Harangi Dam: ಇಂದು ಭಾರೀ ಪ್ರಮಾಣದ ನೀರು ಬಿಡುಗಡೆ, ಜಲಾನಯನ ಪ್ರದೇಶಗಳಲ್ಲಿ ಪ್ರವಾಹ ಆತಂಕ, ಎಚ್ಚರಿಕೆ
ಬೆಂಗಳೂರು, ಜುಲೈ 14: ಕರ್ನಾಟಕದ ಪಶ್ಚಿಮ ಘಟ್ಟಗಳಲ್ಲಿ ಮಹಾಮಳೆ ಮುಂದುವರಿದೆ. ಹೀಗಾಗಿ ವಿವಿಧ ಜಲಾಶಯಗಳಲ್ಲಿನ ನೀರು ಒಳಹರಿವು ಹೆಚ್ಚಳ, ನೀರು ಹೊರ ಬಿಡುಗಡೆ ಚಟುವಟಿಕೆಗಳು ನಡೆಯುತ್ತಿವೆ. ಇದೀಗ ಜುಲೈ 14ರಂದು ಹಾರಂಗಿ ಜಲಾಶಯದಿಂದ ವ್ಯಾಪಕವಾಗಿ ನೀರನ್ನಿ ಬಿಡುಗಡೆ ಮಾಡಲಾಗಿದೆ. ಹೀಗಾಗಿ ಜಲಾನಯನ ಪ್ರದೇಶಗಳಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ.
ಕೊಡಗು ಜಿಲ್ಲೆ ಸೇರಿದಂತೆ ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆ ಮುಂದುವರಿದ ಪರಿಣಾಮ ವಿವಿಧ ನದಿಗಳ ನೀರು ಸಂಗ್ರಹದಲ್ಲಿ ಏರಿಕೆ ಆಗುತ್ತಿದೆ. ಇದರಿಂದಾಗಿ ಜಲಾಶಯಗಳು ಭರ್ತಿ ಆಗುತ್ತಿವೆ. ಕಾವೇರಿ ಉಪನದಿಯಾಗಿರುವ ಹಾರಂಗಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಆಣೆಕಟ್ಟಿನ ಒಳಹರಿವು ನೀರು ಹೆಚ್ಚಾಗುತ್ತಿದೆ.

ಹೀಗಾಗಿ ಭಾನುವಾರದಂದು ಬೆಳಗ್ಗೆ 8 ಗಂಟೆಗೆ 4,691 ಕ್ಯೂಸೆಕ್ಸ್ ನೀರು ಬಿಡಲಾಯಿತು. ಇದಾಗಿ ಕೆಲವೇ ಗಂಟೆಗಳಲ್ಲಿ ಮತ್ತೆ ಅಂದರೆ 11ಗಂಟೆಗೆ ಹೊತ್ತಿಗೆ 9600 ಕ್ಯೂಸೆಕ್ ನೀರನ್ನು ಹಾರಂಗಿ ನದಿಗೆ ಬಿಡಲಾಯಿತು. ಹಾರಂಗಿ ನದಿ ಮತ್ತು ಜಲಾಶಯದ ಜಲಾನಯನ ಪ್ರದೇಶಗಳಲ್ಲಿ ಪ್ರವಾಹದ ಸ್ಥಿತಿಯ ಆತಂಕ ಆ ಭಾಗದ ನಿವಾಸಿಗಳಲ್ಲಿ ಮನೆ ಮಾಡಿದೆ.
ಒಂದು ಕಡೆ ಮಳೆ ಸುರಿಯುವಿಕೆ ಮುಂದುವರಿದರೆ, ಮತ್ತೊಂದೆಡೆ ಜಲಾಶಯಗಳಿಂದ ನೀರು ಹೊರ ಹರಿವು ಏರಿಕೆ ಆಗುತ್ತಿದೆ. ಮೊನ್ನೆಯಷ್ಟೇ ಕೆಆರ್ಎಸ್ನಿಂದ ನೀರು ಬಿಡಲು ಆರಂಭಿಸಿದ್ದರು. ಇದೀಗ ಹಾರಂಗಿ ಜಲಾಶಯದಿಂದ ನೀರು ಬಿಡಲಾಗುತ್ತಿದೆ.
ಕ್ರಮೇಣ ಆಣೆಕಟ್ಟಿನ ಒಳಹರಿವು ಏರಿಕೆ
ಸರ್ಕಾರ ನೀರು ಬಿಡುಗಡೆ ಮಾಡುವ ಮೊಲದೇ ಹಾರಂಗಿ ಅಣೆಕಟ್ಟಿನ ಒಳಹರಿವು ಏರಿಕೆ ಆಗಿದ್ದು, ಯಾವ ಸಮಯದಲ್ಲಾದರೂ ನೀರನ್ನು ನದಿಗೆ ಬಿಡುಗಡೆ ಮಾಡಬಹುದು. ಗೇಟ್ ತೆರೆಯುವ ಮೊದಲೇ ಜಲಾನಯನ ಪ್ರದೇಶ ವ್ಯಾಪ್ತಿಯ ನಿವಾಸಿಗಳು ಎಚ್ಚರಿಕೆ ವಹಿಸಬೇಕು. ಸುರಕ್ಷಿತ ಸ್ಥಳಕ್ಕೆ ತೆರಯಬೇಕು ಎಂದು ಎಚ್ಚರಿಕೆ ನೀಡಿತ್ತು.

ಸದ್ಯ ಹಾರಂಗಿ ಜಲಾಶಯದ ಕ್ರೆಸ್ತ್ ಗೇಟ್ ತೆರೆದು ಹಾರಂಗಿ ನದಿಗೆ ನೀರು ಬಿಡಲಾಗಿದೆ. ಇದು ಕುಡಗೈನಲ್ಲಿ ಕಾವೇರಿ ನದಿ ಸೇರುತ್ತದೆ. ಹೀಗಾಗಿ ಈ ನದಿ ಕಾವೇರಿ ಉಪನದಿಗಳಲ್ಲಿ ಒಂದಾಗಿದೆ.
ಹಾರಂಗಿ ಇಂದಿನ ಮಟ್ಟ ಎಷ್ಟಿದೆ?
ಇಂದು ಭಾನುವಾರ ಜುಲೈ 14ರ ಹಾರಂಗಿ ಆಣೆಕಟ್ಟಿನ ನೀರಿನ ಮಟ್ಟ ನೋಡುವುದಾದರೆ, ಹಾರಂಗಿ ಒಟ್ಟು ಸಾಮರ್ಥ್ಯ 871 ಟಿಎಂಸಿ ಇದ್ದು, ಈಗಾಗಲೇ ನಿರಂತರ ಮಳೆಯಿಂದಾಗಿ 869 ಟಿಎಂಸಿ ಯಷ್ಟು ನೀರು ತುಂಬಿದಿದೆ. ಒಳಹರಿವು ನಿರಂತರವಾಗಿ ಹೆಚ್ಚಾಗಿದ್ದು ನೀರು ಹೊರ ಬಿಡಲಾಗುತ್ತಿದೆ.
ಹಾರಂಗಿ ಒಳಹರಿವು 2854 ಕ್ಯೂಸೆಕ್ ಇತ್ತು, ನೀರಿನ ಹೊರ ಹರಿವು ಮೊದಲು 2851 ಕ್ಯೂಸೆಕ್ ಇತ್ತು. ನಂತರ ಹೊರ ಹರಿವಿನ ಪ್ರಮಾಣ ಹೆಚ್ಚಿಸಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ವರದಿ ಮಾಹಿತಿ ನೀಡಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications