ಬಿಎಸ್ವೈ ಸಂಧಾನ ಯಶಸ್ವಿ, ಹಾಲಪ್ಪ ಬಿಜೆಪಿ ಬಿಡಲ್ಲ!
Recommended Video

ಬೆಂಗಳೂರು, ಏಪ್ರಿಲ್ 03 : ಸಾಗರ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಉಂಟಾಗಿದ್ದ ಗೊಂದಲ ಬಗೆಹರಿದಂತೆ ಕಾಣುತ್ತಿದೆ. ಮಾಜಿ ಸಚಿವ ಹರತಾಳು ಹಾಲಪ್ಪ ಅವರು ಬಿಜೆಪಿ ತೊರೆಯುವುದಿಲ್ಲ ಎಂದು ಹೇಳಿದ್ದಾರೆ. ಆದರೆ, ಕ್ಷೇತ್ರದ ಟಿಕೆಟ್ ಯಾರಿಗೆ? ಎಂಬುದು ಇನ್ನೂ ಖಚಿತವಾಗಿಲ್ಲ.
ಹರತಾಳು ಹಾಲಪ್ಪ ಅವರು ಸೋಮವಾರ ರಾತ್ರಿ ಬೆಂಗಳೂರಿನ ಡಾಲರ್ಸ್ ಕಾಲೋನಿಯ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದರು. ಹಾಲಪ್ಪ ಅವರ ಜೊತೆ ಮಾತುಕತೆ ನಡೆಸಿರುವ ಯಡಿಯೂರಪ್ಪ ಅವರ ಮನವೊಲಿಸಲು ಯಶಸ್ವಿಯಾಗಿದ್ದಾರೆ.
ಹಾಲಪ್ಪ ಅವರು ಸಾಗರ ಕ್ಷೇತ್ರದಿಂದ ಅಭ್ಯರ್ಥಿಯಾಗುವುದು ಖಚಿತ ಎಂದು ತಿಳಿದುಬಂದಿದೆ. ಇದರಿಂದಾಗಿ ಬೇಳೂರು ಗೋಪಾಲಕೃಷ್ಣ ಅವರ ಮುಂದಿನ ನಡೆ ಏನು? ಎಂಬುದು ಕುತೂಹಲ ಹುಟ್ಟುಹಾಕಿದೆ.

ಕಳೆದ ಗುರುವಾರ ಬೇಳೂರು ಗೋಪಾಲಕೃಷ್ಣ ಮತ್ತು ಹರತಾಳು ಹಾಲಪ್ಪ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಯಾಗಿದ್ದರು. ಈ ಸಂದರ್ಭದಲ್ಲಿ ಬೇಳೂರು ಗೋಪಾಲಕೃಷ್ಣ ಅವರಿಗೆ ಟಿಕೆಟ್ ನೀಡುವ ಬಗ್ಗೆ ಸುದ್ದಿ ಹಬ್ಬಿತ್ತು.
ಇದರಿಂದಾಗಿ ಸಾಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾದ ಹರತಾಳು ಹಾಲಪ್ಪ ಅಸಮಾಧಾನಗೊಂಡಿದ್ದರು. ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಸೋಮವಾರ ಹಾಲಪ್ಪ ಅವರು ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿದ್ದಾರೆ.
ಹಾಲಪ್ಪ, ಯಡಿಯೂರಪ್ಪ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶೋಭಾ ಕರಂದ್ಲಾಜೆ, 'ಟಿಕೆಟ್ ವಿಚಾರದಲ್ಲಿ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಆ ತೀರ್ಮಾನಕ್ಕೆ ಅವರು ಬದ್ಧರಾಗಿರುವರು ಎಂಬ ವಿಶ್ವಾಸವಿದೆ. ಹಾಲಪ್ಪ ಅವರಿಗೆ ಬೇಸರವಾಗಿದ್ದು ನಿಜ, ಈಗ ಖುಷಿಯಾಗಿದ್ದಾರೆ' ಎಂದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications