ರಾಜ್ಯ ಸರ್ಕಾರದಿಂದ ಗುತ್ತಿಗೆದಾರರಿಗೆ ಕಿರುಕುಳ: ಬಸವರಾಜ ಬೊಮ್ಮಾಯಿ ಆರೋಪ
ಬೆಂಗಳೂರು, ಏಪ್ರಿಲ್ 22: ರಾಜ್ಯದಲ್ಲಿ ಅನುತ್ಪಾದಕ ವೆಚ್ಚ ಹೆಚ್ಚಾಗಿದ್ದು, ಅಭಿವೃದ್ಧಿ ಕುಂಠಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಇಂದು ಹಾವೇರಿ ಜಿಲ್ಲಾ ಗುತ್ತಿಗೆದಾರರ ಸಂಘದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸ ಯಾವ ರೀತಿ ಮಾಡುತ್ತಿದೆ ಎಂದು ಗೊತ್ತಾಗುವುದೇ ಗುತ್ತಿಗೆದಾರರಿಗೆ. ಗುತ್ತಿಗೆದಾರರಿಗೆ ಎಷ್ಟು ಕೆಲಸ ಸಿಗುತ್ತಿದೆ. ಎಷ್ಟು ತೊಂದರೆ ಕೊಡುತ್ತಾರೆ. ಹಣ ಬಿಡುಗಡೆಗೆ ಎಷ್ಟು ಸಮಸ್ಯೆ ಆಗುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದರು.

ಅಭಿವೃದ್ಧಿ ಅನ್ನುವುದು ನಿರಂತರ ಪ್ರಕ್ರಿಯೆಯಾಗಿದೆ. ಒಂದು ಆರ್ಥಿಕ ಅಭಿವೃದ್ಧಿ, ಮತ್ತೊಂದು ಸಾಮಾಜಿಕ ಅಭಿವೃದ್ಧಿ, ಬಂಡವಾಳ ವೆಚ್ಚ ಈ ಬಜೆಟ್ ನಲ್ಲಿ ಬಹಳ ಕಡಿಮೆಯಾಗಿದೆ. ಅನುತ್ಪಾದಕ ವೆಚ್ಚ ಹೆಚ್ಚಾಗಿದೆ. ಅಭಿವೃದ್ಧಿ ವೇಗ ಹೆಚ್ಚಾಗಬೇಕಿದೆ. ಕಳೆದ ವರ್ಷದ ಕೆಲಸ ಈ ವರ್ಷ ಇಲ್ಲ. ಗುತ್ತಿಗೆದಾರರಿಗೆ ಬಿಲ್ ವಿಳಂಬವಾದರೆ ಸಮಸ್ಯೆಯಾಗುತ್ತದೆ. ಸರ್ಕಾರದ ಕೆಲಸ ನಿರಂತರ ಚಲನೆಯಲ್ಲಿ ಇರಬೇಕು. ಜನರ ಸುತ್ತ ಅಭಿವೃದ್ಧಿ ಆಗಬೇಕು. ಈ ಸರ್ಕಾರದಲ್ಲಿ ಗುತ್ತಿಗೆದಾರರಿಗೆ ಎಷ್ಟು ಸಮಸ್ಯೆಯಾಗುತ್ತಿದೆ ಎನ್ನುವುದು ಗೊತ್ತಿದೆ ಎಂದು ಹೇಳಿದರು.
ನಾವು ಇದ್ದಾಗ ಸಣ್ಣ ಗುತ್ತಿಗೆದಾರರು, ಮಧ್ಯಮ ಗುತ್ತಿಗೆದಾರರು, ದೊಡ್ಡ ಗುತ್ತಿಗೆದಾರರಿಗೆ ಎಲ್ಲರನ್ನೂ ತೊಂದರೆಯಾಗದಂತೆ ಸಮಾನವಾಗಿ ನೋಡಿಕೊಂಡಿದ್ದೇವು. ನಮ್ಮ ಅವಧಿಯಲ್ಲಿ ಬಿಬಿಎಂಪಿ ಗುತ್ತಿಗೆದಾರರು ಅನಗತ್ಯವಾಗಿ 40% ಕಮಿಷನ್ ಆರೋಪ ಮಾಡಿದರು ನಾನು ಅದನ್ನು ಸವಾಲಾಗಿ ತೆಗೆದುಕೊಂಡು ಒಂದಾದರೂ ದಾಖಲೆ ಕೊಡಿ ಎಂದು ಕೇಳಿದೆ. ಆದರೆ, ಅವರ ಬಳಿ ಒಂದೂ ದಾಖಲೆ ಇರಲಿಲ್ಲ.
ಈಗ ಸರ್ಕಾರ ತನಿಖೆಗೆ ಆಯೋಗ ಮಾಡಿದ್ದಾರೆ. ಆದರೆ, ಆರು ತಿಂಗಳಾದರೂ ಇದುವರೆಗೂ ಯಾವುದೇ ತನಿಖೆಯ ಪ್ರಗತಿ ಯಾಗಿಲ್ಲ. ನಾನು ಹಾವೇರಿ ಜಿಲ್ಲೆಯಲ್ಲಿ ಯಾವುದೇ ಗುತ್ತಿಗೆದಾರರ ಕಾರ್ಯಗಳಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಹೇಳಿದರು. ಸಭೆಯಲ್ಲಿ ಗುತ್ತಿಗೆದಾರರಾದ ಮಹೇಶ ಹಾವೇರಿ, ಕುಮಾರ ಹತ್ತಿಕಾಳ, ಶ್ರೀಕಾಂತ ದುಂಡೀಗೌಡ್ರ, ಅರ್ಜುನ ಹಂಚಿನಮನಿ ಹಾಗೂ ಮತ್ತಿತರು ಹಾಜರಿದ್ದರು.
-
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications