ ಪಕ್ಕದ ಕ್ಷೇತ್ರದಲ್ಲೇ ಕಾಂಗ್ರೆಸ್ ಮುನ್ನಡೆ ಪಡೆದುಕೊಂಡಿದೆ.
Nov 02, 2021, 1:01 pm IST
ಕರ್ನಾಟಕ
ಹಾನಗಲ್ ಉಪ ಚುನಾವಣೆ
ಹಾನಗಲ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಪಡೆದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಮಾತನಾಡಿದ್ದು, "ಹಾನಗಲ್ನಲ್ಲಿ ಜನಬಲ ಗೆದ್ದಿದೆ, ಹಣ ಬಲ ಸೋತಿದೆ. ಹಾನಗಲ್ ಜನರಿಗೆ ಸಾಷ್ಟಾಂಗ ನಮಸ್ಕಾರ ಸಲ್ಲಿಸುವೆ. ನಮ್ಮ ನಾಯಕರು ಪರಿಶ್ರಮ ಹಾಕಿದ್ದಾರೆ. ಸರ್ಕಾರದ ತಂತ್ರ ಮಣಿಸಿದ್ದಾರೆ. ಜನರು ಸರ್ಕಾರದ ಜನವಿರೋಧಿ ನೀತಿ, ದುರಾಡಳಿತ ತಿರಸ್ಕಾರ ಮಾಡಿದ್ದಾರೆ. ಇನ್ನಾದರು ಜನರ ಕಲ್ಯಾಣ ಮಾಡಲಿ" ಎಂದು ಹೇಳಿದರು.
Nov 02, 2021, 12:57 pm IST
ದಾದ್ರಾ ಹಾಗೂ ನಗರ್ ಹವೇಲಿ
ಲೋಕಸಭೆ ಉಪ ಚುನಾವಣೆ
ದಾದ್ರ ಮತ್ತು ನಗರ ಹವೇಲಿ ಲೋಕಸಭೆ ಉಪ ಚುನಾವಣೆಯಲ್ಲಿ ಶಿವಸೇನೆ ಅಭ್ಯರ್ಥಿ 20,000 ಮತಗಳ ಅಂತರದಿಂದ ಮುನ್ನಡೆ ಪಡೆದುಕೊಂಡಿದ್ದಾರೆ.
Nov 02, 2021, 12:51 pm IST
ಕರ್ನಾಟಕ
ಸಿಂದಗಿ ಬಿಜೆಪಿ ಗೆಲುವು
ಸಿಂಧಗಿ ಕ್ಷೇತ್ರದಲ್ಲಿ ಬಿಜೆಪಿಗೆ 31,185 ಮತಗಳ ಗೆಲುವು. ಅಧಿಕೃತ ಘೋಷಣೆ ಬಾಕಿ
ಬಿಜೆಪಿಯ ರಮೇಶ್ ಭೂಸನೂರು 93,865 ಮತಗಳು
ಕಾಂಗ್ರೆಸ್ನ ಅಶೋಕ್ ಮನಗೂಳಿ 62,680
ಜೆಡಿಎಸ್ನ ನಾಜಿಯಾ ಶಕೀಲಾ ಅಂಗಡಿ 4353
Nov 02, 2021, 12:43 pm IST
ಕರ್ನಾಟಕ
ಶ್ರೀನಿವಾಸ ಮಾನೆ
ಹಾನಗಲ್ನಲ್ಲಿ ಕಾಂಗ್ರೆಸ್ನ ಶ್ರೀನಿವಾಸ ಮಾನೆ 7 ಸಾವಿರಕ್ಕೂ ಅಧಿಕ ಮತಗಳ ಮುನ್ನಡೆ ಪಡೆದಿದ್ದಾರೆ.
Nov 02, 2021, 12:37 pm IST
ಕರ್ನಾಟಕ
ಕಾಂಗ್ರೆಸ್ 2ನೇ ಸ್ಥಾನಕ್ಕೆ
2018ರ ಚುನಾವಣೆಯಲ್ಲಿ ಸಿಂದಗಿಯಲ್ಲಿ ಕಾಂಗ್ರೆಸ್ ಪಕ್ಷ 22,818 ಮತಗಳನ್ನು ಪಡೆದು 3ನೇ ಸ್ಥಾನಕ್ಕೆ ಕುಸಿದಿತ್ತು. ಈ ಬಾರಿ 62,680 ಮತಗಳನ್ನು ಪಡೆದು 2ನೇ ಸ್ಥಾನವನ್ನು ಪಡೆದಿದೆ.
ಸಿಂದಗಿಯಲ್ಲಿ 21ನೇ ಸುತ್ತಿನಲ್ಲಿ ಬಿಜೆಪಿಗೆ 30,846 ಮತಗಳ ಮುನ್ನಡೆ. ಬಿಜೆಪಿ 92,581 ಮತ. ಕಾಂಗ್ರೆಸ್ 61,735, ಜೆಡಿಎಸ್ 4,248 ಮತಗಳು.
Nov 02, 2021, 12:09 pm IST
ಕರ್ನಾಟಕ
ಹಾನಗಲ್
ಹಾನಗಲ್ನಲ್ಲಿ 8 ಸುತ್ತಿನ ಮತ ಎಣಿಕೆ ಬಾಕಿ. ಕಾಂಗ್ರೆಸ್ನ ಶ್ರೀನಿವಾಸ ಮಾನೆ 6,459 ಮತಗಳ ಮುನ್ನಡೆ.
ಬಿಜೆಪಿ 44,178 ಮತಗಳು, ಕಾಂಗ್ರೆಸ್ 50,637, ಜೆಡಿಎಸ್ 523 ಮತಗಳು.
Nov 02, 2021, 12:04 pm IST
ಕರ್ನಾಟಕ
ಹಾನಗಲ್ ಕಾಂಗ್ರೆಸ್ ಮುನ್ನಡೆ
ಹಾನಗಲ್ನಲ್ಲಿ 11ನೇ ಸುತ್ತಿನ ಬಳಿಕ ಕಾಂಗ್ರೆಸ್ನ ಶ್ರೀನಿವಾಸ ಮಾನೆ 6,459 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ.
Nov 02, 2021, 12:00 pm IST
ಕರ್ನಾಟಕ
ಸಿಂದಗಿ
ಸಿಂದಗಿಯಲ್ಲಿ 20ನೇ ಸುತ್ತಿನಲ್ಲಿ ಬಿಜೆಪಿಗೆ 28,462 ಮತಗಳ ಮುನ್ನಡೆ. ಕೇವಲ 2 ಸುತ್ತಿನ ಮತ ಎಣಿಕೆ ಬಾಕಿ ಇದೆ.
READ MORE
6:12 AM, 2 Nov
ಸಿಂಧಗಿ ಮತ್ತು ಹಾನಗಲ್ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ 8 ಗಂಟೆಗೆ ಆರಂಭ
6:14 AM, 2 Nov
ಹಾವೇರಿ ಜಿಲ್ಲೆಯ ಹಾನಗಲ್ ಮತ್ತು ವಿಜಯಪುರ ಜಿಲ್ಲೆಯ ಸಿಂಧಗಿ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಇಂದು ನಡೆಯಲಿದೆ.
6:40 AM, 2 Nov
ಸಿಂಧಗಿ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಅಶೋಕ್ ಮನಗೂಳಿ, ಬಿಜೆಪಿಯಿಂದ ರಮೇಶ್ ಭೂಸನೂರು, ಜೆಡಿಎಸ್ನಿಂದ ನಾಜಿಯಾ ಶಕೀಲಾ ಅಂಗಡಿ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು.
7:19 AM, 2 Nov
ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಶ್ರೀನಿವಾಸ ಮಾನೆ, ಬಿಜೆಪಿಯಿಂದ ಶಿವರಾಜ್ ಸಜ್ಜನರ, ಜೆಡಿಎಸ್ನಿಂದ ನಿಯಾಜ್ ಶೇಕ್ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು.
7:33 AM, 2 Nov
ಮತ ಎಣಿಕೆ ಕೇಂದ್ರಕ್ಕೆ ಪಕ್ಷಗಳ ಏಜೆಂಟ್ಗಳನ್ನು ಬಿಡಲಾಗುತ್ತಿದೆ. ಕೆಲವೇ ಕ್ಷಣಗಳಲ್ಲಿ ಸ್ಟ್ರಾಂಗ್ ರೂಂ ಬಾಗಿಲು ತೆರೆಯಲಾಗುತ್ತದೆ.
7:40 AM, 2 Nov
ಸಿಂಧಗಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಹನುಮಾನ್ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.
7:42 AM, 2 Nov
ಸಿಂಧಗಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ ಮಹಾರಾಷ್ಟ್ರದಲ್ಲಿರುವ ಅಂಬಾಭವಾನಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
7:44 AM, 2 Nov
ಹಾನಗಲ್ ಮತ್ತು ಸಿಂಧಗಿ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಚುನಾವಣಾ ಸಿಬ್ಬಂದಿ ಮತ ಪೆಟ್ಟಿಗೆ ಇರುವ ಸ್ಟ್ರಾಂಗ್ ರೂಂ ಬಾಗಿಲನ್ನು ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ತೆರೆದಿದ್ದಾರೆ.
7:52 AM, 2 Nov
ಉಪ ಚುನಾವಣೆ ಮತ ಎಣಿಕೆ
ದೇಶದ 29 ವಿಧಾನಸಭಾ ಕ್ಷೇತ್ರಗಳು, 3 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಮಂಗಳವಾರ ನಡೆಯುತ್ತಿದೆ.
7:55 AM, 2 Nov
ವಿಧಾನಸಭಾ ಕ್ಷೇತ್ರಗಳು
ಅಸ್ಸಾಂ 5, ಪಶ್ಚಿಮ ಬಂಗಾಳ 4, ಮಧ್ಯ ಪ್ರದೇಶ 3, ಹಿಮಾಚಲ ಪ್ರದೇಶ 3, ಮೇಘಾಲಯ 3, ಕರ್ನಾಟಕ 2, ಬಿಹಾರ 2, ರಾಜಸ್ಥಾನ 2, ತೆಲಂಗಾಣ 1, ಆಂಧ್ರ ಪ್ರದೇಶ 1, ಹರ್ಯಾಣ 1, ಮಹಾರಾಷ್ಟ್ರ 1, ವಿಜೋರಾಂನ 1 ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು
7:57 AM, 2 Nov
ಲೋಕಸಭಾ ಕ್ಷೇತ್ರಗಳು
ದಾದ್ರಾ ಮತ್ತು ನಗರ ಹವೇಲಿ, ಹಿಮಾಚಲ ಪ್ರದೇಶದ ಮಂಡಿ ಮತ್ತು ಮಧ್ಯಪ್ರದೇಶದ ಖಾಂಡ್ವಾ ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆ ಮತ ಎಣಿಕೆ ಸಹ ನಡೆಯುತ್ತಿದೆ.
8:00 AM, 2 Nov
ಚುನಾವಣಾ ಫಲಿತಾಂಶ 2021: ಮೂರು ಲೋಕಸಭೆ ಮತ್ತು 29 ವಿಧಾನಸಭಾ ಕ್ಷೇತ್ರಗಳಲ್ಲಿ ಮತ ಎಣಿಕೆ
ಅಕ್ಟೋಬರ್ 30 ರಂದು ನಡೆದ 13 ರಾಜ್ಯಗಳ 29 ವಿಧಾನಸಭಾ ಮತ್ತು ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ ಸೇರಿದಂತೆ ಮೂರು ಲೋಕಸಭೆ ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ ಮಂಗಳವಾರ (ನ.2) ನಡೆಯಲಿದೆ. ಅಸ್ಸಾಂನಲ್ಲಿ ಐದು, ಪಶ್ಚಿಮ ಬಂಗಾಳದ ನಾಲ್ಕು, ಮಧ್ಯಪ್ರದೇಶ, ಹಿಮಾಚಲ ಪ್ರದೇಶ ಮತ್ತು ಮೇಘಾಲಯದಲ್ಲಿ ತಲಾ ಮೂರು, ಬಿಹಾರ, ಕರ್ನಾಟಕ ಮತ್ತು ರಾಜಸ್ಥಾನದಲ್ಲಿ ತಲಾ ಎರಡು ಮತ್ತು ಹರಿಯಾಣ, ಮಹಾರಾಷ್ಟ್ರ, ಮಿಜೋರಾಂ ಮತ್ತು ತೆಲಂಗಾಣ, ಆಂಧ್ರಪ್ರದೇಶದ ತಲಾ ಒಂದು ಸ್ಥಾನಗಳಲ್ಲಿ ಹೆಚ್ಚಿನ ಮತದಾನದ ಮೂಲಕ ವಿಧಾನಸಭಾ ಉಪಚುನಾವಣೆಗಳು ನಡೆದಿವೆ.
8:01 AM, 2 Nov
ಕರ್ನಾಟಕ
ಸಿಂಧಗಿ
ಹನುಮಾನ್ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಸಿಂಧಗಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು, "25 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇನೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.
8:03 AM, 2 Nov
ಅಂಚೆ ಮತಗಳ ಎಣಿಕೆ
ಸಿಂಧಗಿ ಕ್ಷೇತ್ರದಲ್ಲಿ ಅಂಚೆ ಮತಗಳ ಎಣಿಕೆ ಆರಂಭವಾಗದೆ.
8:06 AM, 2 Nov
ಹಾನಗಲ್
ಹಾನಗಲ್ನಲ್ಲಿ 14 ಸೇವಾ ಮತ, 464 ಅಂಚೆ ಮತಗಳು ಚಲಾವಣೆಗೊಂಡಿವೆ. ಅಂಚೆ ಮತಗಳ ಎಣಿಕೆ ಆರಂಭವಾಗಿದೆ.
8:09 AM, 2 Nov
ಕರ್ನಾಟಕ
ಸಿಂಧಗಿ
ಸಿಂಧಗಿಯಲ್ಲಿ 1,62,852 ಮತಗಳು ಚಲಾವಣೆಗೊಂಡಿವೆ. ಅಂಚೆ ಮತಗಳ ಎಣಿಕೆ ಕಾರ್ಯ ಆರಂಭಗೊಂಡಿದೆ.
8:11 AM, 2 Nov
ಪಶ್ಚಿಮ ಬಂಗಾಳ
ಪಶ್ಚಿಮ ಬಂಗಾಳದಲ್ಲಿ ಮತ ಎಣಿಕೆ ಕಾರ್ಯ ಆರಂಭಗೊಂಡಿದೆ.
West Bengal: Results of four assembly seats -- Dinhata, Khardaha, Gosaba (SC), and Santipur -- that went into bypolls on October 30 will be announced today; visuals from Dinhata College counting centre. pic.twitter.com/5NZgErIotN
ಅಂಚೆ ಮತಗಳ ಎಣಿಕೆಯಲ್ಲಿ ಸಿಂಧಗಿಯಲ್ಲಿ ಬಿಜೆಪಿಯ ರಮೇಶ್ ಭೂಸನೂರ ಮುನ್ನಡೆ ಪಡೆದಿದ್ದಾರೆ.
8:16 AM, 2 Nov
ಕರ್ನಾಟಕ
ಸಿಂದಗಿಯಲ್ಲಿ 1296 ಅಂಚೆ ಮತಗಳು ಚಲಾವಣೆಗೊಂಡಿವೆ. ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಪಡೆದುಕೊಂಡಿದೆ.
8:22 AM, 2 Nov
ಹಾನಗಲ್
ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಮನೆಯಲ್ಲಿಯೇ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಗೆಲುವಿಗಾಗಿ ಪ್ರಾರ್ಥಿಸಿದರು.
8:23 AM, 2 Nov
ಸಿಂದಗಿ
ಜೆಡಿಎಸ್ ಅಭ್ಯರ್ಥಿ ನಾಜಿಯಾ ಶಕೀಲಾ ಅಂಗಡಿ ಮತ ಎಣಿಕೆ ನಡೆಯುತ್ತಿರುವ ಸೈನಿಕ ಶಾಲೆ ಆವರಣಕ್ಕೆ ಆಗಮಿಸಿದರು.
8:26 AM, 2 Nov
ಸಿಂದಗಿ
ಅಂಚೆ ಮತಗಳು, ಮೊದಲ ಸುತ್ತಿನ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ ಪಡೆದುಕೊಂಡಿದ್ದಾರೆ.
8:34 AM, 2 Nov
ಕರ್ನಾಟಕ
ಸಿಂದಗಿ
ಸಿಂದಗಿಯಲ್ಲಿ ಪ್ರತಿ ಕೊಠಡಿಯಲ್ಲಿ 7 ಟೇಬಲ್ನಂತೆ ಒಟ್ಟು 14 ಟೇಬಲ್ಗಳಲ್ಲಿ ಮತ ಎಣಿಕೆ ನಡೆಯುತ್ತಿದೆ. ಒಟ್ಟು 22 ಸುತ್ತುಗಳ ಮತ ಎಣಿಕೆ ನಡೆಯುತ್ತಿದ್ದು, 60 ಸಿಬ್ಬಂದಿಗಳು ಮತ ಎಣಿಕೆಯಲ್ಲಿ ತೊಡಗಿದ್ದಾರೆ.
8:37 AM, 2 Nov
ಕರ್ನಾಟಕ
ಸಿಂದಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಮತ ಎಣಿಕೆ ಕೇಂದ್ರಕ್ಕೆ ಹೊರಟಿದ್ದಾರೆ.
8:40 AM, 2 Nov
ಹಾನಗಲ್
ಹಾನಗಲ್ನಲ್ಲಿ ಅಂಚೆ ಮತಗಳ ಎಣಿಕೆ ವಿಳಂಬವಾಗಿದೆ. ಆದ್ದರಿಂದ ಇವಿಎಂ ಮತಗಳ ಎಣಿಕೆ ಪ್ರಕ್ರಿಯೆ ಆರಂಭಿಸಲಾಗಿದೆ.
8:47 AM, 2 Nov
ಕರ್ನಾಟಕ
ಹಾನಗಲ್
ಹಾನಗಲ್ನಲ್ಲಿ ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ ಮುನ್ನಡೆ ಪಡೆದುಕೊಂಡಿದ್ದಾರೆ.
8:50 AM, 2 Nov
ಕರ್ನಾಟಕ
ಹಾನಗಲ್
ಹಾನಗಲ್ನಲ್ಲಿ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. ಬಿಜೆಪಿ 4296, ಕಾಂಗ್ರೆಸ್ 4478, ಜೆಡಿಎಸ್ 25 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಮುನ್ನಡೆ ಪಡೆದುಕೊಂಡಿದ್ದಾರೆ.
8:54 AM, 2 Nov
ಹಾನಗಲ್
2ನೇ ಸುತ್ತಿನ ಮತ ಎಣಿಕೆಯಲ್ಲೂ ಕಾಂಗ್ರೆಸ್ನ ಶ್ರೀನಿವಾಸ ಮಾನೆ ಮುನ್ನಡೆ ಕಾಯ್ದುಕೊಂಡಿದ್ದಾರೆ.
8:57 AM, 2 Nov
ಕರ್ನಾಟಕ
ಸಿಂದಗಿ
ಸಿಂದಗಿ ಕ್ಷೇತ್ರದಲ್ಲಿ ಕಾಂಗ್ರೆಸ್ 2054, ಬಿಜೆಪಿ 5255, ಜೆಡಿಎಸ್ 73 ಮತಗಳು. ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಮುನ್ನಡೆ ಕಾಯ್ದುಕೊಂಡಿದ್ದಾರೆ.
9:01 AM, 2 Nov
ಕರ್ನಾಟಕ
ಸಿಂದಗಿಯಲ್ಲಿ 2ನೇ ಸುತ್ತಿನಲ್ಲಿಯೂ ಬಿಜೆಪಿಯ ರಮೇಶ್ ಭೂಸನೂರ ಮುನ್ನಡೆಯನ್ನು ಪಡೆದಿದ್ದಾರೆ. ಹಾನಗಲ್ನಲ್ಲಿ 2ನೇ ಸುತ್ತಿನಲ್ಲಿ ಕಾಂಗ್ರೆಸ್ ಮುನ್ನಡೆ ಪಡೆದಿದೆ.