ಹಿಂಸೆ, ದೌರ್ಜನ್ಯದ ಗೂಡಾದ ವಿಜಯಪುರ ಅಂಧ ವಸತಿ ಶಾಲೆ
ವಿಜಯಪುರ,ಮಾರ್ಚ್,03 'ನಾವು ಎಲ್ಲರಿಗೂ ಭಾರವಾಗಿದ್ದೇವೆ, ಯಾರಿಗೂ ಬೇಡವಾಗಿದ್ದೇವೆ, ನಾವು ಬಾವಿಗೆ ಬಿದ್ದು ಸತ್ತು ಹೋಗುತ್ತೇವೆ, ನಮ್ಮನ್ನು ಸಾಯಲು ಬಿಡಿ' ಇದು ವಿಜಯಪುರದ ಮಲ್ಲಿಕಾರ್ಜುನ ನಗರದಲ್ಲಿರುವ ಸರ್ಕಾರಿ ಅನುದಾನಿತ ಶಿವಶರಣ ಹರಳಯ್ಯ ಅಂಧ ಮಕ್ಕಳ ಶಾಲೆಯ ಮಕ್ಕಳ ನೊಂದ ಮಾತುಗಳಿವು.
ಶಿವಶರಣ ಹರಳಯ್ಯ ಅಂಧ ಮಕ್ಕಳ ಶಾಲೆಯ ಅಧ್ಯಕ್ಷ ಎ.ಎಂ ದೊಡ್ಡಮನಿ ಹಾಗೂ ಈತನ ಪತ್ನಿಯ ಕಿರುಕುಳ, ತೀವ್ರ ಹಿಂಸೆಯಿಂದ ಜರ್ಜರಿತರಾದ ಮಕ್ಕಳು ಬುಧವಾರ ವಸತಿ ಶಾಲೆ ಬಿಟ್ಟು ಬಂದು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿ ಕಣ್ಣೀರಿಡುತ್ತಿದ್ದಾಗ ಈ ವಸತಿ ಶಾಲೆಯ ಹಿಂಸೆಯ ಮುಖ ಬಯಲಾಗಿದೆ.[ಮಂಡ್ಯ ಕಾಲೇಜು ವಿದ್ಯಾರ್ಥಿನಿಯ ಪ್ರಾಣಕ್ಕೆ ಕುತ್ತು ತಂದ ಹೊಟ್ಟೆನೋವು]

ಘಟನೆಯ ವಿವರ:
ವಿಜಯಪುರದ ಮಲ್ಲಿಕಾರ್ಜುನ ನಗರದಲ್ಲಿರುವ ಸರ್ಕಾರಿ ಅನುದಾನಿತ ಶಿವಶರಣ ಹರಳಯ್ಯ ಅಂಧ ಮಕ್ಕಳ ಶಾಲೆಯ ಅಧ್ಯಕ್ಷ ಎ.ಎಂ ದೊಡ್ಡಮನಿ. ಈತ ಮತ್ತು ಆತನ ಸಂಬಂಧಿಕರಿಗೆ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದರು. ಸುಮಾರು ದಿನಗಳಿಂದ ಇವರ ದೌರ್ಜನ್ಯವನ್ನು ಸಹಿಸಿಕೊಂಡ ಮಕ್ಕಳು ವಸತಿ ಶಾಲೆಯಲ್ಲೇ ಉಳಿದುಕೊಂಡಿದ್ದರು.[ಕಿರುಕುಳಕ್ಕೆ ಬೇಸತ್ತ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರು ಆತ್ಮಹತ್ಯೆ]
ದೊಡ್ಡಮನಿ ಅವರ ಹಿಂಸೆ ತಾರಕ್ಕಕ್ಕೇರಿದಾಗ ಇದರಿಂದ ಬೇಸತ್ತ ಸುಮಾರು 12ಕ್ಕೂ ಹೆಚ್ಚು ಮಕ್ಕಳು ಬುಧವಾರ ವಸತಿ ಶಾಲೆಯಿಂದ ಹೊರಗೆ ಬಂದಿದ್ದಾರೆ. ಇವರಲ್ಲಿ ಕೆಲವರು ಅವರವರ ಊರು ತಲುಪಿದರೆ, ಇನ್ನು ಕೆಲವು ಮಕ್ಕಳು ಸಾರ್ವಜನಿಕರ ಬಳಿ ಬಾವಿ ಎಲ್ಲಿ ಎಂದು ಕೇಳಿದ್ದಾರೆ. ಅನುಮಾನಗೊಂಡ ಜನರು ಈ ಬಗ್ಗೆ ವಿಚಾರಿಸಿದಾಗ ವಸತಿ ಶಾಲೆಯ ಹಿಂಸೆ ವೃತ್ತಾಂತವನ್ನು ಬಿಚ್ಚಿಟ್ಟಿದ್ದಾರೆ.[ನಾಳೆಯನ್ನು ಇಂದೇ ನೋಡಬಲ್ಲ ಕನ್ನಡತಿ ಅಶ್ವಿನಿ]
ಹಿಂಸೆ ಕುರಿತು ಹಲವಾರು ಬಾರಿ ಅಧಿಕಾರಿಗಳಿಗೆ ದೂರು ನೀಡಿದ್ದೇವೆ. ಆದರೆ ಇವರಿಂದ ನಮಗೆ ಯಾವುದೇ ಸ್ಪಂದನೆ ದೊರೆತಿಲ್ಲ. ನಾವು ಈ ವಸತಿ ಶಾಲೆಯಲ್ಲಿ ಮಾತ್ರ ಉಳಿದುಕೊಳ್ಳುವುದಿಲ್ಲ. ಅಧ್ಯಕ್ಷ ದೊಡ್ಡಮನಿ ಅವರು ವಸತಿ ಶಾಲೆ ಬಿಟ್ಟರೆ ಮಾತ್ರ ನಾವು ವಸತಿ ಶಾಲೆಗೆ ಹೋಗುತ್ತೇವೆ. ಇಲ್ಲವಾದರೆ ನಮ್ಮನ್ನು ನಮ್ಮ ಮನೆಗೆ ಕಳುಹಿಸಿಕೊಡಿ ಎಂದು ಕಣ್ಣಿರಿಡುತ್ತಾ ಜನರ ಬಳಿ ಬೇಡಿಕೊಂಡರು.
ಈ ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅಂಗವಿಕಲ ಮತ್ತು ಹಿರಿಯ ನಾಗರಿಕ ಕಲ್ಯಾಣ ಇಲಾಖೆಯ ಪ್ರಥಮ ದರ್ಜೆ ಸಹಾಯಕ ವಿ.ಎಂ ಗುಲಗಂಜಿ ವಸತಿ ಶಾಲೆ ಬಂದ್ ಮಾಡಲು ನಿರ್ಧರಿಸಿದ್ದಾರೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications