ಕಾರ್ಕಳ ಕ್ಷೇತ್ರ ದಿಂದ ಕಣಕ್ಕಿಳಿಯಲಿದ್ದಾರೆ ಹರ್ಷ ಮೊಯ್ಲಿ?
ಉಡುಪಿ, ಫೆಬ್ರವರಿ 7: ಅಷ್ಟಮಠಗಳ ನಾಡು ಉಡುಪಿಯಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರತೊಡಗಿದೆ. ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಆಖಾಡಕ್ಕಿಳಿಯಲು ಉತ್ಸುಕರಾಗಿರುವ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ.
ಮುಖ್ಯವಾಗಿ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪಟ್ಟಿಗೆ ಇನ್ನೊಂದು ಹೆಸರು ಸೇರ್ಪಡೆಗೊಂಡಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಎಂ . ವೀರಪ್ಪ ಮೊಯ್ಲಿ ಅವರ ಪುತ್ರ ಹರ್ಷ ಮೊಯ್ಲಿ ಹೆಸರು ಕಾರ್ಕಳ ವಿಧಾನಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಕೇಳಿ ಬರುತ್ತಿದೆ.
ವೀರಪ್ಪ ಮೊಯ್ಲಿ ಕಾರ್ಕಳ ಮೂಲದವರಾಗಿದ್ದು, ಸತತ ಆರು ಬಾರಿ ಇಲ್ಲಿ ಗೆಲುವು ಸಾಧಿಸಿದ್ದರು. ಜತೆಗೆ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವಾಗಲೇ ಕರ್ನಾಟಕದ ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದರು.

ಪುತ್ರನಿಗೆ ಕೊಡುಗೆ
ಈ ಹಿನ್ನಲೆಯಲ್ಲಿ ತಮ್ಮ ಮಗ ಹರ್ಷ ಮೊಯ್ಲಿ ಅವರನ್ನು ರಾಜಕೀಯವಾಗಿ ಮುನ್ನೆಲೆಗೆ ತರಲು ಅವರು ಕಾರ್ಕಳ ಕ್ಷೇತ್ರವನ್ನು ಆಯ್ದುಕೊಂಡಿದ್ದಾರೆ ಎಂದು ಹೇಳಲಾಗಿದೆ.

ಆಂತರಿಕ ಚುನಾವಣೆಯಲ್ಲಿ ಮುಗ್ಗರಿಸಿದ್ದ ಹರ್ಷ
ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಹರ್ಷ ಮೊಯ್ಲಿ ಅವರನ್ನು ಕಣಕ್ಕಿಳಿಸಲು ವೀರಪ್ಪ ಮೊಯ್ಲಿ ಬಹಳ ಪ್ರಯತ್ನ ಪಟ್ಟಿದ್ದರು. ಒಂದು ಹಂತದಲ್ಲಿ ಹರ್ಷ ಮೊಯ್ಲಿ ಪ್ರಚಾರ ಕೂಡ ಆರಂಭಿಸಿದ್ದರು. ಆದರೆ ಆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಲ್ಲಿ ನಡೆದ ಆಂತರಿಕ ಚುನವಾಣೆಯಲ್ಲಿ ಹಿರಿಯ ಮುಖಂಡ ಜನಾರ್ಧನ ಪೂಜಾರಿ ಅವರು ಹರ್ಷ ಮೊಯ್ಲಿ ವಿರುದ್ಧ ಜಯ ಸಾಧಿಸಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು.

ಶತಾಯಗತಾಯ ಪ್ರಯತ್ನ
ಆದರೆ ಈ ಬಾರಿ ತಮ್ಮ ತವರೂರಾದ ಕಾರ್ಕಳದ ಮೂಲಕ ಹರ್ಷ ಮೊಯ್ಲಿ ಅವರನ್ನು ರಾಜಕೀಯಕ್ಕೆ ಕರೆ ತರಲು ವೀರಪ್ಪ ಮೊಯ್ಲಿ ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಈ ಕುರಿತು ಈಗಾಗಲೇ ಕಾರ್ಕಳದಲ್ಲಿರುವ ತಮ್ಮ ಆಪ್ತ ವಲಯಕ್ಕೆ ದೂರವಾಣಿ ಕರೆ ಮಾಡಿ ಈ ವಿಷಯದ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹಾಲಿ ಶಾಸಕ ಸುನೀಲ್ ಕುಮಾರ್
ಕಾರ್ಕಳ ಕ್ಷೇತ್ರ ಬಿಜೆಪಿ ಹಿಡಿತದಲ್ಲಿದ್ದು ಸುನಿಲ್ ಕುಮಾರ್ ಶಾಸಕರಾಗಿದ್ದಾರೆ. ಈ ಬಾರಿಯೂ ಬಿಜೆಪಿಯ ಅಭ್ಯರ್ಥಿಯಾಗಿ ಅವರೇ ಕಣಕ್ಕಿಳಿಯಲಿದ್ದಾರೆ. ಆದರೆ ಕಾಂಗ್ರೆಸ್ ನಲ್ಲಿ ಮಾಜಿ ಶಾಸಕ ಗೋಪಾಲ ಭಂಡಾರಿ, ಮುನಿಯಾಲು ಉದಯಕುಮಾರ್ ಶೆಟ್ಟಿ ಅವರ ಹೆಸರು ಈ ಬಾರಿಯ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಈಗ ಹರ್ಷ ಮೊಯ್ಲಿ ಹೆಸರು ಕೂಡ ಆಕಾಂಕ್ಷಿಗಳ ಪಟ್ಟಿಯಲ್ಲಿ ಸೇರ್ಪಡೆ ಗೊಂಡಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications