ಮಡಿಕೇರಿಯಂತೆ ಹಾಸನದಲ್ಲಿ ಗಲಾಟೆ, ಇಂದು ಬಂದ್
ಹಾಸನ, ನವೆಂಬರ್ 13 : ಮಡಿಕೇರಿ ಗಲಭೆ ಹಾಸನಕ್ಕೂ ಹಬ್ಬಿದೆ. ಗುರುವಾರ ಸಂಜೆ ಹಾಸನದಲ್ಲಿ ಕಲ್ಲು ತೂರಾಟ ನಡೆದಿದೆ. ಬೈಕುಗಳಿಗೆ ಬೆಂಕಿ ಹಚ್ಚಲಾಗಿದೆ. ಶುಕ್ರವಾರ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. [ಹಾಸನಾಂಬೆ ದರ್ಶನ ಪಡೆಯಲು ಇಂದು ಕೊನೆ ದಿನ]
ಹಿಂದೂ ಪರ ಸಂಘಟನೆಗಳು ಶುಕ್ರವಾರ ಹಾಸನ ಬಂದ್ಗೆ ಕರೆ ನೀಡಿದ್ದವು. ಇದರ ಅಂಗವಾಗಿ ಗುರುವಾರ ಸಂಜೆ ಬೈಕ್ ಜಾಥಾ ನಡೆಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಟಿಪ್ಪು ಸುಲ್ತಾನ್ ವಿರುದ್ಧವಾಗಿ ಅವಹೇಳನಕಾರಿ ಘೋಷಣೆ ಕೂಗಿದ್ದು, ಕಲ್ಲು ತೂರಾಟ ನಡೆದಿದೆ. [ಇಂದು ಮಂಗಳೂರು ಬಂದ್]

ಹಲವು ಮನೆ, 8 ಕಾರುಗಳ ಮೇಲೆ ಗುರುವಾರ ಸಂಜೆ ಕಲ್ಲು ತೂರಾಟ ನಡೆಸಲಾಗಿದೆ. 10 ಬೈಕ್ಗಳಿಗೆ ಬೆಂಕಿ ಹಚ್ಚಲಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ['ನವೆಂಬರ್ 10ರಂದು ಟಿಪ್ಪು ಜಯಂತಿ ಏಕೆ?']
ಶಾಲಾ-ಕಾಲೇಜಿಗೆ ರಜೆ : ಶುಕ್ರವಾರ ಹಿಂದೂಪರ ಸಂಘಟನೆಗಳು ಹಾಸನ ಬಂದ್ಗೆ ಕರೆ ನೀಡಿರುವುದರಿಂದ ಸೆಕ್ಷನ್ 144 ಅನ್ವಯ ಮೂರು ದಿಗಳ ಕಾಲ ನಿಷೇಧಾಜ್ಞೆ ಹೊರಡಿಸಲಾಗಿದೆ. ಶುಕ್ರವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಹಾಸನಾಂಬೆ ದರ್ಶನಕ್ಕೆ ಅವಕಾಶ : ಹಾಸನದಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದರೂ ಪುರಾಣ ಪ್ರಸಿದ್ಧ ಹಾಸನಾಂಬೆ ದೇವಾಲಯದಲ್ಲಿ ಭಕ್ತರು ದರ್ಶನ ಮಾಡಲು ಅವಕಾಶ ಕಲ್ಪಿಸಲಾಗಿದೆ. ನ.5 ರಂದು ದೇವಾಲಯದ ಬಾಗಿಲು ತೆರೆದಿದ್ದು, ಇಂದು ದೇವಿಯ ದರ್ಶನ ಪಡೆಯಲು ಕೊನೆಯ ದಿನವಾಗಿದೆ.












Click it and Unblock the Notifications