HD Revanna: ನನ್ನ ಮಗ ತಪ್ಪು ಮಾಡಿದ್ದರೆ ಗಲ್ಲಿಗೇರಿಸಿ ಎಂದ ಶಾಸಕ ಎಚ್.ಡಿ.ರೇವಣ್ಣ
ಬೆಂಗಳೂರು, ಜುಲೈ. 16: ಮುಂಗಾರು ಅಧಿವೇಶನದ ಎರಡನೇ ದಿನ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಸದ್ದು ಮಾಡಿದೆ. ಸದನದಲ್ಲಿ ಈ ಬಗ್ಗೆ ಮಾತನಾಡಿರುವ ಹೊಳೆನರಸೀಪುರ ಶಾಸಕ ಎಚ್.ಡಿ. ರೇವಣ್ಣ, ತಮ್ಮ ಮಗ, ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೆ ಅವರನ್ನು ಗಲ್ಲಿಗೇರಿಸಿ ಎಂದಿದ್ದಾರೆ.
ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಜೈಲು ಸೇರಿರುವ ಎಚ್.ಡಿ. ರೇವಣ್ಣ ಅವರ ಪುತ್ರ, ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಬಗ್ಗೆ ಮಾತನಾಡಿದ್ದಾರೆ. "ನನ್ನ ಮಗ ತಪ್ಪು ಮಾಡಿದ್ದರೆ ಅವನನ್ನು ಗಲ್ಲಿಗೇರಿಸಲಿ. ನಾನು ಇಲ್ಲ ಎಂದು ಹೇಳುವುದಿಲ್ಲ. ನಾನು ವಿಷಯಗಳನ್ನು ಸಮರ್ಥಿಸಲು ಅಥವಾ ಚರ್ಚೆ ನಡೆಸಲು ಇಲ್ಲಿಗೆ ಬಂದಿಲ್ಲ" ಎಂದು ಹೇಳಿದ್ದಾರೆ.

"ನಾನು 25 ವರ್ಷಗಳಿಂದ ಶಾಸಕನಾಗಿದ್ದೇನೆ. ನಾನು ರಾಜಕೀಯ ಜೀವನದಲ್ಲಿ 40 ವರ್ಷಗಳನ್ನು ಕಳೆದಿದ್ದೇನೆ" ಎಂದು ಜೆಡಿಎಸ್ ವರಿಷ್ಠ ಮತ್ತು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರ ಪುತ್ರ ರೇವಣ್ಣ ವಿಧಾನಸಭೆಯಲ್ಲಿ ಭಾವುಕರಾಗಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದ ಅಪಹರಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಇರುವ ಎಚ್ ಡಿ ರೇವಣ್ಣ, 66, ಪೊಲೀಸ್ ಮುಖ್ಯಸ್ಥ ಅಲೋಕ್ ಮೋಹನ್ ಅವರನ್ನು ಗುರಿಯಾಗಿಸಿ, ಅಧಿಕಾರಿಯು ಅಂತಹ ಹಿರಿಯ ಹುದ್ದೆಯನ್ನು ಅಲಂಕರಿಸಲು 'ಅನರ್ಹ' ಎಂದು ಹೇಳಿದ್ದಾರೆ.

"ನನ್ನ ವಿರುದ್ಧ, ಒಬ್ಬ ಮಹಿಳೆಯನ್ನು ಡೈರೆಕ್ಟರ್ ಜನರಲ್ (ಪೊಲೀಸ್) ಕಚೇರಿಗೆ ಕರೆತಂದು ಅವರು ದೂರು ದಾಖಲಿಸಿದ್ದಾರೆ. ಅವರು 'ನಾಲಾಯಕ್' ಮತ್ತು ಡಿಜಿಪಿಯಾಗಲು ಅನರ್ಹರು. ಇದು ನಾಚಿಕೆಗೇಡಿನ ಸರ್ಕಾರ' ಎಂದು ಹೊಳೆನರಸೀಪುರ ವಿಧಾನಸಭಾ ಶಾಸಕ ರೇವಣ್ಣ ಆಕ್ರೋಶ ಹೊರಹಾಕಿದ್ದಾರೆ.
ಪ್ರತಿಪಕ್ಷದ ನಾಯಕ, ಬಿಜೆಪಿಯ ಆರ್ ಅಶೋಕ ಅವರು ಪ್ರಜ್ವಲ್ ವಿರುದ್ಧದ ಪ್ರಕರಣವನ್ನು ವಿಶೇಷ ತನಿಖಾ ತಂಡಗಳು (ಎಸ್ಐಟಿ) ತನಿಖೆ ನಡೆಸುತ್ತಿರುವ ರೀತಿ ಮತ್ತು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣ, ರಾಜ್ಯದಲ್ಲಿ ನಡೆದ ಆರ್ಥಿಕ ಅಕ್ರಮಗಳ ನಡುವೆ ಹೋಲಿಕೆ ಮಾಡಿದ ನಂತರ ಎಚ್ ಡಿ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications