Ugadi 2025 Prediction: ಇದೇ ವರ್ಷ ಸಿಎಂ ಬದಲಾಗ್ತಾರಾ? ಯುಗಾದಿ ದಿನವೇ ಬೊಂಬೆಗಳಿಂದ ಅಚ್ಚರಿ ಭವಿಷ್ಯ
ಐತಿಹಾಸಿಕ ಹಿನ್ನೆಲೆಯುಳ್ಳ ಧಾರವಾಡ ತಾಲ್ಲೂಕಿನ ಹನುಮನಕೊಪ್ಪದ ಯುಗಾದಿ ಬೊಂಬೆ ಭವಿಷ್ಯ ಇಂದು ಹೊರಬಿದ್ದಿದೆ. ಈ ಬೊಂಬೆಗಳು ಪ್ರತಿ ಯುಗಾದಿ ಹಬ್ಬದಂದು ಅಚ್ಚರಿ ಭವಿಷ್ಯ ನುಡಿಯುತ್ತವೆ. ಈ ಪೈಕಿ ಬಹುತೇಕ ಭವಿಷ್ಯವಾಣಿಗಳು ನಿಜವಾಗಿರುವ ನಿದರ್ಶನವೂ ಇದೆ. ಇಂದು ನುಡಿದಿರುವ ಭವಿಷ್ಯವು ಅಚ್ಚರಿ ಮೂಡಿಸುತ್ತಿದ್ದು, ರಾಜ್ಯ ರಾಜಕಾರಣ ಹಾಗೂ ಸಿಎಂ ಸ್ಥಾನದ ಬಗ್ಗೆಯೂ ಕುತೂಹಲಕಾರಿ ಭವಿಷ್ಯ ನುಡಿದಿವೆ.
ಹನುಮನಕೊಪ್ಪ ಗ್ರಾಮದಲ್ಲಿ ಸುಮಾರು 1936ರಿಂದಲೂ ಈ ಭವಿಷ್ಯವಾಣಿ ಪ್ರಸಿದ್ಧಿ ಪಡೆದಿದೆ. ಪ್ರತಿ ವರ್ಷದ ಯುಗಾದಿಯಂದು ನುಡಿಯುವ ಭವಿಷ್ಯವು ನಿಜವಾಗುತ್ತೆ ಎಂದೇ ನಂಬಲಾಗಿದೆ. ರಾಜ್ಯರಾಜಕಾರಣ, ಪ್ರಾಕೃತಿಕ ವಿಕೋಪಗಳು ಸೇರಿದಂತೆ ಒಂದು ವರ್ಷದಲ್ಲಿ ನಡೆಯಲಿರುವ ಮಹತ್ವದ ಘಟನೆಗಳ ಬಗ್ಗೆ ಇಲ್ಲಿ ಭವಿಷ್ಯ ನುಡಿಯಲಾಗುತ್ತದೆ. ಅದರಂತೆ ಈ ಬಾರಿಯೂ ರಾಜ್ಯ ರಾಜಕಾರಣ ಹಾಗೂ ಮುಖ್ಯವಾಗಿ ಸಿಎಂ ಕುರ್ಚಿ ಬದಲಾವಣೆ ಬಗ್ಗೆಯೂ ಭವಿಷ್ಯ ಹೊರಬಿದ್ದಿದೆ.

ಈ ಸಲ ಮುಂಗಾರು ಮಳೆ ಕಡಿಮೆ ಆಗಲಿದೆ. ಆದರೆ ಹಿಂಗಾರು ಮಳೆಯೂ ರೈತರಿಗೆ ವರದಾನವಾಗಲಿದೆ. ಉಳಿದಂತೆ ಕೊಬ್ಬರಿ, ಶೇಂಗಾ, ಬೆಲ್ಲ, ಜೋಳ ಸೇರಿದಂತೆ ವಿವಿಧ ಧಾನ್ಯಗಳಿಗೆ ಒಳ್ಳೆಯ ಬೆಲೆ ಸಿಗಲಿದೆಯಂತೆ. ಇನ್ನು ಕಳೆದ ವರ್ಷವೂ ಕೇಂದ್ರ ಹಾಗೂ ರಾಜ್ಯ ರಾಜಕಾರಣದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬೊಂಬೆಗಳು ಭವಿಷ್ಯ ನುಡಿದಿದ್ದವು. ಅದು ಕೂಡ ನಿಜವಾಗಿದೆ. ಇನ್ನು ಈ ಬಾರಿಯೂ ಕೇಂದ್ರ-ರಾಜ್ಯ ರಾಜಕಾರಣವು ಯಥಾಸ್ಥಿತಿಯಲ್ಲೇ ಇರಲಿದೆ ಎಂದು ಭವಿಷ್ಯ ನುಡಿದಿದೆ.
ರಾಜ್ಯದಲ್ಲಿ ಸಿಎಂ ಬದಲಾಗುತ್ತಾರೆ ಎಂಬ ವಿಚಾರವಾಗಿಯೂ ಭವಿಷ್ಯ ಹೊರಬಿದ್ದಿದ್ದು, ಈ ವರ್ಷವೂ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಕುರ್ಚಿಯಲ್ಲಿ ಇರುತ್ತಾರೆ ಎಂದು ಗೊಂಬೆಗಳು ಭವಿಷ್ಯ ನುಡಿದಿವೆ. ಕಳೆದ ಯುಗಾದಿ ಭವಿಷ್ಯದಲ್ಲೂ ಈ ಗೊಂಬೆಗಳು ಸಿಎಂ ಬದಲಾವಣೆ ಬಗ್ಗೆ ಇದೇ ಭವಿಷ್ಯ ಹೇಳಿದ್ದವು. ಹಾಗಾಗಿ ಈ ವರ್ಷ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ ಎಂದು ಗೊಂಬೆಗಳು ಹೇಳಿವೆ. ಇನ್ನು ಗೋವಾ ದಿಕ್ಕಿನ ಕಡೆಗೆ ಇದ್ದ ಗೊಂಬೆಗೆ ಧಕ್ಕೆಯಾಗಿದ್ದು, ಈ ಹಿನ್ನೆಲೆ ಗೋವಾ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಆಗಲಿದೆಯಂತೆ.
ಯುಗಾದಿ ಹಬ್ಬದ ವೇಳೆ ಅಮವಾಸ್ಯೆ ದಿನ ಇಲ್ಲಿನ ಹಳ್ಳದಲ್ಲಿ ಒಂದು ಆಕೃತಿ ಮಾಡಿ ಅದರ ನಾಲ್ಕೂ ದಿಕ್ಕಿಗೆ ರಾಜಕೀಯದ ಭವಿಷ್ಯ ನುಡಿಯುವ ಗೊಂಬೆಗಳನ್ನ ಇಡಲಾಗುತ್ತೆ. ಮರುದಿನ ಬೆಳಿಗ್ಗೆ ಎಲ್ಲ ಗೊಂಬೆಗಳನ್ನು ಪರಿಶೀಲಿಸಲಾಗುವುದು. ಆಗ ಯಾವುದಾದ್ರೂ ಗೊಂಬೆಗೆ ಹಾನಿಯಾಗಿದ್ದರೆ ಅದರ ಮೇಲೆ ಈ ಭವಿಷ್ಯ ಹೇಳಲಾಗುತ್ತೆ.
ಈ ಹಿಂದೆ ಕಾಂಗ್ರೆಸ್ನ ಪಕ್ಷದ ನಾಯಕಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಸಮಯದಲ್ಲೂ ಇಲ್ಲಿದ್ದ ಗೊಂಬೆಗೆ ಹಾನಿಯಾಗಿತ್ತು. ಆಗ ದೊಡ್ಡ ರಾಜಕಾರಣಿಯೊಬ್ಬರು ಸಾಯುತ್ತಾರೆ ಎಂದು ಗೊಂಬೆಗಳು ಭವಿಷ್ಯ ನುಡಿದಿದ್ದವು. ಅದರಂತೆ ಅದೇ ವರ್ಷ ಇಂದಿರಾ ಗಾಂಧಿ ಅವರು ಹಸುನೀಗಿದ್ದರು. ಇನ್ನು ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ಅವರು ಸಿಎಂ ಸ್ಥಾನದಿಂದ ಕೆಳಗಿಳಿಯುವ ಬಗ್ಗೆಯೂ ಗೊಂಬೆಗಳು ತಲೆಕೆಳಗಾಗಿದ್ದವು. ಅದರಂತೆ ಯಡಿಯೂರಪ್ಪ ಅವರು ಅಧಿಕಾರದಿಂದ ಕೆಳಗಿಳಿದಿದ್ದರು. ಈಗ ರಾಜ್ಯ ರಾಜಕಾರಣ ಯತಾಸ್ಥಿತಿಯಲ್ಲಿರುತ್ತೆ ಎಂದು ಭವಿಷ್ಯ ನುಡಿದಿದ್ದು, ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಸೇಫ್ ಎನ್ನಲಾಗಿದೆ.
-
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications