ಸಕಲೇಶಪುರದಲ್ಲಿ ಬಿಜೆಪಿ vs ಕಾಂಗ್ರೆಸ್ ಬಾಡೂಟದ 'ಪಾರ್ಟಿ ಪಾಲಿಟಿಕ್ಸ್
ಸಕಲೇಶಪುರ, ಜನವರಿ 22: ಕರ್ನಾಟಕದ ಸಮಶೀತೋಷ್ಣ ವಲಯ ಎನಿಸಿಕೊಂಡು ಜೈವಿಕ ವೈವಿಧ್ಯತೆಯುಳ್ಳ ವಿಧಾನಸಭಾ ಕ್ಷೇತ್ರ ಸಕಲೇಶಪುರದಲ್ಲೀಗ ಬಾಡೂಟ, ಪಾರ್ಟಿ ಮೋಜು ಮಸ್ತಿಯ ಪಾಲಿಟಿಕ್ಸ್ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದವರು ಇಲ್ಲಿನ ವಾತಾವರಣ ಹಾಳುಗೆಡವುತ್ತಿದ್ದಾರೆ ಎಂದು ಬಿಜೆಪಿ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಆಲೂರು- ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ ಮುಂಬರುವ ಚುನಾವಣೆಯಲ್ಲಿ ಅಭ್ಯರ್ಥಿಯಾಗಲು ಬಯಸಿರುವ ಅನೇಕ ಮಂದಿ ಕಾಂಗ್ರೆಸ್ಸಿಗರು ನಮ್ಮ ಸುಂದರ ಸಾಮಾಜಿಕ ಪರಿಸರವನ್ನು ಹಾಳುಗೆಡವುತ್ತಿದ್ದಾರೆ. ಬೆಂಗಳೂರು ಮೂಲದ ಅಭ್ಯರ್ಥಿಗಳು ಇಲ್ಲಿಗೆ ಬಂದು ಕ್ಷೇತ್ರದೆಲ್ಲೆಡೆ ಮದ್ಯಪಾನ, ಬಾಡೂಟದ ಪಾರ್ಟಿಗಳನ್ನು ಆಯೋಜಿಸುತ್ತಿದ್ದಾರೆ. ಈ ಪಾರ್ಟಿಗಳಲ್ಲಿ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಕತ್ತು ಹಿಸುಕುವ ಕಾರ್ಯ ಇದಾಗಿದೆ ಎಂದು ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಆರೋಪಿಸಿದ್ದಾರೆ.
ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾದ ಡಾ. ನಾರಾಯಣಸ್ವಾಮಿ, ಮಲ್ಲಿಗೆಬಾಳು ದ್ಯಾವಪ್ಪ, ಬಿ.ಸಿ ರಾಜೇಶ್, ಎಂ ಚಂದ್ರು, ಭಾಗ್ಯ ಕಲಿವೀರ್ ಮುಂತಾದವರು ಸುದ್ದಿಗೋಷ್ಠಿ ನಡೆಸಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ಜಿಲ್ಲೆಯಲ್ಲಿ ಸುಮಾರು 4 ಲಕ್ಷಕ್ಕೂ ಅಧಿಕ ಪರಿಶಿಷ್ಟ ಜಾತಿ ಜನಾಂಗದಲ್ಲಿವರಿದ್ದಾರೆ. ಈ ಕ್ಷೇತ್ರದಲ್ಲಿ ಹುಟ್ಟಿ ಬೆಳೆದ ಜನರ ಆಶೋತ್ತರಗಳನ್ನು ಹತ್ತಿರದಿಂದ ಬಲ್ಲವರಿಗೆ ಮಾತ್ರ ಇಲ್ಲಿ ಸ್ಪರ್ಧಿಸಲು ಅವಕಾಶ ಸಿಗಬೇಕು. ಎಲ್ಲೋ ನೆಲೆಸಿ, ಯಾವುದೋ ಮಾರ್ಗದಲ್ಲಿ ಹಣ ಸಂಪಾದನೆ ಮಾಡಿಕೊಂಡು, ಅಕ್ರಮವಾಗಿ ಇಲ್ಲಿ ಜನ ಸಂಪಾದನೆ ಮಾಡಲು ಬರುವವರಿಗೆ ತಕ್ಕ ಪಾಠ ಕಲಿಸಿ ಎಂದು ಸಾರ್ವಜನಿಕರಲ್ಲಿ ಕೋರಿದರು.
ಡಾ. ಅಂಬೇಡ್ಕರ್ ಅವರ ಕನಸಿನ ಫಲವಾಗಿ ದೊರೆತಿರುವ ಈ ಮೀಸಲು ಕ್ಷೇತ್ರದಲಿ ಮದ್ಯ ಹಾಗೂ ಬಾಡೂಟದ ಮೂಲಕ ಆಮಿಷ ತೋರಿಸಿ, ಪ್ರಜೆಗಳ ಸ್ವಾಭಿಮಾನಕ್ಕೆ ಧಕ್ಕೆ ತರುವವರನ್ನು ಎಂದಿಗೂ ನಿಮ್ಮ ಬಳಿ ಸುಳಿದಂತೆ ನೋಡಿಕೊಳ್ಳಿ ಎಂದು ಆಗ್ರಹಿಸಿದರು.
ಮೀಸಲು ಕ್ಷೇತ್ರವಾಗಿರುವ ಸಕಲೇಶಪುರದಲ್ಲಿ ಪರಿಶಿಷ್ಟ ಜಾತಿ, ಪಂಗಡದ ಮತಗಳಲ್ಲದೆ ಒಕ್ಕಲಿಗ, ಲಿಂಗಾಯತ ಮತಗಳು ಪ್ರಮುಖ ಪಾತ್ರವಹಿಸಲಿವೆ. ಜೆಡಿಎಸ್ ಹಾಗೂ ಬಿಜೆಪಿ ನಡುವೆ ಮತ್ತೊಮ್ಮೆ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ. ಕಳೆದ ಬಾರಿ ಜೆಡಿಎಸ್ ನ ಎಚ್ ಕೆ ಕುಮಾರಸ್ವಾಮಿ ಅವರು 63,602 ಮತಗಳನ್ನು ಪಡೆದು ಕಾಂಗ್ರೆಸ್ಸಿನ ಡಿ ಮಲ್ಲೇಶ್ (57,110) ಅವರನ್ನು ಸೋಲಿಸಿ, ಜಯಭೇರಿ ಬಾರಿಸಿದ್ದರು. ಈ ಬಾರಿ ಬದಲಾದ ಪರಿಸ್ಥಿತಿಯಲ್ಲಿ ಬಿಜೆಪಿಯ ನಿರ್ವಾಣಯ್ಯ ಅವರು ಹೆಚ್ಚಿನ ಪೈಪೋಟಿ ನೀಡುವ ಸಾಧ್ಯತೆಯಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications