ಹಾಸನಾಂಬ ಉತ್ಸವ: ಆದಾಯದಲ್ಲಿ ಹೊಸ ಇತಿಹಾಸ ಸೃಷ್ಟಿ!
Hasanamba Utsav; crores of revenue: ಹಾಸನಾಂಬೆ ದೇವಿಯ ದರ್ಶನೋತ್ಸವ ಮುಗಿದ ಬೆನ್ನಲ್ಲೇ ಹುಂಡಿ ಎಣಿಕೆ ನಡೆದಿದ್ದು, ಹಲವು ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿದೆ. ಹಾಸನಾಂಬೆ ದರ್ಶನೋತ್ಸವವು ವರ್ಷಕ್ಕೆ ಒಮ್ಮೆ ಮಾತ್ರ ನಡೆಯುತ್ತದೆ. ಈ ಬಾರಿ ಹಾಸನಾಂಬೆ ದರ್ಶನ ಪಡೆಯಲು ಭಕ್ತಾಧಿಗಳು ಸಾಕಷ್ಟು ಸವಾಲು ಎದುರಿಸಿದ್ದರು. ಸರತಿ ಸಾಲಿನಲ್ಲಿ ಗಂಟೆ ಗಟ್ಟಲೆ ನಿಂತು ಪರದಾಡಿದ್ದರು. ಇದರ ಹೊರತಾಗಿಯೂ ಈ ಬಾರಿ ಕೋಟ್ಯಾಂತರ ರೂಪಾಯಿ ಆದಾಯ ಸಂಗ್ರಹವಾಗಿದೆ.
ಹಾಸನಾಂಬ ದರ್ಶನೋತ್ಸವದ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದೆ. ಈ ಬಾರಿಯ ಹಾಸನಾಂಬೆ ದರ್ಶನೋತ್ಸವದಿಂದ ಬರೋಬ್ಬರಿ 12.63 ಕೋಟಿ ರೂಪಾಯಿ ಆದಾಯ (12,63,83,808) ಸಂಗ್ರಹವಾಗಿದೆ. ಹಾಸನಾಂಬ ದೇವಾಲಯದ ಇತಿಹಾಸದಲ್ಲೇ ಅತ್ಯಂತ ಹೆಚ್ಚು ಮೊತ್ತದ ದಾಖಲೆಯ ಆದಾಯ ಇದು ಎಂದು ಹೇಳಲಾಗುತ್ತಿದೆ.

1,000 ಸಾವಿರ ರೂಪಾಯಿ ಹಾಗೂ 300 ರೂಪಾಯಿ ವಿಶೇಷ ಟಿಕೆಟ್ ಮಾರಾಟ ಹಾಗೂ ಲಡ್ಡು ಪ್ರಸಾದದ ಮಾರಾಟದಿಂದಲೇ ದೇವಾಲಯದ ಆಡಳಿತ ಮಂಡಳಿಗೆ ಕೋಟ್ಯಾಂತರ ರೂಪಾಯಿ ಆದಾಯ ಹರಿದು ಬಂದಿದೆ. ಹಾಸನಾಂಬ ದೇವಾಲಯದಲ್ಲಿ ಟಿಕೆಟ್ ಮಾರಾಟ ಹಾಗೂ ಪ್ರಸಾದದಿಂದಲೇ ಬರೋಬ್ಬರಿ 9,67,27,180 ರೂಪಾಯಿ ಆದಾಯ ಸಂಗ್ರಹವಾಗಿರುವುದು ವರದಿಯಾಗಿದೆ.
20 ಲಕ್ಷ ಜನ ಭಕ್ತಾಧಿಗಳ ಭೇಟಿ: ಈ ಬಾರಿ ಬರೋಬ್ಬರಿ 20 ಲಕ್ಷ ಜನ ಭಕ್ತಾಧಿಗಳು ಹಾಸನಾಂಬ ದೇವಿಯ ದರ್ಶನ ಪಡೆದಿದ್ದಾರೆ ನೂಕು ನುಗ್ಗಲು, ಅವ್ಯವಸ್ಥೆ ಹಾಗೂ ಟಿಕೆಟ್ಗಳ ಗೊಂದಲದ ನಡುವೆಯೂ ದಾಖಲೆಯ ಭಕ್ತಾಧಿಗಳು ದೇವಿಯ ದರ್ಶನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಬಾರಿ ಹಾಸನಾಂಬ ದರ್ಶನೋತ್ಸವದಲ್ಲಿ ಬರೋಬ್ಬರಿ 20.40 ಲಕ್ಷ ಜನ ಭಕ್ತಾಧಿಗಳು ಭೇಟಿ ನೀಡಿರುವುದು ದಾಖಲಾಗಿದೆ. ಇದು ಕಳೆದ ಬಾರಿಗಿಂತ ಹೆಚ್ಚಾಗಿದೆ. ಇನ್ನು ಹುಂಡಿ ಸೇರಿ ಕಾಣಿಕೆಯಾಗಿ 2,55,97,567 ರೂಪಾಯಿ ಸಂಗ್ರಹವಾಗಿದ್ದು, ಹಾಸನಾಂಬೆ ದೇಗುಲಕ್ಕೆ ಒಟ್ಟು 12,63,83,808 ರೂಪಾಯಿ ಹರಿದು ಬಂದಿದೆ.
ಚಿನ್ನ, ಬೆಳ್ಳಿ ದಾನ: ಭಕ್ತಾಧಿಗಳು ದೇವರಿಗೆ ಹಣ ಮಾತ್ರವಲ್ಲ. ಚಿನ್ನಾ ಹಾಗೂ ಬೆಳ್ಳಿಯನ್ನೂ ಸಹ ಕಾಣಿಕೆಯಾಗಿ ನೀಡಿದ್ದಾರೆ. ಈ ಬಾರಿ ಹಾಸನಾಂಬ ಉತ್ಸವದಲ್ಲಿ ಬರೋಬ್ಬರಿ 51 ಗ್ರಾಂ ಚಿನ್ನ, 913 ಗ್ರಾಂ ಬೆಳ್ಳಿ ಮೂಲಕ ಭಕ್ತರು ಕಾಣಿಕೆ ನೀಡಿದ್ದಾರೆ. ಇನ್ನು ಹುಂಡಿ ಎಣಿಕೆ ಕಾರ್ಯವು ಸುದೀರ್ಘವಾಗಿ ನಡೆದಿತ್ತು. ಹುಂಡಿ ಎಣಿಕೆಯನ್ನು 500ಕ್ಕೂ ಹೆಚ್ಚು ಜನ ಬರೋಬ್ಬರಿ ಹಾಗೂ ಸತತ 7 ಗಂಟೆಗಳ ಕಾಲ ಎಣಿಸಿದ್ದಾರೆ. ಕೇವಲ 9 ದಿನಗಳಲ್ಲಿ ಹಾಸನಾಂಬ ದೇವಾಲಯದಲ್ಲಿ ಬರೋಬ್ಬರಿ ಕೋಟಿ ಕೋಟಿ ಆದಾಯ ಹರಿದು ಬಂದಿದೆ.
ಹಾಸನದ ಪ್ರಸಿದ್ಧ ದೇವಾಲಯಗಳಲ್ಲಿ ಹಾಗೂ ಕರ್ನಾಟಕದ ಪ್ರಸಿದ್ಧ ದೇವಾಲಯಗಳಲ್ಲಿ ಹಾಸನಾಂಬ ದೇವಾಲಯ ವಿಶೇಷವಾಗಿದೆ. ಈ ಬಾರಿ ದೇವಿಯ ದರ್ಶನ ಮಾಡಲು ಭಕ್ತಾಧಿಗಳು ಸಾಕಷ್ಟು ಕಷ್ಟ ಅನುಭವಿಸಿದ್ದಾರೆ. ವರ್ಷದಲ್ಲಿ ಒಮ್ಮೆ ಮಾತ್ರ ದೇವಸ್ಥಾನದ ಬಾಗಿಲುಗಳನ್ನು ತೆಗೆಯಲಾಗುತ್ತದೆ.
ರಾಜ್ಯದ ಪ್ರಸಿದ್ಧ ದೇವಸ್ಥಾನಗಳಲ್ಲಿ ಹಾಸನದ ಹಾಸನಾಂಬ ದೇವಾಲಯವೂ ಒಂದಾಗಿದೆ. ಈ ದೇವಾಲಯ ಹಲವು ಕಾರಣಗಳಿಗೆ ಪ್ರಸಿದ್ಧಿ ಗಳಿಸಿದೆ. ವರ್ಷದಲ್ಲಿ ಒಮ್ಮೆ ಮಾತ್ರ ಈ ದೇವಾಲಯದ ಬಾಗಿಲುಗಳನ್ನು ತೆಗೆಯುವುದು ಹಾಗೂ ವರ್ಷ ಪೂರ್ತಿ ಇಲ್ಲಿ ದೇವಿಗೆ ಇರಿಸಿದ ದೀಪ ಉರಿಯುತ್ತದೆ ಎನ್ನುವುದು ವಿಶೇಷವಾಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications