ರಾಜ್ಯ ಸರ್ಕಾರದಿಂದ ಗುತ್ತಿಗೆದಾರರಿಗೆ ಕಿರುಕುಳ: ಬಸವರಾಜ ಬೊಮ್ಮಾಯಿ ಆರೋಪ
ಬೆಂಗಳೂರು, ಏಪ್ರಿಲ್ 22: ರಾಜ್ಯದಲ್ಲಿ ಅನುತ್ಪಾದಕ ವೆಚ್ಚ ಹೆಚ್ಚಾಗಿದ್ದು, ಅಭಿವೃದ್ಧಿ ಕುಂಠಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಇಂದು ಹಾವೇರಿ ಜಿಲ್ಲಾ ಗುತ್ತಿಗೆದಾರರ ಸಂಘದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸ ಯಾವ ರೀತಿ ಮಾಡುತ್ತಿದೆ ಎಂದು ಗೊತ್ತಾಗುವುದೇ ಗುತ್ತಿಗೆದಾರರಿಗೆ. ಗುತ್ತಿಗೆದಾರರಿಗೆ ಎಷ್ಟು ಕೆಲಸ ಸಿಗುತ್ತಿದೆ. ಎಷ್ಟು ತೊಂದರೆ ಕೊಡುತ್ತಾರೆ. ಹಣ ಬಿಡುಗಡೆಗೆ ಎಷ್ಟು ಸಮಸ್ಯೆ ಆಗುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದರು.

ಅಭಿವೃದ್ಧಿ ಅನ್ನುವುದು ನಿರಂತರ ಪ್ರಕ್ರಿಯೆಯಾಗಿದೆ. ಒಂದು ಆರ್ಥಿಕ ಅಭಿವೃದ್ಧಿ, ಮತ್ತೊಂದು ಸಾಮಾಜಿಕ ಅಭಿವೃದ್ಧಿ, ಬಂಡವಾಳ ವೆಚ್ಚ ಈ ಬಜೆಟ್ ನಲ್ಲಿ ಬಹಳ ಕಡಿಮೆಯಾಗಿದೆ. ಅನುತ್ಪಾದಕ ವೆಚ್ಚ ಹೆಚ್ಚಾಗಿದೆ. ಅಭಿವೃದ್ಧಿ ವೇಗ ಹೆಚ್ಚಾಗಬೇಕಿದೆ. ಕಳೆದ ವರ್ಷದ ಕೆಲಸ ಈ ವರ್ಷ ಇಲ್ಲ. ಗುತ್ತಿಗೆದಾರರಿಗೆ ಬಿಲ್ ವಿಳಂಬವಾದರೆ ಸಮಸ್ಯೆಯಾಗುತ್ತದೆ. ಸರ್ಕಾರದ ಕೆಲಸ ನಿರಂತರ ಚಲನೆಯಲ್ಲಿ ಇರಬೇಕು. ಜನರ ಸುತ್ತ ಅಭಿವೃದ್ಧಿ ಆಗಬೇಕು. ಈ ಸರ್ಕಾರದಲ್ಲಿ ಗುತ್ತಿಗೆದಾರರಿಗೆ ಎಷ್ಟು ಸಮಸ್ಯೆಯಾಗುತ್ತಿದೆ ಎನ್ನುವುದು ಗೊತ್ತಿದೆ ಎಂದು ಹೇಳಿದರು.
ನಾವು ಇದ್ದಾಗ ಸಣ್ಣ ಗುತ್ತಿಗೆದಾರರು, ಮಧ್ಯಮ ಗುತ್ತಿಗೆದಾರರು, ದೊಡ್ಡ ಗುತ್ತಿಗೆದಾರರಿಗೆ ಎಲ್ಲರನ್ನೂ ತೊಂದರೆಯಾಗದಂತೆ ಸಮಾನವಾಗಿ ನೋಡಿಕೊಂಡಿದ್ದೇವು. ನಮ್ಮ ಅವಧಿಯಲ್ಲಿ ಬಿಬಿಎಂಪಿ ಗುತ್ತಿಗೆದಾರರು ಅನಗತ್ಯವಾಗಿ 40% ಕಮಿಷನ್ ಆರೋಪ ಮಾಡಿದರು ನಾನು ಅದನ್ನು ಸವಾಲಾಗಿ ತೆಗೆದುಕೊಂಡು ಒಂದಾದರೂ ದಾಖಲೆ ಕೊಡಿ ಎಂದು ಕೇಳಿದೆ. ಆದರೆ, ಅವರ ಬಳಿ ಒಂದೂ ದಾಖಲೆ ಇರಲಿಲ್ಲ.
ಈಗ ಸರ್ಕಾರ ತನಿಖೆಗೆ ಆಯೋಗ ಮಾಡಿದ್ದಾರೆ. ಆದರೆ, ಆರು ತಿಂಗಳಾದರೂ ಇದುವರೆಗೂ ಯಾವುದೇ ತನಿಖೆಯ ಪ್ರಗತಿ ಯಾಗಿಲ್ಲ. ನಾನು ಹಾವೇರಿ ಜಿಲ್ಲೆಯಲ್ಲಿ ಯಾವುದೇ ಗುತ್ತಿಗೆದಾರರ ಕಾರ್ಯಗಳಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಹೇಳಿದರು. ಸಭೆಯಲ್ಲಿ ಗುತ್ತಿಗೆದಾರರಾದ ಮಹೇಶ ಹಾವೇರಿ, ಕುಮಾರ ಹತ್ತಿಕಾಳ, ಶ್ರೀಕಾಂತ ದುಂಡೀಗೌಡ್ರ, ಅರ್ಜುನ ಹಂಚಿನಮನಿ ಹಾಗೂ ಮತ್ತಿತರು ಹಾಜರಿದ್ದರು.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications