ಸಾಗರ ಕ್ಷೇತ್ರದ ಟಿಕೆಟ್ : ಮೌನ ಮುರಿದ ಹರತಾಳು ಹಾಲಪ್ಪ!
ಶಿವಮೊಗ್ಗ, ಮಾರ್ಚ್ 09 : 'ಟಿಕೆಟ್ ಯಾರಿಗೆ ನೀಡಬೇಕು? ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡಲಿದೆ. ಆದರೆ, ನನ್ನ ಬಗ್ಗೆ ರಾಜ್ಯಾಧ್ಯಕ್ಷರು ಒಲವು ತೋರಿದ್ದಾರೆ' ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಹರತಾಳು ಹಾಲಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಹರತಾಳು ಹಾಲಪ್ಪ, ಸಾಗರ ಕ್ಷೇತ್ರದ ಟಿಕೆಟ್ ಹಂಚಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದರು. 'ಸಾಗರ ಕ್ಷೇತ್ರದಲ್ಲಿ ಬಿಜೆಪಿಯಿಂದ ಯಾರು ಸ್ಪರ್ಧಿಸಬೇಕು? ಎಂದು ಹೈ ಕಮಾಂಡ್ ನಿರ್ಧಾರ ಮಾಡಲಿದೆ' ಎಂದರು.
'ನನ್ನ ಮತ್ತು ಬೇಳೂರು ನಡುವೆ ಸಂಬಂಧ ಯಾವಾಗ ಹಳಸಿತ್ತು?, ಯಾವಾಗ ಚೆನ್ನಾಗಿತ್ತು?' ಎಂದು ಪ್ರಶ್ನಿಸಿದ ಹಾಲಪ್ಪ ಅವರು, ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದರು.

'ನಾನು, ಬೇಳೂರು ಗೋಪಾಲಕೃಷ್ಣ, ಕುಮಾರ್ ಬಂಗಾರಪ್ಪ, ಆರಗ ಜ್ಞಾನೇಂದ್ರ ಅವರು ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದೇವೆ. ಈ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ' ಎಂದು ಹಾಲಪ್ಪ ಹೇಳಿದರು.
'ಸಾಗರ ಕ್ಷೇತ್ರದಲ್ಲಿ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ. ಅಧಿಕೃತ ಘೋಷಣೆ ಅಷ್ಟೆ ಬಾಕಿ ಉಳಿದಿದೆ' ಎಂದು ಹತರಾಳು ಹಾಲಪ್ಪ ತಿಳಿಸಿದರು.
ಕೆಲವು ದಿನಗಳ ಹಿಂದೆ ಶಿವಮೊಗ್ಗದಲ್ಲಿ ಮಾತನಾಡಿದ್ದ ಯಡಿಯೂರಪ್ಪ, 'ಸಾಗರದಿಂದ ಸ್ಪರ್ಧಿಸುವಂತೆ ಹರತಾಳು ಹಾಲಪ್ಪ ಅವರಿಗೆ ಸೂಚನೆ ನೀಡಿರುವುದು ಹೌದು. ಬೇಳೂರು ಗೋಪಾಲಕೃಷ್ಣ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇಬ್ಬರನ್ನು ಕರೆದು ಮಾತನಾಡುವೆ. ಬೇಳೂರು ಅವರಿಗೆ ಪಕ್ಷದಲ್ಲಿ ಬೇರೆ ಸ್ಥಾನಮಾನ ನೀಡಲಾಗುತ್ತದೆ' ಎಂದು ಹೇಳಿದ್ದರು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications