Hasanamba Temple: ಹಾಸನಾಂಬ ದರ್ಶನಕ್ಕೆ ಹೋಗುವವರಿಗೆ ಮಹತ್ವದ ಸುದ್ದಿ
ಇತಿಹಾಸ ಪ್ರಸಿದ್ಧ ಹಾಸನಾಂಬ ದರ್ಶನಕ್ಕೆ ಈ ಬಾರಿಯೂ ಭಕ್ತಸಾಗರ ಹರಿದುಬರುತ್ತಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಭಕ್ತಾದಿಗಳಿಗೆ ದರ್ಶನಕ್ಕೆ ಅಡಚಣೆ ರಹಿತ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ ಮಹತ್ವದ ವಿಚಾರವೊಂದನ್ನು ಭಕ್ತಾದಿಗಳ ಗಮನಕ್ಕೆ ತಂದಿದ್ದಾರೆ. ಅಕ್ಟೋಬರ್ 22ರ ಬುಧವಾರದಂದು ದರ್ಶನವು ಬೆಳಿಗ್ಗೆ 5.30ರಿಂದ ಸಂಜೆ 7 ರವರೆಗೆ ತಡೆರಹಿತವಾಗಿರುತ್ತದೆ ಎಂದು ತಿಳಿಸಿದ್ದಾರೆ.
ಬುಧವಾರ ಬೆಳಿಗ್ಗೆ 5.30ರಿಂದ ಸಂಜೆ 7ರವರೆಗೆ ತಡೆರಹಿತ ದರ್ಶನಕ್ಕೆ ಅವಕಾಶವಿರುತ್ತದೆ. ಬುಧವಾರ ಮಧ್ಯಾಹ್ನ ನೈವೇದ್ಯ ಪೂಜೆ ಇರುವುದಿಲ್ಲ. ಹಾಗಾಗಿ ದಿನವಿಡೀ ಯಾವುದೇ ಅಡೆತಡೆ ಇಲ್ಲದೆ ದರ್ಶನ ಮುಂದುವರೆಯಲಿದೆ. ಸಂಜೆ 7 ಗಂಟೆಗೆ ಸಾರ್ವಜನಿಕ ದರ್ಶನ ನಿಲ್ಲಲಿದೆ. ದರ್ಶನ ಪಡೆಯಬಯಸುವವರು ಸಂಜೆ 5 ಗಂಟೆಯೊಳಗೆ ಬರಬೇಕು. ಗುರುವಾರದಂದು ಸಾರ್ವಜನಿಕರಿಗೆ ಪ್ರವೇಶವಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಮಂಗಳವಾರ ದರ್ಶನ ಬಹಳ ಸರಾಗವಾಗಿ ನಡೆಯುತ್ತಿದೆ. ಸೋಮವಾರ ಸುಮಾರು 2 ಲಕ್ಷ ಜನರು ದರ್ಶನ ಪಡೆದಿದ್ದಾರೆ. ಪ್ರಸ್ತುತ ವರ್ಷ ಇಲ್ಲಿಯವರೆಗೆ 23 ಲಕ್ಷ ಜನರು ದರ್ಶನ ಪಡೆದಿದ್ದಾರೆ. ಕಳೆದ ವರ್ಷದ ಒಟ್ಟಾರೆ 17.46 ಲಕ್ಷ ಜನ ದರ್ಶನ ಪಡೆದಿದ್ದರು. ಈ ವರ್ಷ 300ರೂ ಹಾಗೂ 1000 ರೂ. ಟಿಕೆಟ್ ಸಾಲಿನಲ್ಲಿ 3,40,260 ಜನರು ದರ್ಶನ ಪಡೆದಿದ್ದಾರೆ. ಕಳೆದ ವರ್ಷ ಈ ಸಾಲಿನಲ್ಲಿ ಒಟ್ಟಾರೆ 1,29,956 ಜನ ದರ್ಶನ ಪಡೆದಿದ್ದರು ಎಂದು ವಿವರಿಸಿದ್ದಾರೆ.
ಬುಧವಾರದವರೆಗೆ ಮಾತ್ರ ದರ್ಶನಕ್ಕೆ ಅವಕಾಶವಿದೆ. ಮಂಗಳವಾರ ಮಧ್ಯಾಹ್ನ 3.30 ರವರೆಗೆ ನೈವೇದ್ಯ ಇದಿದ್ದರಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರಲಿಲ್ಲ. ಕ್ಯೂ ಲೈನ್ಗಳ ಪ್ರವೇಶ ದ್ವಾರಗಳು ರಾತ್ರಿ 9 ಗಂಟೆಗೆ ಮುಚ್ಚಲ್ಪಡುತ್ತವೆ. ದರ್ಶನ ಮಧ್ಯರಾತ್ರಿ 12 ಗಂಟೆಗೆ ನಿಲ್ಲುತ್ತದೆ. ಬುಧವಾರ ದರ್ಶನ ಬೆಳಿಗ್ಗೆ 5ರಿಂದಲೇ ಪ್ರಾರಂಭವಾಗಿ ಸಂಜೆ 7 ಗಂಟೆಯವರೆಗೆ ನಿರಂತರವಾಗಿ ಮುಂದುವರಿಯುತ್ತದೆ. ಸಾರ್ವಜನಿಕರ ದರ್ಶನ ಸಂಜೆ 7 ಗಂಟೆಗೆ ಮುಗಿಯುತ್ತದೆ. ಅದಾದ ನಂತರ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಗುರುವಾರ ಕೂಡ ದರ್ಶನ ಇರುವುದಿಲ್ಲ ಎಂದು ಹೇಳಿದ್ದಾರೆ.
ಎಲ್ಲ ದೇವಾಲಯಗಳಲ್ಲಿ ಗೋಪೂಜೆ
ಅಕ್ಟೋಬರ್ 22ರಂದು ಬಲಿಪಾಡ್ಯಮಿ ಪ್ರಯುಕ್ತ ರಾಜ್ಯದ ಎಲ್ಲ ಮುಜರಾಯಿ ದೇವಾಲಯಗಳಲ್ಲಿ ಶಾಸ್ತ್ರೋಕ್ತ ಗೋಪೂಜೆ ನೆರವೇರಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಗೋವಿನ ಮಹತ್ವ ಮತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ದೇವಸ್ಥಾನಗಳಲ್ಲಿ ಗೋವುಗಳಿಗೆ ಸ್ನಾನ, ಅರಿಶಿನ-ಕುಂಕುಮ ಮತ್ತು ಹೂವುಗಳಿಂದ ಅಲಂಕರಿಸಿ, ನಂತರ, ಅಕ್ಕಿ, ಬೆಲ್ಲ, ಹಣ್ಣುಗಳನ್ನು ಒಳಗೊಂಡ 'ಗೋಗ್ರಾಸ'ವನ್ನು ನೀಡಿ, ಸಂಜೆ ವಿಧಿವತ್ತಾಗಿ ಗೋಪೂಜೆ ನಡೆಯಲಿದೆ ಎಂದು ಹೇಳಿದ್ದಾರೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications